<p>ಪ್ರಜಾವಾಣಿ ವಾರ್ತೆ</p>.<p><strong>ಹುಣಸೂರು</strong>: ಸ್ನೇಹಿತರ ವಿವಾಹಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳಿ ಹಿಂದಿರುಗುವಾಗ ರಸ್ತೆ ಅಪಘಾತದಲ್ಲಿ ಕೆ.ಎಸ್.ಆರ್.ಪಿ. ಬೆಂಗಳೂರು ಬೆಟಾಲಿಯನ್ 4ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೆಬಲ್ ಸಾಗರ್ (31) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಘಟನೆ ವಿವರ: ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ ಸಾಗರ್ ತನ್ನ ಸ್ನೇಹಿತ ಸುನಿಲ್ ವಿವಾಹಕ್ಕೆ ