<p>ಮೈಸೂರು: ಸೆ. 1ರಿಂದ ದಸರಾ ಆನೆಗಳ ಗಜ ಪಯಣ ಆರಂಭ ಆಗಲಿದ್ದು, ಮೊದಲ ಹಂತದಲ್ಲಿ 9 ಆನೆಗಳು ಸಾಂಸ್ಕೃತಿಕ ನಗರಿಯತ್ತ ಹೆಜ್ಜೆ ಹಾಕಲಿವೆ.</p>.<p>ದಸರಾ ಆನೆಗಳ ಆಯ್ಕೆ ಸಂಬಂಧ ಮಂಗಳವಾರ ನಗರದ ಅರಣ್ಯ ಭವನದಲ್ಲಿ ನಡೆದ ಸಭೆಯಲ್ಲಿ 7 ಗಂಡಾನೆ ಹಾಗೂ 2 ಹೆಣ್ಣಾನೆಗಳನ್ನು ಮೊದಲ ಹಂತದ ಪಯಣಕ್ಕೆ ಆಯ್ಕೆ ಮಾಡಲಾಯಿತು. ನಾಗರಹೊಳೆಯ ಮತ್ತಿಗೋಡು, ಬಳ್ಳೆ, ಭೀಮನಕಟ್ಟೆ, ಮಡಿಕೇರಿ ವಿಭಾಗದ ದುಬಾರೆ, ಬಂಡೀಪುರದ ರಾಮಪುರ ಶಿಬಿರಗಳಿಂದ ಈ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಎರಡನೇ ಹಂತದಲ್ಲಿ 5 ಆನೆಗಳನ್ನು ಕರೆತರುವ ಯೋಚನೆ ಇದ್ದು, ಇನ್ನೂ ಅಂತಿಮಗೊಂಡಿಲ್ಲ.</p>.<p>ಸಭೆಯಲ್ಲಿ ಹುಲಿ ಯೋಜನೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಿ.ವಿ. ರಂಗರಾವ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ರಾ, ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ, ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಪಾಲ್ಗೊಂಡಿದ್ದರು.</p>.<p>ಆಯ್ಕೆಯಾದವು: ಗಂಡಾನೆಗಳಾದ ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ಧಜಂಜಯ, ಗೋಪಿ, ಪಾರ್ಥಸಾರಥಿ ಹಾಗೂ ಹೆಣ್ಣಾನೆಗಳಾದ ವಿಜಯ ಹಾಗೂ ವರಲಕ್ಷ್ಮಿ ಆಯ್ಕೆಯಾಗಿವೆ.</p>.<p>ಮೊದಲ ತಂಡದಲ್ಲಿ ಇರುವ ಆನೆಗಳ ಪೈಕಿ ಅಭಿಮನ್ಯು ಅನುಭವಿ ಆನೆಯಾಗಿದೆ. 5,000–5300 ಕೆ.ಜಿ ತೂಕವಿರುವ ಈ ಆನೆ ಕಳೆದ 20 ವರ್ಷದಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ. 1977ರಲ್ಲಿ ಕೊಡಗಿನ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಇದನ್ನು ಸೆರೆ ಹಿಡಿಯಲಾಗಿತ್ತು.</p>.<p>ಮಹಿಳಾ ಆನೆಗಳ ಪೈಕಿ ವಿಜಯಾ ಆನೆಯು 3,250–3300 ತೂಕವಿದ್ದು, ಸಾಧು ಸ್ವಭಾವದ ಇದನ್ನು 1963ರಲ್ಲಿ ದುಬಾರೆಯಲ್ಲಿ ಸೆರೆ ಹಿಡಿಯಲಾಯಿತು. 11 ವರ್ಷಗಳಿಂದ ದಸರೆಯಲ್ಲಿ ಪಾಲ್ಗೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಸೆ. 1ರಿಂದ ದಸರಾ ಆನೆಗಳ ಗಜ ಪಯಣ ಆರಂಭ ಆಗಲಿದ್ದು, ಮೊದಲ ಹಂತದಲ್ಲಿ 9 ಆನೆಗಳು ಸಾಂಸ್ಕೃತಿಕ ನಗರಿಯತ್ತ ಹೆಜ್ಜೆ ಹಾಕಲಿವೆ.</p>.<p>ದಸರಾ ಆನೆಗಳ ಆಯ್ಕೆ ಸಂಬಂಧ ಮಂಗಳವಾರ ನಗರದ ಅರಣ್ಯ ಭವನದಲ್ಲಿ ನಡೆದ ಸಭೆಯಲ್ಲಿ 7 ಗಂಡಾನೆ ಹಾಗೂ 2 ಹೆಣ್ಣಾನೆಗಳನ್ನು ಮೊದಲ ಹಂತದ ಪಯಣಕ್ಕೆ ಆಯ್ಕೆ ಮಾಡಲಾಯಿತು. ನಾಗರಹೊಳೆಯ ಮತ್ತಿಗೋಡು, ಬಳ್ಳೆ, ಭೀಮನಕಟ್ಟೆ, ಮಡಿಕೇರಿ ವಿಭಾಗದ ದುಬಾರೆ, ಬಂಡೀಪುರದ ರಾಮಪುರ ಶಿಬಿರಗಳಿಂದ ಈ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಎರಡನೇ ಹಂತದಲ್ಲಿ 5 ಆನೆಗಳನ್ನು ಕರೆತರುವ ಯೋಚನೆ ಇದ್ದು, ಇನ್ನೂ ಅಂತಿಮಗೊಂಡಿಲ್ಲ.</p>.<p>ಸಭೆಯಲ್ಲಿ ಹುಲಿ ಯೋಜನೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಿ.ವಿ. ರಂಗರಾವ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ರಾ, ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ, ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಪಾಲ್ಗೊಂಡಿದ್ದರು.</p>.<p>ಆಯ್ಕೆಯಾದವು: ಗಂಡಾನೆಗಳಾದ ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ಧಜಂಜಯ, ಗೋಪಿ, ಪಾರ್ಥಸಾರಥಿ ಹಾಗೂ ಹೆಣ್ಣಾನೆಗಳಾದ ವಿಜಯ ಹಾಗೂ ವರಲಕ್ಷ್ಮಿ ಆಯ್ಕೆಯಾಗಿವೆ.</p>.<p>ಮೊದಲ ತಂಡದಲ್ಲಿ ಇರುವ ಆನೆಗಳ ಪೈಕಿ ಅಭಿಮನ್ಯು ಅನುಭವಿ ಆನೆಯಾಗಿದೆ. 5,000–5300 ಕೆ.ಜಿ ತೂಕವಿರುವ ಈ ಆನೆ ಕಳೆದ 20 ವರ್ಷದಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ. 1977ರಲ್ಲಿ ಕೊಡಗಿನ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಇದನ್ನು ಸೆರೆ ಹಿಡಿಯಲಾಗಿತ್ತು.</p>.<p>ಮಹಿಳಾ ಆನೆಗಳ ಪೈಕಿ ವಿಜಯಾ ಆನೆಯು 3,250–3300 ತೂಕವಿದ್ದು, ಸಾಧು ಸ್ವಭಾವದ ಇದನ್ನು 1963ರಲ್ಲಿ ದುಬಾರೆಯಲ್ಲಿ ಸೆರೆ ಹಿಡಿಯಲಾಯಿತು. 11 ವರ್ಷಗಳಿಂದ ದಸರೆಯಲ್ಲಿ ಪಾಲ್ಗೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>