<p><strong>ಮೈಸೂರು: ‘</strong>ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೈಬರ್ ಲ್ಯಾಬ್ ಮಾಡಲಾಗುತ್ತಿದೆ. ಆನ್ಲೈನ್ ವಂಚನೆ ಪ್ರಕರಣ ಬೇಧಿಸುವ ಬಗ್ಗೆ ತರಬೇತಿ ನೀಡಲು ಸೂಚಿಸಲಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.</p>.<p>ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ, ನಜರ್ಬಾದ್ ಠಾಣೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೈಸೂರಿನಲ್ಲಿ ಈ ವರ್ಷ ₹ 30 ಕೋಟಿ ಆನ್ಲೈನ್ ವಂಚನೆಯಾಗಿದೆ. ಈ ರೀತಿಯ ಪ್ರಕರಣ ಹೆಚ್ಚುತ್ತಿದ್ದು, ಪೊಲೀಸರಿಗೆ ತರಬೇತಿ ನೀಡಲಾಗುವುದು’ ಎಂದರು.</p>.<p>‘ವಿದ್ಯಾವಂತರು ಡಿಜಿಟಲ್ ಬಂಧನಕ್ಕೆ ಒಳಗಾಗುತ್ತಿರುವುದು ಆತಂಕಕಾರಿ. ಸರ್ಕಾರಿ ನಿವೃತ್ತ ಅಧಿಕಾರಿಗಳನ್ನು ಗುರಿಯಾಗಿಸಿ ವಂಚಕರು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನಿವೃತ್ತ ಐಟಿ ಉದ್ಯೋಗಿಯೊಬ್ಬರು ₹ 32 ಕೋಟಿ ಹಣ ಕಳೆದುಕೊಂಡಿದ್ದಾರೆ. ಹೀಗಾಗಿ, ಸೈಬರ್ ಅಫರಾದವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ ಎಂದು ಹೇಳಿದರು.</p>.<p>‘ಪೊಲೀಸರ ನೇಮಕಾತಿಗಳನ್ನು ಸರ್ಕಾರ ತುರ್ತಾಗಿ ಮಾಡುತ್ತಿದೆ. ಪಿಎಸ್ಐ ಹಗರಣ ಆದ ಕಾರಣ ಪೊಲೀಸ್ ನೇಮಕಾತಿಯಲ್ಲಿ ವಿಳಂಬವಾಯಿತು. ಈ ವರ್ಷ ಪೊಲೀಸ್ ನೇಮಕಾತಿಯನ್ನ ಹೆಚ್ಚು ಮಾಡುತ್ತಿದ್ದೇವೆ. ಮೈಸೂರು ನಗರದಲ್ಲಿ ಹೆಚ್ಚುವರಿ ಠಾಣೆ ಮಾಡುವ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಉದಯಗಿರಿ ಪೊಲೀಸ್ ಠಾಣೆಯನ್ನು ಈಗಾಗಲೇ ವಿಭಾಗ ಮಾಡಿದ್ದೇವೆ. ಇನ್ನೆಷ್ಟು ಹೆಚ್ಚುವರಿ ಠಾಣೆಗಳು ಬೇಕೆಂಬ ಬಗ್ಗೆ ಸಭೆ ನಡೆಸುತ್ತೇವೆ’ ಎಂದು ತಿಳಿಸಿದರು.</p>.<p>‘ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತುಸಂಗ್ರಹಾಲಯ (ಮ್ಯೂಸಿಯಂ) ನಿರ್ಮಿಸಲಾಗುವುದು. ರಾಜ್ಯ ಪೊಲೀಸ್ ಇಲಾಖೆಯು ಆರಂಭದಿಂದ ಇಲ್ಲಿಯವರೆಗೆ ಬೆಳೆದುಬಂದ ರೀತಿ ಹಾದಿಯನ್ನು ಅದರಲ್ಲಿ ಕಟ್ಟಿಕೊಡಲಾಗುವುದು’ ಎಂದರು.</p>.<p>ಕೆಎಸ್ಆರ್ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ಆರಕ್ಷಕ ಅಶ್ವದಳದ ವಸ್ತುಸಂಗ್ರಹಾಲಯವನ್ನು ವೀಕ್ಷಿಸಿದರು.</p>.<p>ದಕ್ಷಿಣ ವಲಯ ಡಿಐಜಿ ಡಾ.ಎಂ.ಬಿ. ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್. ವಿಷ್ಣುವರ್ಧನ್, ಡಿಸಿಪಿಗಳಾದ ಆರ್.ಎನ್. ಬಿಂದುಮಣಿ, ಕೆ.