<p><strong>ಎಚ್.ಡಿ.ಕೋಟೆ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಬೀಸಿದ ಬಿರುಗಾಳಿಯಿಂದ ಬಾಳೆ ಬೆಳೆ ನೆಲಕಚ್ಚಿದೆ.</p>.<p>ತಾಲ್ಲೂಕಿನ ನಾಗನಹಳ್ಳಿಯ ರೈತ ಬಾಲರಾಜ್, ಕಟ್ಟೇಮನುಗನಹಳ್ಳಿಯ ನಾಗರಾಜು ಸೇರಿದಂತೆ ವಿವಿಧ ರೈತರ ಜಮೀನಿನಲ್ಲಿದ್ದ ಫಲ ಕೊಡುವ ಹಂತದಲ್ಲಿದ್ದ ಬಾಳೆಗಿಡಗಳು ಬಿರುಗಾಳಿ ಹೊಡೆತಕ್ಕೆ ಗೊನೆ ಸಮೇತ ಗಿಡಗಳು ನೆಲಕ್ಕೆ ಬಿದ್ದಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ರೈತ ಬಾಲರಾಜ್ ಮಾತನಾಡಿ, ‘ಸುಮಾರು ₹ 8 ಲಕ್ಷಕ್ಕೂ ಹೆಚ್ಚು ಆದಾಯ ತರುತ್ತಿದ್ದ ಬಾಳೆ ನಷ್ಟವಾಗಿದೆ, ಸಾಲ ಮಾಡಿ ಬೆಳೆದ ಬೆಳೆ ಫಲ ಕೈ ಸೇರುವ ಹಂತದಲ್ಲಿದ್ದಾಗ ಬಿರುಗಾಳಿಗೆ ಸಿಲುಕಿದ್ದು ಸಂಪೂರ್ಣ ತೋಟವೇ ನಾಶವಾಗಿದೆ’ ಎಂದು ಅಳಲನ್ನು ತೋಡಿಕೊಂಡಿದ್ದಾರೆ.</p>.<p>ಪರಿಹಾರಕ್ಕೆ ಒತ್ತಾಯ: ‘ಈ ಭಾಗದಲ್ಲಿ ಬೀಸಿದ ಬಿರುಗಾಳಿಗೆ ಬಾಳೆ ಬೆಳೆ ಹಾಳಾಗಿದ್ದು. ಸಂಬಂಧಿಸಿದ ಇಲಾಖೆ ಬೆಳೆ ನಷ್ಟವಾಗಿರುವ ರೈತರಿಗೆ ಹೆಚ್ಚಿನ ಪರಿಹಾರ ಧನ ವಿತರಿಸಬೇಕು’ ಎಂದು ರೈತ ಕೆಂಡಗಣ್ಣಸ್ವಾಮಿ ಒತ್ತಾಯಿಸಿದ್ದಾರೆ.</p>.<p>ತಾಲ್ಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ನಾಗರಾಜು ಎಂಬುವವರು 2 ಎಕರೆ ಗುತ್ತಿಗೆಗೆ ಪಡೆದು ಬೆಳೆದಿದ್ದ ಬಾಳೆ ಮಳೆ- ಗಾಳಿಗೆ ನಾಶವಾಗಿದೆ</p>.<p>‘ಬಡ ರೈತರು ಮತ್ತು ದಲಿತರು ಜೀವನ ಕಟ್ಟಿಕೊಳ್ಳಲು ಸಾಲ ಮಾಡಿ ಬೆಳೆದ ಬೆಳೆ ನಷ್ಟವಾಗಿರುವುದರಿಂದ ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ವನಸಿರಿ ಶಂಕರ್ ಒತ್ತಾಯಿಸಿದ್ದಾರೆ.</p>.<p><strong>ಪ್ರಥಮ ಮಳೆ: ಮಿಂದೆದ್ದ ಮಕ್ಕಳು</strong></p>.<p><strong>ಹುಣಸೂರು:</strong> ನಗರ ಸೇರಿದಂತೆ ತಾಲ್ಲೂಕಿನ ಕೆಲವು ಭಾಗದಲ್ಲಿ ಸೋಮವಾರ ಮಧ್ಯಾಹ್ನ ಈ ಸಾಲಿನ ಪ್ರಥಮ ವರ್ಷಧಾರೆ ಸುರಿದು, ಹರುಷ ಮೂಡಿಸಿದೆ.