<p><strong>ಹುಣಸೂರು</strong>: ‘ರಾಮೇನಹಳ್ಳಿ ಓಂಕಾರೇಶ್ವರ ಜಾತ್ರೆ ಸಮಯದಲ್ಲಿ ಸವರ್ಣೀಯ ಯುವಕರು ದಲಿತ ಹೆಣ್ಣು ಮಕ್ಕಳನ್ನು ಚುಡಾಯಿಸಿ ಅವಾಚ್ಯ ಶಬ್ದ ಪ್ರಯೋಗ ಮತ್ತು ಹಲ್ಲೆ ಮಾಡಿದ್ದು ತಾಲ್ಲೂಕು ಆಡಳಿತ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ಮುಖಂಡ ಕಲ್ಕುಣಿಕೆ ಬಸವರಾಜ್ ಆಗ್ರಹಿಸಿದ್ದಾರೆ.</p>.<p>ನಗರದಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಉಪತಹಶೀಲ್ದಾರ್ ನರಸಿಂಹಯ್ಯ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ,‘ಜಾತ್ರೆ ಸಮಯದಲ್ಲಿ ನಿಲುವಾಗಿಲು ಗ್ರಾಮದ ದಲಿತ ಕುಟುಂಬಕ್ಕೆ ಸೇರಿದ ಹೆಣ್ಣು ಮಕ್ಕಳನ್ನು ಸವರ್ಣಿಯ ಸಮುದಾಯದ ಯುವಕರು ಚುಡಾಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಜಾತಿ ದೌರ್ಜನ್ಯ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ದಲಿತ ಸಮುದಾಯಕ್ಕೆ ರಕ್ಷಣೆ ನೀಡಬೇಕು’ ಎಂದು ಆಗ್ರಹಿಸಿ ಮನವಿ ಮಾಡಿದರು.</p>.<p>ಮನವಿ ಸ್ವೀಕರಿಸಿದ ಅಧಿಕಾರಿ ಮಾತನಾಡಿ, ‘ಈ ಸಂಬಂಧ ಸೂಕ್ತ ತನಿಖೆ ನಡೆಸಿ ಕ್ರಮವಹಿಸುವ ಭರವಸೆ ನೀಡಿದರು. ಭಾರತ ಕಮ್ಯೂನಿಸ್ಟ್ ಪಕ್ಷದ ಕಾರ್ಯದರ್ಶಿ ಬೆಳ್ತೂರು ವೆಂಕಟೇಶ್, ಶಿವರಾಮು, ಮಹದೇವ್, ಸಂತೋಷ್, ರಾಜು, ಯಶವಂತ್ ಕಿಶೋರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ರಾಮೇನಹಳ್ಳಿ ಓಂಕಾರೇಶ್ವರ ಜಾತ್ರೆ ಸಮಯದಲ್ಲಿ ಸವರ್ಣೀಯ ಯುವಕರು ದಲಿತ ಹೆಣ್ಣು ಮಕ್ಕಳನ್ನು ಚುಡಾಯಿಸಿ ಅವಾಚ್ಯ ಶಬ್ದ ಪ್ರಯೋಗ ಮತ್ತು ಹಲ್ಲೆ ಮಾಡಿದ್ದು ತಾಲ್ಲೂಕು ಆಡಳಿತ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ಮುಖಂಡ ಕಲ್ಕುಣಿಕೆ ಬಸವರಾಜ್ ಆಗ್ರಹಿಸಿದ್ದಾರೆ.</p>.<p>ನಗರದಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಉಪತಹಶೀಲ್ದಾರ್ ನರಸಿಂಹಯ್ಯ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ,‘ಜಾತ್ರೆ ಸಮಯದಲ್ಲಿ ನಿಲುವಾಗಿಲು ಗ್ರಾಮದ ದಲಿತ ಕುಟುಂಬಕ್ಕೆ ಸೇರಿದ ಹೆಣ್ಣು ಮಕ್ಕಳನ್ನು ಸವರ್ಣಿಯ ಸಮುದಾಯದ ಯುವಕರು ಚುಡಾಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಜಾತಿ ದೌರ್ಜನ್ಯ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ದಲಿತ ಸಮುದಾಯಕ್ಕೆ ರಕ್ಷಣೆ ನೀಡಬೇಕು’ ಎಂದು ಆಗ್ರಹಿಸಿ ಮನವಿ ಮಾಡಿದರು.</p>.<p>ಮನವಿ ಸ್ವೀಕರಿಸಿದ ಅಧಿಕಾರಿ ಮಾತನಾಡಿ, ‘ಈ ಸಂಬಂಧ ಸೂಕ್ತ ತನಿಖೆ ನಡೆಸಿ ಕ್ರಮವಹಿಸುವ ಭರವಸೆ ನೀಡಿದರು. ಭಾರತ ಕಮ್ಯೂನಿಸ್ಟ್ ಪಕ್ಷದ ಕಾರ್ಯದರ್ಶಿ ಬೆಳ್ತೂರು ವೆಂಕಟೇಶ್, ಶಿವರಾಮು, ಮಹದೇವ್, ಸಂತೋಷ್, ರಾಜು, ಯಶವಂತ್ ಕಿಶೋರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>