ಎಸ್. ಸುಂದರ್ ರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೈಬರ್ ಲ್ಯಾಬ್ ಮಾಡಲಾಗುತ್ತಿದೆ. ಆನ್ಲೈನ್ ವಂಚನೆ ಪ್ರಕರಣ ಬೇಧಿಸುವ ಬಗ್ಗೆ ತರಬೇತಿ ನೀಡಲು ಸೂಚಿಸಲಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.</p>.<p>ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ, ನಜರ್ಬಾದ್ ಠಾಣೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೈಸೂರಿನಲ್ಲಿ ಈ ವರ್ಷ ₹ 30 ಕೋಟಿ ಆನ್ಲೈನ್ ವಂಚನೆಯಾಗಿದೆ. ಈ ರೀತಿಯ ಪ್ರಕರಣ ಹೆಚ್ಚುತ್ತಿದ್ದು, ಪೊಲೀಸರಿಗೆ ತರಬೇತಿ ನೀಡಲಾಗುವುದು’ ಎಂದರು.</p>.<p>‘ವಿದ್ಯಾವಂತರು ಡಿಜಿಟಲ್ ಬಂಧನಕ್ಕೆ ಒಳಗಾಗುತ್ತಿರುವುದು ಆತಂಕಕಾರಿ. ಸರ್ಕಾರಿ ನಿವೃತ್ತ ಅಧಿಕಾರಿಗಳನ್ನು ಗುರಿಯಾಗಿಸಿ ವಂಚಕರು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನಿವೃತ್ತ ಐಟಿ ಉದ್ಯೋಗಿಯೊಬ್ಬರು ₹ 32 ಕೋಟಿ ಹಣ ಕಳೆದುಕೊಂಡಿದ್ದಾರೆ. ಹೀಗಾಗಿ, ಸೈಬರ್ ಅಫರಾದವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ ಎಂದು ಹೇಳಿದರು.</p>.<p>‘ಪೊಲೀಸರ ನೇಮಕಾತಿಗಳನ್ನು ಸರ್ಕಾರ ತುರ್ತಾಗಿ ಮಾಡುತ್ತಿದೆ. ಪಿಎಸ್ಐ ಹಗರಣ ಆದ ಕಾರಣ ಪೊಲೀಸ್ ನೇಮಕಾತಿಯಲ್ಲಿ ವಿಳಂಬವಾಯಿತು. ಈ ವರ್ಷ ಪೊಲೀಸ್ ನೇಮಕಾತಿಯನ್ನ ಹೆಚ್ಚು ಮಾಡುತ್ತಿದ್ದೇವೆ. ಮೈಸೂರು ನಗರದಲ್ಲಿ ಹೆಚ್ಚುವರಿ ಠಾಣೆ ಮಾಡುವ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಉದಯಗಿರಿ ಪೊಲೀಸ್ ಠಾಣೆಯನ್ನು ಈಗಾಗಲೇ ವಿಭಾಗ ಮಾಡಿದ್ದೇವೆ. ಇನ್ನೆಷ್ಟು ಹೆಚ್ಚುವರಿ ಠಾಣೆಗಳು ಬೇಕೆಂಬ ಬಗ್ಗೆ ಸಭೆ ನಡೆಸುತ್ತೇವೆ’ ಎಂದು ತಿಳಿಸಿದರು.</p>.<p>‘ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತುಸಂಗ್ರಹಾಲಯ (ಮ್ಯೂಸಿಯಂ) ನಿರ್ಮಿಸಲಾಗುವುದು. ರಾಜ್ಯ ಪೊಲೀಸ್ ಇಲಾಖೆಯು ಆರಂಭದಿಂದ ಇಲ್ಲಿಯವರೆಗೆ ಬೆಳೆದುಬಂದ ರೀತಿ ಹಾದಿಯನ್ನು ಅದರಲ್ಲಿ ಕಟ್ಟಿಕೊಡಲಾಗುವುದು’ ಎಂದರು.</p>.<p>ಕೆಎಸ್ಆರ್ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದರು. ಆರಕ್ಷಕ ಅಶ್ವದಳದ ವಸ್ತುಸಂಗ್ರಹಾಲಯವನ್ನು ವೀಕ್ಷಿಸಿದರು.</p>.<p>ದಕ್ಷಿಣ ವಲಯ ಡಿಐಜಿ ಡಾ.ಎಂ.ಬಿ. ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್. ವಿಷ್ಣುವರ್ಧನ್, ಡಿಸಿಪಿಗಳಾದ ಆರ್.ಎನ್. ಬಿಂದುಮಣಿ, ಕೆ.ಎಸ್. ಸುಂದರ್ ರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>