ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ಯಾಂಕರ್‌ಗೆ ಕಾರು ಡಿಕ್ಕಿ: ಇಬ್ಬರು ಸಾವು

Last Updated 20 ಜೂನ್ 2022, 3:59 IST
ಅಕ್ಷರ ಗಾತ್ರ

ಬಿಳಿಕೆರೆ: ಹೋಬಳಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ ಶನಿವಾರ ಸಂಜೆ ಹಾಲಿನ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ.

ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೈಸೂರು ನಗರದ ಆಲನಹಳ್ಳಿ ನಿವಾಸಿ ಚಂದ್ರಶೇಖರ್ ಪುತ್ರಿ ಸಾಫ್ಟ್‌ವೇರ್ ಎಂಜಿನಿಯರ್‌ ಜೀವಿತಾ (24) ಹಾಗೂ ಆಕೆಯ ಸ್ನೇಹಿತೆ ಕೆ.ಪಿ.ಅಗ್ರಹಾರದ ಪ್ರಸನ್ನ ಅವರ ಪುತ್ರಿ ಪ್ರತೀಕ್ಷಾ (24) ಮೃತರು.

ಮೈಸೂರಿನಿಂದ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಕಾರಿನ ಮುಂಬದಿ ಟೈರ್ ಪಂಕ್ಚರ್‌ ಆಗಿ ಎದುರಿನಿಂದ ಬರುತ್ತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಬಿಳಿಕೆರೆ ಪೋಲಿಸರು ಸ್ಥಳಕ್ಕೆ ಬಂದು ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಿ, ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT