<p><strong>ಹುಣಸೂರು</strong>: ‘ಒಳಚರಂಡಿ ನಿರ್ವಹಣೆಗೆ ₹ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ಇಲ್ಲಿನ ಶಾಸಕರ ಕಚೇರಿ ಆವರಣದಲ್ಲಿ ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿ, ‘ನಗರಸಭೆಗೆ ‘ನಾನ್ ಮಿಲಿಯನ್ ಪ್ಲಸ್ ಸಿಟಿ ಯೋಜನೆ’ ಅಡಿಯಲ್ಲಿ ₹ 90 ಲಕ್ಷ ಅನುದಾನ ಮಂಜೂರಾಗಿದ್ದು, ಆ ಅನುದಾನದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಲೀಟರ್ ಸಾಮರ್ಥ್ಯದ ವಾಹನ ಖರೀದಿಸಿದೆ. ಉಳಿದ ಅನುದಾನವನ್ನು ನಗರಸಭೆ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗೆ ಮತ್ತು ನೀರು ಪೈಪ್ ಲೈನಿಂಗ್ ಮತ್ತು ಪಂಪ್ ಹೌಸ್ ನಿರ್ವಹಣೆಗೆ ಬಳಸಿಕೊಳ್ಳಲಾಗಿದೆ’ ಎಂದರು.</p>.<p>‘ಈ ವಾಹನದಿಂದ ನಗರವ್ಯಾಪ್ತಿಯಲ್ಲಿ ಒಳಚರಂಡಿ ಶುಚಿಗೊಳಿಸಿ ನೀರು ಸಮರ್ಪಕವಾಗಿ ಹರಿಯಲು ಸಹಕಾರಿಯಾಗಲಿದೆ. ನಗರಸಭೆ ವ್ಯಾಪ್ತಿಯು 4 ರಿಂದ 5 ಕಿ.ಮೀ. ಹರಡಿಕೊಂಡಿದ್ದು, 80 ಹೊಸ ಬಡಾವಣೆಗಳಾಗಿವೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಈ ಹೆಚ್ಚುವರಿ ವಾಹನ ಸಹಕಾರಿ ಆಗಲಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಸದಸ್ಯರಾದ ಕೃಷ್ಣರಾಜಗುಪ್ತ, ಶರವಣ, ಸತೀಶ್ ಕುಮಾರ್, ರಮೇಶ್, ದೇವರಾಜ್, ಯುನಿಸ್, ಗೀತಾ, ರಾಣಿ ಪೆರುಮಾಳ್, ರಾಧಾ, ಶ್ರೀನಾಥ್, ತಹಶೀಲ್ದಾರ್ ಮಂಜುನಾಥ್, ಇಒ ಮನು, ಎಇಇ ಶರ್ಮಿಳಾ, ರೂಪಾ, ಸತೀಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ಒಳಚರಂಡಿ ನಿರ್ವಹಣೆಗೆ ₹ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ಇಲ್ಲಿನ ಶಾಸಕರ ಕಚೇರಿ ಆವರಣದಲ್ಲಿ ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿ, ‘ನಗರಸಭೆಗೆ ‘ನಾನ್ ಮಿಲಿಯನ್ ಪ್ಲಸ್ ಸಿಟಿ ಯೋಜನೆ’ ಅಡಿಯಲ್ಲಿ ₹ 90 ಲಕ್ಷ ಅನುದಾನ ಮಂಜೂರಾಗಿದ್ದು, ಆ ಅನುದಾನದಲ್ಲಿ ಹೆಚ್ಚುವರಿಯಾಗಿ 6 ಸಾವಿರ ಲೀಟರ್ ಸಾಮರ್ಥ್ಯದ ವಾಹನ ಖರೀದಿಸಿದೆ. ಉಳಿದ ಅನುದಾನವನ್ನು ನಗರಸಭೆ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗೆ ಮತ್ತು ನೀರು ಪೈಪ್ ಲೈನಿಂಗ್ ಮತ್ತು ಪಂಪ್ ಹೌಸ್ ನಿರ್ವಹಣೆಗೆ ಬಳಸಿಕೊಳ್ಳಲಾಗಿದೆ’ ಎಂದರು.</p>.<p>‘ಈ ವಾಹನದಿಂದ ನಗರವ್ಯಾಪ್ತಿಯಲ್ಲಿ ಒಳಚರಂಡಿ ಶುಚಿಗೊಳಿಸಿ ನೀರು ಸಮರ್ಪಕವಾಗಿ ಹರಿಯಲು ಸಹಕಾರಿಯಾಗಲಿದೆ. ನಗರಸಭೆ ವ್ಯಾಪ್ತಿಯು 4 ರಿಂದ 5 ಕಿ.ಮೀ. ಹರಡಿಕೊಂಡಿದ್ದು, 80 ಹೊಸ ಬಡಾವಣೆಗಳಾಗಿವೆ. ಹಾಗಾಗಿ ಸಾರ್ವಜನಿಕರ ಸಮಸ್ಯೆಗೆ ಈ ಹೆಚ್ಚುವರಿ ವಾಹನ ಸಹಕಾರಿ ಆಗಲಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಸದಸ್ಯರಾದ ಕೃಷ್ಣರಾಜಗುಪ್ತ, ಶರವಣ, ಸತೀಶ್ ಕುಮಾರ್, ರಮೇಶ್, ದೇವರಾಜ್, ಯುನಿಸ್, ಗೀತಾ, ರಾಣಿ ಪೆರುಮಾಳ್, ರಾಧಾ, ಶ್ರೀನಾಥ್, ತಹಶೀಲ್ದಾರ್ ಮಂಜುನಾಥ್, ಇಒ ಮನು, ಎಇಇ ಶರ್ಮಿಳಾ, ರೂಪಾ, ಸತೀಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>