<p><strong>ಮೈಸೂರು: </strong>ಇಲ್ಲಿನ ನರಸಿಂಹರಾಜ ಮತ್ತು ಲಷ್ಕರ್ ಠಾಣೆ ಪೊಲೀಸರು ಸರಗಳ್ಳತನದ ನಾಲ್ವರು ಆರೋಪಿಗಳನ್ನು ಬಂಧಿಸಿ, ₹ 19.40 ಲಕ್ಷ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಜತೆಗೆ, ಆರೋಪಿಗಳಿಂದ ಚಿನ್ನದ ಸರವನ್ನು ಖರೀದಿಸುತ್ತಿದ್ದ ಆರೋಪಿಯೊಬ್ಬನನ್ನೂ ಪೊಲೀಸರು ಬಂಧಿಸಿದ್ದಾರೆ.</p>.<p>ಎನ್.ಆರ್.ಠಾಣೆ ಪೊಲೀಸರು ಕೆ.ಆರ್.ಮೊಹಲ್ಲಾ ನಿವಾಸಿ ಸಲ್ಮಾನ್ ಖಾನ್ ಅಲಿಯಾಸ್ ಸಲ್ಲು (28), ಶಾಂತಿನಗರ ನಿವಾಸಿ ತಾಜುದ್ದೀನ್ ಅಲಿಯಾಸ್ ಕಾಲು (21) ಹಾಗೂ ಇವರಿಂದ ಚಿನ್ನಾಭರಣಗಳನ್ನು ಖರೀದಿಸುತ್ತಿದ್ದ ಆರೋಪದ ಮೇರೆಗೆ ಅಶೋಕರಸ್ತೆಯ ಮಹಮದ್ ಫರ್ವೇಜ್ (41) ಅವರನ್ನು ಬಂಧಿಸಿದ್ದಾರೆ. ಇವರಿಂದ ₹ ₹ 19.40 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಐಷಾರಾಮಿ ಜೀವನ ನಡೆಸಲು ಆರೋಪಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="Subhead">ಹೆಡ್ಕಾನ್ಸ್ಟೆಬಲ್ ಚಿನ್ನದ ಸರ ಕಸಿದ ಕಳ್ಳರು</p>.<p>ವಿದ್ಯಾರಣ್ಯಪುರಂ ಹೆಡ್ಕಾನ್ಸ್ಟೆಬಲ್ ಇಲಿಯಾಸ್ ಎಂಬುವವರ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಚಿನ್ನದಸರವನ್ನು ಕಳ್ಳರು ಕಸಿದು ಪರಾರಿಯಾಗುವಾಗ ಒಬ್ಬಾತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇಲಿಯಾಸ್ ಅವರು ಸೇಂಟ್ ಫಿಲೊಮಿನಾ ಚರ್ಚ್ ಮುಂಭಾಗ ನಿಂತಿದ್ದಾಗ ಇಬ್ಬರು ಸರವನ್ನು ಕಿತ್ತುಕೊಂಡು ಓಡಿದ್ದಾರೆ. ಬೆನ್ನಟ್ಟಿದ ಸಾರ್ವಜನಿಕರು ಒಬ್ಬನನ್ನು ಹಿಡಿದಿದ್ದಾರೆ. ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ನರಸಿಂಹರಾಜ ಮತ್ತು ಲಷ್ಕರ್ ಠಾಣೆ ಪೊಲೀಸರು ಸರಗಳ್ಳತನದ ನಾಲ್ವರು ಆರೋಪಿಗಳನ್ನು ಬಂಧಿಸಿ, ₹ 19.40 ಲಕ್ಷ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಜತೆಗೆ, ಆರೋಪಿಗಳಿಂದ ಚಿನ್ನದ ಸರವನ್ನು ಖರೀದಿಸುತ್ತಿದ್ದ ಆರೋಪಿಯೊಬ್ಬನನ್ನೂ ಪೊಲೀಸರು ಬಂಧಿಸಿದ್ದಾರೆ.</p>.<p>ಎನ್.ಆರ್.ಠಾಣೆ ಪೊಲೀಸರು ಕೆ.ಆರ್.ಮೊಹಲ್ಲಾ ನಿವಾಸಿ ಸಲ್ಮಾನ್ ಖಾನ್ ಅಲಿಯಾಸ್ ಸಲ್ಲು (28), ಶಾಂತಿನಗರ ನಿವಾಸಿ ತಾಜುದ್ದೀನ್ ಅಲಿಯಾಸ್ ಕಾಲು (21) ಹಾಗೂ ಇವರಿಂದ ಚಿನ್ನಾಭರಣಗಳನ್ನು ಖರೀದಿಸುತ್ತಿದ್ದ ಆರೋಪದ ಮೇರೆಗೆ ಅಶೋಕರಸ್ತೆಯ ಮಹಮದ್ ಫರ್ವೇಜ್ (41) ಅವರನ್ನು ಬಂಧಿಸಿದ್ದಾರೆ. ಇವರಿಂದ ₹ ₹ 19.40 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಐಷಾರಾಮಿ ಜೀವನ ನಡೆಸಲು ಆರೋಪಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="Subhead">ಹೆಡ್ಕಾನ್ಸ್ಟೆಬಲ್ ಚಿನ್ನದ ಸರ ಕಸಿದ ಕಳ್ಳರು</p>.<p>ವಿದ್ಯಾರಣ್ಯಪುರಂ ಹೆಡ್ಕಾನ್ಸ್ಟೆಬಲ್ ಇಲಿಯಾಸ್ ಎಂಬುವವರ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಚಿನ್ನದಸರವನ್ನು ಕಳ್ಳರು ಕಸಿದು ಪರಾರಿಯಾಗುವಾಗ ಒಬ್ಬಾತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇಲಿಯಾಸ್ ಅವರು ಸೇಂಟ್ ಫಿಲೊಮಿನಾ ಚರ್ಚ್ ಮುಂಭಾಗ ನಿಂತಿದ್ದಾಗ ಇಬ್ಬರು ಸರವನ್ನು ಕಿತ್ತುಕೊಂಡು ಓಡಿದ್ದಾರೆ. ಬೆನ್ನಟ್ಟಿದ ಸಾರ್ವಜನಿಕರು ಒಬ್ಬನನ್ನು ಹಿಡಿದಿದ್ದಾರೆ. ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>