<p><strong>ಪಿರಿಯಾಪಟ್ಟಣ: </strong>ತಾಲ್ಲೂಕಿನ ಅಲನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಯುವ ಬಳಗದ ಗುರುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆ ಗ್ರಾಮೀಣ ಜನರಲ್ಲಿ ಹೊಸ ಉತ್ಸಾಹ ಮೂಡಿಸಿತು.</p>.<p>ಸೂರ್ಯ ಮೇಲೆಳುತ್ತಿದ್ದಂತೆ ಗ್ರಾಮದ ಬಯಲಿನಲ್ಲಿ ಜನ ಸೇರಲಾರಂಭಿಸಿದರು. ಬಿಸಿಲು ಹೆಚ್ಚಾಗುತ್ತಿದ್ದಂತೆ ಪ್ರೇಕ್ಷಕರ ಸಂಖ್ಯೆ ಏರತೊಡಗಿತು. 50 ಹೆಚ್ಚು ಜೋಡಿಗಳ ಮಾಲೀಕರು ತಮ್ಮ ಎತ್ತುಗಳ ಸಾಮರ್ಥ್ಯ ಪರೀಕ್ಷೆ ಸಜ್ಜಾದರು.</p>.<p>ಸಂಜೆಯಾದರೂ ಸ್ಪರ್ಧೆಯ ರಂಗು ಮುಗಿದಿರಲಿಲ್ಲ. ರಾತ್ರಿ ಹೊನಲು – ಬೆಳಕಿನಲ್ಲೂ ಮುಂದುವರೆ ಯಲಿದೆ ಎಂದು ಆಯೋಜಕರು ತಿಳಿಸಿದರು.</p>.<p>ಸ್ಪರ್ಧೆಯಲ್ಲಿ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಎತ್ತಿನ ಜೋಡಿಗಳು ಪಾಲ್ಗೊಂಡಿದ್ದು, ಸ್ಪರ್ಧೆ ಜನಾಕರ್ಷಿಸಿತು.</p>.<p>ಸ್ಪರ್ಧೆಗೆ ಚಾಲನೆ ನೀಡಿದ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ. ರಂಗಸ್ವಾಮಿ,ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವುದು ಅಗತ್ಯ. ಇದರಿಂದ ಜಾನುವಾರುಗಳ ಮೇಲೆ ಪ್ರೀತಿ ಹಾಗೂ ಪರಸ್ಪರ ಬಾಂಧವ್ಯ ವೃದ್ಧಿಯಾಗುತ್ತದೆ’ ಎಂದರು.</p>.<p>‘ಕಬಡ್ಡಿ, ಕೊಕ್ಕೊ ಸೇರಿದಂತೆ ಇನ್ನಿತರ ಗ್ರಾಮೀಣ ಕ್ರೀಡೆ ಆಯೋಜಿಸಿ ದರೆ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ’ ಎಂದರು.</p>.<p>ಉದ್ಘಾಟನಾ ಸಮಾರಂಭದಲ್ಲಿ ಹುಣಸವಾಡಿ ಗ್ರಾ.ಪಂ. ಅಧ್ಯಕ್ಷ ಸುಶೀಲಮ್ಮ ಗಣೇಶ್, ಉಪಾಧ್ಯಕ್ಷ ಎ.ಜೆ. ಸ್ವಾಮಿ, ಗ್ರಾ.