<p><strong>ಮೈಸೂರು:</strong> ರಾಜ್ಯದಾದ್ಯಂತ 2,736 ಎಕರೆ ಪ್ರದೇಶದಲ್ಲಿ 19 ಹೊಸ ವಸತಿ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಶುಕ್ರವಾರ ಇಲ್ಲಿ ಹೇಳಿದರು.</p>.<p>₹ 1,188 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, 41,040 ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದಲ್ಲದೆ, 357 ಎಕರೆ ಪ್ರದೇಶದಲ್ಲಿ ₹ 159 ಕೋಟಿ ಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಂಟು ವಸತಿ ಯೋಜನೆಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ರಾಜ್ಯದಾದ್ಯಂತ 2,015 ಎಕರೆ ಪ್ರದೇಶದಲ್ಲಿ ₹894 ಕೋಟಿ ವೆಚ್ಚದ 16 ವಸತಿ ಯೋಜನೆಗಳು ಪ್ರಗತಿಯಲ್ಲಿವೆ. ಅವುಗಳಿಂದ 25,732 ನಿವೇಶನಗಳು ಮತ್ತು 70 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಬೆಂಗಳೂರಿನ ಜಿಗಣಿ ಹೋಬಳಿಯಲ್ಲಿ (ಸೂರ್ಯನಗರ 4ನೇ ಹಂತ) 1,938 ಎಕರೆಯಲ್ಲಿ ₹ 3,455 ಕೋಟಿ ಮೊತ್ತದಲ್ಲಿ ಅತ್ಯಾಧುನಿಕ ಮೂಲಸೌಕರ್ಯವುಳ್ಳ 30 ಸಾವಿರ ನಿವೇಶನಗಳ ಪ್ರಧಾನಮಂತ್ರಿ ಟೌನ್ಶಿಪ್ ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು.</p>.<p>ಈಗಿನ ಸರ್ಕಾರದ ಅವಧಿಯಲ್ಲಿ ಇದುವರೆಗೆ ವಿವಿಧ ಯೋಜನೆಗಳಡಿ 1,134 ನಿವೇಶನಗಳು, 380 ಮನೆಗಳು, 16 ಸಿ.ಎ ನಿವೇಶನಗಳು ಮತ್ತು ಆರು ವಾಣಿಜ್ಯ ನಿವೇಶನಗಳು ಸೇರಿ ಒಟ್ಟು 1,536 ಸ್ವತ್ತುಗಳನ್ನು ಹಂಚಿಕೆ ಮಾಡಲಾಗಿದ್ದು, ₹ 400 ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದರು.</p>.<p><strong>ಶೇ 50 ರಿಯಾಯಿತಿ ಬೆಲೆಯಲ್ಲಿ ನಿವೇಶನ</strong></p>.<p>ಅಂಗವಿಕಲರು ಮತ್ತು ವಿಧವೆಯರಿಗೆ ಶೇ 50 ರಷ್ಟು ರಿಯಾಯಿತಿ ದರದಲ್ಲಿ ನಿವೇಶನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.</p>.<p>ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಬಡವರಿಗಾಗಿ ತಲಾ 20 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಡಿ 1.62 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜ್ಯದಾದ್ಯಂತ 2,736 ಎಕರೆ ಪ್ರದೇಶದಲ್ಲಿ 19 ಹೊಸ ವಸತಿ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಶುಕ್ರವಾರ ಇಲ್ಲಿ ಹೇಳಿದರು.</p>.<p>₹ 1,188 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, 41,040 ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದಲ್ಲದೆ, 357 ಎಕರೆ ಪ್ರದೇಶದಲ್ಲಿ ₹ 159 ಕೋಟಿ ಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಂಟು ವಸತಿ ಯೋಜನೆಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ರಾಜ್ಯದಾದ್ಯಂತ 2,015 ಎಕರೆ ಪ್ರದೇಶದಲ್ಲಿ ₹894 ಕೋಟಿ ವೆಚ್ಚದ 16 ವಸತಿ ಯೋಜನೆಗಳು ಪ್ರಗತಿಯಲ್ಲಿವೆ. ಅವುಗಳಿಂದ 25,732 ನಿವೇಶನಗಳು ಮತ್ತು 70 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಬೆಂಗಳೂರಿನ ಜಿಗಣಿ ಹೋಬಳಿಯಲ್ಲಿ (ಸೂರ್ಯನಗರ 4ನೇ ಹಂತ) 1,938 ಎಕರೆಯಲ್ಲಿ ₹ 3,455 ಕೋಟಿ ಮೊತ್ತದಲ್ಲಿ ಅತ್ಯಾಧುನಿಕ ಮೂಲಸೌಕರ್ಯವುಳ್ಳ 30 ಸಾವಿರ ನಿವೇಶನಗಳ ಪ್ರಧಾನಮಂತ್ರಿ ಟೌನ್ಶಿಪ್ ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು.</p>.<p>ಈಗಿನ ಸರ್ಕಾರದ ಅವಧಿಯಲ್ಲಿ ಇದುವರೆಗೆ ವಿವಿಧ ಯೋಜನೆಗಳಡಿ 1,134 ನಿವೇಶನಗಳು, 380 ಮನೆಗಳು, 16 ಸಿ.ಎ ನಿವೇಶನಗಳು ಮತ್ತು ಆರು ವಾಣಿಜ್ಯ ನಿವೇಶನಗಳು ಸೇರಿ ಒಟ್ಟು 1,536 ಸ್ವತ್ತುಗಳನ್ನು ಹಂಚಿಕೆ ಮಾಡಲಾಗಿದ್ದು, ₹ 400 ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದರು.</p>.<p><strong>ಶೇ 50 ರಿಯಾಯಿತಿ ಬೆಲೆಯಲ್ಲಿ ನಿವೇಶನ</strong></p>.<p>ಅಂಗವಿಕಲರು ಮತ್ತು ವಿಧವೆಯರಿಗೆ ಶೇ 50 ರಷ್ಟು ರಿಯಾಯಿತಿ ದರದಲ್ಲಿ ನಿವೇಶನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.</p>.<p>ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಬಡವರಿಗಾಗಿ ತಲಾ 20 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಡಿ 1.62 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>