ಮೈಸೂರು: ‘ರಾಜ್ಯದಲ್ಲಿ ಇದೀಗ 952 ಜನೌಷಧಿ ಕೇಂದ್ರಗಳಿವೆ. ಮುಂದಿನ 6 ತಿಂಗಳಲ್ಲಿ ಹೊಸದಾಗಿ 500 ಕೇಂದ್ರ ಆರಂಭಿಸಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ಇಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಆರೋಗ್ಯ ಕೇಂದ್ರಗಳಲ್ಲೂ ಜನೌಷಧಿ ಕೇಂದ್ರ ತೆರೆಯುವ ಆಲೋಚನೆಯಿದೆ. ಔಷಧಿ ಬಗ್ಗೆ ಅಪನಂಬಿಕೆ ಬೇಡ. ಗುಣಮಟ್ಟದ ಔಷಧಿಗಳು ಕಡಿಮೆ ದರಕ್ಕೆ ಸಿಗಲಿವೆ’ ಎಂದರು.
‘ದೇಶದಲ್ಲಿ ನಾವು 3ನೇ ಸ್ಥಾನದಲ್ಲಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನೌಷಧಿ ಕೇಂದ್ರ ಆರಂಭಿಸಿ, ಬಡವರು, ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಗೆ ಔಷಧಿ ಪೂರೈಸಿ ಮೊದಲ ಸ್ಥಾನಕ್ಕೆ ಬರುವ ಗುರಿ ಹೊಂದಿದ್ದೇವೆ ಎಂದರು. .