<p><strong>ಮೈಸೂರು:</strong> ‘ಶಾಲಾ ಪುಸ್ತಕದಿಂದ ದೊರೆಯದ ಪಾಠ ಕ್ರೀಡೆಯಿಂದ ಸಿಗುತ್ತದೆ. ಅಡೆತಡೆಯಿಲ್ಲದ ಜೀವನ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಉಷಾರಾಣಿ ತಿಳಿಸಿದರು.</p>.<p>ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಚಾಮುಂಡಿಬೆಟ್ಟದ ತಪ್ಪಲಿನ ಸಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ. ಒತ್ತಡದ ನಡುವೆ ಕೆಲಸ ನಿರ್ವಹಿಸುವ ಪೊಲೀಸರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಒತ್ತಡ ನಿರ್ವಹಣೆ ಸಾಧ್ಯ. ಎಲ್ಲರೂ ನಿತ್ಯ ಕೆಲ ಸಮಯವನ್ನು ಕ್ರೀಡಾ ಚಟುವಟಿಕೆಗಾಗಿ ಮೀಸಲಿಡಿ’ ಎಂದು ಸಲಹೆ ನೀಡಿದರು.</p>.<p>‘ದೇಶದಲ್ಲಿ ಕ್ರೀಡಾಪಟುಗಳನ್ನು ಗೌರವಿಸುವ ಸಂಸ್ಕೃತಿ ಇದೆ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಮನೆಯಿಂದ ಪ್ರೋತ್ಸಾಹ ನೀಡಬೇಕಿದೆ. ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಮೊದಲ 10 ಸ್ಥಾನದೊಳಗೆ ದೇಶದ ಹೆಸರು ಬರಲು ಶ್ರಮಿಸಬೇಕು’ ಎಂದರು. </p>.<p>ಕ್ರೀಡಾಪಟುಗಳು ಆಕರ್ಷಕ ಪಥಸಂಚಲನ ಮೂಲಕ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು. ಆರ್.ಕೆ.ಸುರೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್.ವಿಜಯಶಂಕರ್ ಕ್ರೀಡಾಜ್ಯೋತಿ ಹಿಡಿದು ಸಾಗಿದರು.</p>.<p>ಸಿಎಆರ್, ನರಸಿಂಹರಾಜ ಉಪ ವಿಭಾಗ, ಕೃಷ್ಣರಾಜ ಉಪ ವಿಭಾಗ, ದೇವರಾಜ ಉಪ ವಿಭಾಗ, ವಿಜಯನಗರ ಉಪ ವಿಭಾಗ, ಸಂಚಾರ ಉಪ ವಿಭಾಗ, ವಿಶೇಷ ಪಡೆ, ಮಹಿಳಾ ಪಡೆ, ಅಶ್ವರೋಹಿ ದಳದ ಸಿಬ್ಬಂದಿ ಕೂಟದಲ್ಲಿ ಪಾಲ್ಗೊಂಡಿದ್ದಾರೆ.</p>.<p>ಅಂತರರಾಷ್ಟ್ರೀಯ ಕ್ರೀಡಾಪಟು ಧನುಷ ಎಂ.ಆರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಆರ್.ಎನ್.ಬಿಂದುರಾಣಿ, ಕೆ.ಎಸ್.ಸುಂದರ್ ರಾಜ್, ಮಾರುತಿ, ಸಿದ್ದನಗೌಡ ಪಾಟೀಲ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಶಾಲಾ ಪುಸ್ತಕದಿಂದ ದೊರೆಯದ ಪಾಠ ಕ್ರೀಡೆಯಿಂದ ಸಿಗುತ್ತದೆ. ಅಡೆತಡೆಯಿಲ್ಲದ ಜೀವನ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಉಷಾರಾಣಿ ತಿಳಿಸಿದರು.</p>.<p>ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಚಾಮುಂಡಿಬೆಟ್ಟದ ತಪ್ಪಲಿನ ಸಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ. ಒತ್ತಡದ ನಡುವೆ ಕೆಲಸ ನಿರ್ವಹಿಸುವ ಪೊಲೀಸರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಒತ್ತಡ ನಿರ್ವಹಣೆ ಸಾಧ್ಯ. ಎಲ್ಲರೂ ನಿತ್ಯ ಕೆಲ ಸಮಯವನ್ನು ಕ್ರೀಡಾ ಚಟುವಟಿಕೆಗಾಗಿ ಮೀಸಲಿಡಿ’ ಎಂದು ಸಲಹೆ ನೀಡಿದರು.</p>.<p>‘ದೇಶದಲ್ಲಿ ಕ್ರೀಡಾಪಟುಗಳನ್ನು ಗೌರವಿಸುವ ಸಂಸ್ಕೃತಿ ಇದೆ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಮನೆಯಿಂದ ಪ್ರೋತ್ಸಾಹ ನೀಡಬೇಕಿದೆ. ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಮೊದಲ 10 ಸ್ಥಾನದೊಳಗೆ ದೇಶದ ಹೆಸರು ಬರಲು ಶ್ರಮಿಸಬೇಕು’ ಎಂದರು. </p>.<p>ಕ್ರೀಡಾಪಟುಗಳು ಆಕರ್ಷಕ ಪಥಸಂಚಲನ ಮೂಲಕ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು. ಆರ್.ಕೆ.ಸುರೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್.ವಿಜಯಶಂಕರ್ ಕ್ರೀಡಾಜ್ಯೋತಿ ಹಿಡಿದು ಸಾಗಿದರು.</p>.<p>ಸಿಎಆರ್, ನರಸಿಂಹರಾಜ ಉಪ ವಿಭಾಗ, ಕೃಷ್ಣರಾಜ ಉಪ ವಿಭಾಗ, ದೇವರಾಜ ಉಪ ವಿಭಾಗ, ವಿಜಯನಗರ ಉಪ ವಿಭಾಗ, ಸಂಚಾರ ಉಪ ವಿಭಾಗ, ವಿಶೇಷ ಪಡೆ, ಮಹಿಳಾ ಪಡೆ, ಅಶ್ವರೋಹಿ ದಳದ ಸಿಬ್ಬಂದಿ ಕೂಟದಲ್ಲಿ ಪಾಲ್ಗೊಂಡಿದ್ದಾರೆ.</p>.<p>ಅಂತರರಾಷ್ಟ್ರೀಯ ಕ್ರೀಡಾಪಟು ಧನುಷ ಎಂ.ಆರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಆರ್.ಎನ್.ಬಿಂದುರಾಣಿ, ಕೆ.ಎಸ್.ಸುಂದರ್ ರಾಜ್, ಮಾರುತಿ, ಸಿದ್ದನಗೌಡ ಪಾಟೀಲ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>