</p>.<p>ಮಧ್ಯಾಹ್ನ 3.40 ರಿಂದ 3.55 ವರೆಗೆ ಹದಿನೈದು ನಿಮಿಷ ಗುಡುಗು ಸಹಿತ ಮಳೆ ಅಬ್ಬರಿಸಿತು. ಶಾಲೆಗಳು ಬಿಡುವಿನ ಸಮಯಕ್ಕೆ ಏಕಾಏಕಿ ಬಂದ ಮಳೆಯಿಂದ ಪೋಷಕರು ದ್ವಿಚಕ್ರ ವಾಹನದಲ್ಲಿ ಛತ್ರಿ ಹಿಡಿದು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋದರು. ಮಕ್ಕಳು ಮಳೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದರು.</p>.<p><strong>ಬಿಸಿಲಿನ ಝಳ</strong>: ಬೆಳಿಗ್ಗೆಯಿಂದಲೇ ಬಿಸಿಲಿನ ತಾಪ ಹೆಚ್ಚಿದ್ದು ಮಧ್ಯಾಹ್ನ 12 ಗಂಟೆ ಆಸುಪಾಸಿಗೆ 34 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಬಿಸಿಲಿನ ಝಳಕ್ಕೆ ಮಳೆ ತಂಪೆರೆದು ಸಂಜೆ 5.30 ರಲ್ಲಿ 27 ಡಿಗ್ರಿ ತಾಪಮಾನವಿತ್ತು.</p>.<p><strong>ಹರ್ಷ:</strong> ಪ್ರಥಮ ವರ್ಷಧಾರೆಯನ್ನು ಕೆಲವರು ವಿಡಿಯೊ ಚಿತ್ರೀಕರಣ ಮಾಡಿಕೊಂಡು ಸಂತೋಷಪಡುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಬೀಸಿದ ಬಿರುಗಾಳಿಯಿಂದ ಬಾಳೆ ಬೆಳೆ ನೆಲಕಚ್ಚಿದೆ.</p>.<p>ತಾಲ್ಲೂಕಿನ ನಾಗನಹಳ್ಳಿಯ ರೈತ ಬಾಲರಾಜ್, ಕಟ್ಟೇಮನುಗನಹಳ್ಳಿಯ ನಾಗರಾಜು ಸೇರಿದಂತೆ ವಿವಿಧ ರೈತರ ಜಮೀನಿನಲ್ಲಿದ್ದ ಫಲ ಕೊಡುವ ಹಂತದಲ್ಲಿದ್ದ ಬಾಳೆಗಿಡಗಳು ಬಿರುಗಾಳಿ ಹೊಡೆತಕ್ಕೆ ಗೊನೆ ಸಮೇತ ಗಿಡಗಳು ನೆಲಕ್ಕೆ ಬಿದ್ದಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ರೈತ ಬಾಲರಾಜ್ ಮಾತನಾಡಿ, ‘ಸುಮಾರು ₹ 8 ಲಕ್ಷಕ್ಕೂ ಹೆಚ್ಚು ಆದಾಯ ತರುತ್ತಿದ್ದ ಬಾಳೆ ನಷ್ಟವಾಗಿದೆ, ಸಾಲ ಮಾಡಿ ಬೆಳೆದ ಬೆಳೆ ಫಲ ಕೈ ಸೇರುವ ಹಂತದಲ್ಲಿದ್ದಾಗ ಬಿರುಗಾಳಿಗೆ ಸಿಲುಕಿದ್ದು ಸಂಪೂರ್ಣ ತೋಟವೇ ನಾಶವಾಗಿದೆ’ ಎಂದು ಅಳಲನ್ನು ತೋಡಿಕೊಂಡಿದ್ದಾರೆ.</p>.<p>ಪರಿಹಾರಕ್ಕೆ ಒತ್ತಾಯ: ‘ಈ ಭಾಗದಲ್ಲಿ ಬೀಸಿದ ಬಿರುಗಾಳಿಗೆ ಬಾಳೆ ಬೆಳೆ ಹಾಳಾಗಿದ್ದು. ಸಂಬಂಧಿಸಿದ ಇಲಾಖೆ ಬೆಳೆ ನಷ್ಟವಾಗಿರುವ ರೈತರಿಗೆ ಹೆಚ್ಚಿನ ಪರಿಹಾರ ಧನ ವಿತರಿಸಬೇಕು’ ಎಂದು ರೈತ ಕೆಂಡಗಣ್ಣಸ್ವಾಮಿ ಒತ್ತಾಯಿಸಿದ್ದಾರೆ.