<p><strong>ಮೈಸೂರು</strong>: ಎರಡು ತಿಂಗಳಲ್ಲಿ ಮೈಸೂರು ಜಿಲ್ಲೆಯನ್ನು ಬಯಲು ಶೌಚಮುಕ್ತ ಜಿಲ್ಲೆಯನ್ನಾಗಿ ಘೋಷಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ತಿ.ನರಸೀಪುರ ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳನ್ನು ಬಯಲು ಶೌಚಾಲಯ ಮುಕ್ತ ತಾಲ್ಲೂಕುಗಳನ್ನಾಗಿ ಅಧಿಕೃತವಾಗಿ ಘೋಷಿಸಲಾಯಿತು.</p>.<p>ನಂತರ ಕಾರ್ಯನಿರ್ವಹಣಾಧಿಕಾರಿಗಳಾದ ಹುಣಸೂರಿನ ಕೃಷ್ಣಕುಮಾರ್, ಪಿರಿಯಾಪಟ್ಟಣದ ಬಸವರಾಜು, ತಿ.ನರಸೀಪುರದ ರಾಜು ಅವರನ್ನು ಸನ್ಮಾನಿಸಲಾಯಿತು. ಸ್ವಚ್ಛ ಭಾರತ ಅಭಿಯಾನದ ಸಂಚಾಲಕರಾದ ಹುಣಸೂರಿನ ಮಹದೇವು, ಪಿರಿಯಾಪಟ್ಟಣದ ನಾಗರಾಜು ಹಾಗೂ ತಿ.ನರಸೀಪುರದ ದಿನೇಶಕುಮಾರ್ ಅವರನ್ನು ಅಭಿನಂದಿಸಲಾಯಿತು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಶಿವಶಂಕರ್, ‘ಭಾನುವಾರ ರಾತ್ರಿ ಪಿರಿಯಾಪಟ್ಟಣ ಹಾಗೂ ತಿ.ನರಸೀಪುರ ತಾಲ್ಲೂಕುಗಳನ್ನು ಬಯಲು ಶೌಚಮುಕ್ತ ತಾಲ್ಲೂಕುಗಳಾಗಿ ಘೋಷಿಸಿದ್ದೇವೆ. ಹುಣಸೂರನ್ನೂ ಸೇರಿ ಮೂರು ತಾಲ್ಲೂಕುಗಳ ಅಧಿಕಾರಿಗಳನ್ನು ಸನ್ಮಾನಿಸುವ ಮೂಲಕ ಬಾಕಿ ನಾಲ್ಕು ತಾಲ್ಲೂಕುಗಳಿಗೆ ಪ್ರೇರಣೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>2 ತಿಂಗಳ ಗುರಿ: ‘ಜನವರಿಯಲ್ಲಿ ಮೈಸೂರು ಹಾಗೂ ಕೆ.ಆರ್.ನಗರ ತಾಲ್ಲೂಕು, ಫೆಬ್ರುವರಿಯಲ್ಲಿ ಎಚ್.ಡಿ.ಕೋಟೆ ಹಾಗೂ ನಂಜನಗೂಡು ತಾಲ್ಲೂಕುಗಳನ್ನು ಬಯಲು ಶೌಚಮುಕ್ತವೆಂದು ಘೋಷಿಸಲಾಗುವುದು. ಸಮಯ ಕಡಿಮೆಯಿದೆ; ಗುರಿ ಹಿರಿಯದಿದೆ. ಸ್ವಚ್ಛ ಭಾರತ ಆಂದೋಲನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಜಿಲ್ಲೆಯನ್ನು ಸಂಪೂರ್ಣ ಬಯಲು ಶೌಚಮುಕ್ತ ಎಂದು ಘೋಷಿಸುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಎರಡು ತಿಂಗಳಲ್ಲಿ ಮೈಸೂರು ಜಿಲ್ಲೆಯನ್ನು ಬಯಲು ಶೌಚಮುಕ್ತ ಜಿಲ್ಲೆಯನ್ನಾಗಿ ಘೋಷಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ತಿ.ನರಸೀಪುರ ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳನ್ನು ಬಯಲು ಶೌಚಾಲಯ ಮುಕ್ತ ತಾಲ್ಲೂಕುಗಳನ್ನಾಗಿ ಅಧಿಕೃತವಾಗಿ ಘೋಷಿಸಲಾಯಿತು.</p>.<p>ನಂತರ ಕಾರ್ಯನಿರ್ವಹಣಾಧಿಕಾರಿಗಳಾದ ಹುಣಸೂರಿನ ಕೃಷ್ಣಕುಮಾರ್, ಪಿರಿಯಾಪಟ್ಟಣದ ಬಸವರಾಜು, ತಿ.ನರಸೀಪುರದ ರಾಜು ಅವರನ್ನು ಸನ್ಮಾನಿಸಲಾಯಿತು. ಸ್ವಚ್ಛ ಭಾರತ ಅಭಿಯಾನದ ಸಂಚಾಲಕರಾದ ಹುಣಸೂರಿನ ಮಹದೇವು, ಪಿರಿಯಾಪಟ್ಟಣದ ನಾಗರಾಜು ಹಾಗೂ ತಿ.ನರಸೀಪುರದ ದಿನೇಶಕುಮಾರ್ ಅವರನ್ನು ಅಭಿನಂದಿಸಲಾಯಿತು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಶಿವಶಂಕರ್, ‘ಭಾನುವಾರ ರಾತ್ರಿ ಪಿರಿಯಾಪಟ್ಟಣ ಹಾಗೂ ತಿ.ನರಸೀಪುರ ತಾಲ್ಲೂಕುಗಳನ್ನು ಬಯಲು ಶೌಚಮುಕ್ತ ತಾಲ್ಲೂಕುಗಳಾಗಿ ಘೋಷಿಸಿದ್ದೇವೆ. ಹುಣಸೂರನ್ನೂ ಸೇರಿ ಮೂರು ತಾಲ್ಲೂಕುಗಳ ಅಧಿಕಾರಿಗಳನ್ನು ಸನ್ಮಾನಿಸುವ ಮೂಲಕ ಬಾಕಿ ನಾಲ್ಕು ತಾಲ್ಲೂಕುಗಳಿಗೆ ಪ್ರೇರಣೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>2 ತಿಂಗಳ ಗುರಿ: ‘ಜನವರಿಯಲ್ಲಿ ಮೈಸೂರು ಹಾಗೂ ಕೆ.ಆರ್.ನಗರ ತಾಲ್ಲೂಕು, ಫೆಬ್ರುವರಿಯಲ್ಲಿ ಎಚ್.ಡಿ.ಕೋಟೆ ಹಾಗೂ ನಂಜನಗೂಡು ತಾಲ್ಲೂಕುಗಳನ್ನು ಬಯಲು ಶೌಚಮುಕ್ತವೆಂದು ಘೋಷಿಸಲಾಗುವುದು. ಸಮಯ ಕಡಿಮೆಯಿದೆ; ಗುರಿ ಹಿರಿಯದಿದೆ. ಸ್ವಚ್ಛ ಭಾರತ ಆಂದೋಲನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಜಿಲ್ಲೆಯನ್ನು ಸಂಪೂರ್ಣ ಬಯಲು ಶೌಚಮುಕ್ತ ಎಂದು ಘೋಷಿಸುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>