ಪಂ. ಸದಸ್ಯರಾದ ನಾಗರಾಜು, ಸ್ವಾಮಿನಾಯಕ, ಮುಖಂಡರಾದ ರವಿ, ಕುಮಾರ್, ಕಾರ್ಯಕ್ರಮದ ಆಯೋಜಕರಾದ ಸ್ವಾಮಿ, ಮಂಜು, ಚೇತನ್, ಪ್ರಸನ್ನ, ಮಂಜು, ನವೀನ್ ಮುಖಂಡರಾದ ಗುರುವಪ್ಪ, ಗಗನ್, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ: </strong>ತಾಲ್ಲೂಕಿನ ಅಲನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಯುವ ಬಳಗದ ಗುರುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆ ಗ್ರಾಮೀಣ ಜನರಲ್ಲಿ ಹೊಸ ಉತ್ಸಾಹ ಮೂಡಿಸಿತು.</p>.<p>ಸೂರ್ಯ ಮೇಲೆಳುತ್ತಿದ್ದಂತೆ ಗ್ರಾಮದ ಬಯಲಿನಲ್ಲಿ ಜನ ಸೇರಲಾರಂಭಿಸಿದರು. ಬಿಸಿಲು ಹೆಚ್ಚಾಗುತ್ತಿದ್ದಂತೆ ಪ್ರೇಕ್ಷಕರ ಸಂಖ್ಯೆ ಏರತೊಡಗಿತು. 50 ಹೆಚ್ಚು ಜೋಡಿಗಳ ಮಾಲೀಕರು ತಮ್ಮ ಎತ್ತುಗಳ ಸಾಮರ್ಥ್ಯ ಪರೀಕ್ಷೆ ಸಜ್ಜಾದರು.</p>.<p>ಸಂಜೆಯಾದರೂ ಸ್ಪರ್ಧೆಯ ರಂಗು ಮುಗಿದಿರಲಿಲ್ಲ. ರಾತ್ರಿ ಹೊನಲು – ಬೆಳಕಿನಲ್ಲೂ ಮುಂದುವರೆ ಯಲಿದೆ ಎಂದು ಆಯೋಜಕರು ತಿಳಿಸಿದರು.</p>.<p>ಸ್ಪರ್ಧೆಯಲ್ಲಿ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಎತ್ತಿನ ಜೋಡಿಗಳು ಪಾಲ್ಗೊಂಡಿದ್ದು, ಸ್ಪರ್ಧೆ ಜನಾಕರ್ಷಿಸಿತು.</p>.<p>ಸ್ಪರ್ಧೆಗೆ ಚಾಲನೆ ನೀಡಿದ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ. ರಂಗಸ್ವಾಮಿ,ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವುದು ಅಗತ್ಯ. ಇದರಿಂದ ಜಾನುವಾರುಗಳ ಮೇಲೆ ಪ್ರೀತಿ ಹಾಗೂ ಪರಸ್ಪರ ಬಾಂಧವ್ಯ ವೃದ್ಧಿಯಾಗುತ್ತದೆ’ ಎಂದರು.</p>.<p>‘ಕಬಡ್ಡಿ, ಕೊಕ್ಕೊ ಸೇರಿದಂತೆ ಇನ್ನಿತರ ಗ್ರಾಮೀಣ ಕ್ರೀಡೆ ಆಯೋಜಿಸಿ ದರೆ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ’ ಎಂದರು.</p>.<p>ಉದ್ಘಾಟನಾ ಸಮಾರಂಭದಲ್ಲಿ ಹುಣಸವಾಡಿ ಗ್ರಾ.ಪಂ. ಅಧ್ಯಕ್ಷ ಸುಶೀಲಮ್ಮ ಗಣೇಶ್, ಉಪಾಧ್ಯಕ್ಷ ಎ.ಜೆ. ಸ್ವಾಮಿ, ಗ್ರಾ.ಪಂ. ಸದಸ್ಯರಾದ ನಾಗರಾಜು, ಸ್ವಾಮಿನಾಯಕ, ಮುಖಂಡರಾದ ರವಿ, ಕುಮಾರ್, ಕಾರ್ಯಕ್ರಮದ ಆಯೋಜಕರಾದ ಸ್ವಾಮಿ, ಮಂಜು, ಚೇತನ್, ಪ್ರಸನ್ನ, ಮಂಜು, ನವೀನ್ ಮುಖಂಡರಾದ ಗುರುವಪ್ಪ, ಗಗನ್, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>