‘ಸರ್ಕಾರದ ಖರ್ಚಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆ, ಸಮಾರಂಭ ನಡೆಸಿ ಇಂತಹವರಿಗೆ ಮತ ಹಾಕಿ, ಇಂತಹವರನ್ನು ಸೋಲಿಸಿ ಎಂದು ಭಾಷಣ ಮಾಡುತ್ತಿದ್ದಾರೆ. ಪ್ರಚಾರಕ್ಕೆಂದೇ ಇದುವರೆಗೆ ₹ 1,300 ಕೋಟಿ ಖರ್ಚು ಮಾಡಿದ್ದಾರೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ದಿವಾಳಿ ಆಗುವ ಹಂತದಲ್ಲಿದೆ. ಅಧಿಕಾರ ದುರುಪಯೋಗ ಕುರಿತು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ದೂರು ನೀಡಿದ್ದೇನೆ. ಮುಖ್ಯ ಚುನಾವಣಾಧಿಕಾರಿಗೂ ಪತ್ರ ರವಾನಿಸಿದ್ದೇನೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.