ಎನ್ ಐ ಎ ದಾಳಿ ಬಳಿಕ ಪ್ರತಿಭಟನೆ, ಶಾಂತಿಕದಡುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವರು ವಶಕ್ಕೆ ಪಡೆಯಲಾಗಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ನಾನಾ ಜಿಲ್ಲೆಯಲ್ಲಿ ಕಾರ್ಯಾಚರಣೆ ಆರಂಭವಾಗಿದ್ದು, ಹಾಸನದಲ್ಲಿ ಸಿದ್ದಿಕ್ ಅವರನ್ನು ಸೋಮವಾರ ವಶಕ್ಕೆ ಪಡೆದ ಸಕಲೇಶಪುರ ಪೊಲೀಸರು, ಸಕಲೇಶಪುರ ಉಪ ವಿಭಾಗಾಧಿಕಾರಿ ಎದುರು ಹಾಜರುಪಡಿಸಿದ್ದಾರೆ.