ಬಿಳಿಕೆರೆ: ಹೋಬಳಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ ಶನಿವಾರ ಸಂಜೆ ಹಾಲಿನ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ.
ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೈಸೂರು ನಗರದ ಆಲನಹಳ್ಳಿ ನಿವಾಸಿ ಚಂದ್ರಶೇಖರ್ ಪುತ್ರಿ ಸಾಫ್ಟ್ವೇರ್ ಎಂಜಿನಿಯರ್ ಜೀವಿತಾ (24) ಹಾಗೂ ಆಕೆಯ ಸ್ನೇಹಿತೆ ಕೆ.ಪಿ.ಅಗ್ರಹಾರದ ಪ್ರಸನ್ನ ಅವರ ಪುತ್ರಿ ಪ್ರತೀಕ್ಷಾ (24) ಮೃತರು.
ಮೈಸೂರಿನಿಂದ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಕಾರಿನ ಮುಂಬದಿ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ.
ಬಿಳಿಕೆರೆ ಪೋಲಿಸರು ಸ್ಥಳಕ್ಕೆ ಬಂದು ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಿ, ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.