</p>.<p>ತಾಲ್ಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ನಾಗರಾಜು ಎಂಬುವವರು 2 ಎಕರೆ ಗುತ್ತಿಗೆಗೆ ಪಡೆದು ಬೆಳೆದಿದ್ದ ಬಾಳೆ ಮಳೆ- ಗಾಳಿಗೆ ನಾಶವಾಗಿದೆ</p>.<p>‘ಬಡ ರೈತರು ಮತ್ತು ದಲಿತರು ಜೀವನ ಕಟ್ಟಿಕೊಳ್ಳಲು ಸಾಲ ಮಾಡಿ ಬೆಳೆದ ಬೆಳೆ ನಷ್ಟವಾಗಿರುವುದರಿಂದ ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ವನಸಿರಿ ಶಂಕರ್ ಒತ್ತಾಯಿಸಿದ್ದಾರೆ.</p>.<p><strong>ಪ್ರಥಮ ಮಳೆ: ಮಿಂದೆದ್ದ ಮಕ್ಕಳು</strong></p>.<p><strong>ಹುಣಸೂರು:</strong> ನಗರ ಸೇರಿದಂತೆ ತಾಲ್ಲೂಕಿನ ಕೆಲವು ಭಾಗದಲ್ಲಿ ಸೋಮವಾರ ಮಧ್ಯಾಹ್ನ ಈ ಸಾಲಿನ ಪ್ರಥಮ ವರ್ಷಧಾರೆ ಸುರಿದು, ಹರುಷ ಮೂಡಿಸಿದೆ.</p>.<p>ಮಧ್ಯಾಹ್ನ 3.40 ರಿಂದ 3.55 ವರೆಗೆ ಹದಿನೈದು ನಿಮಿಷ ಗುಡುಗು ಸಹಿತ ಮಳೆ ಅಬ್ಬರಿಸಿತು. ಶಾಲೆಗಳು ಬಿಡುವಿನ ಸಮಯಕ್ಕೆ ಏಕಾಏಕಿ ಬಂದ ಮಳೆಯಿಂದ ಪೋಷಕರು ದ್ವಿಚಕ್ರ ವಾಹನದಲ್ಲಿ ಛತ್ರಿ ಹಿಡಿದು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋದರು. ಮಕ್ಕಳು ಮಳೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದರು.</p>.<p><strong>ಬಿಸಿಲಿನ ಝಳ</strong>: ಬೆಳಿಗ್ಗೆಯಿಂದಲೇ ಬಿಸಿಲಿನ ತಾಪ ಹೆಚ್ಚಿದ್ದು ಮಧ್ಯಾಹ್ನ 12 ಗಂಟೆ ಆಸುಪಾಸಿಗೆ 34 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಬಿಸಿಲಿನ ಝಳಕ್ಕೆ ಮಳೆ ತಂಪೆರೆದು ಸಂಜೆ 5.30 ರಲ್ಲಿ 27 ಡಿಗ್ರಿ ತಾಪಮಾನವಿತ್ತು.</p>.<p><strong>ಹರ್ಷ:</strong> ಪ್ರಥಮ ವರ್ಷಧಾರೆಯನ್ನು ಕೆಲವರು ವಿಡಿಯೊ ಚಿತ್ರೀಕರಣ ಮಾಡಿಕೊಂಡು ಸಂತೋಷಪಡುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>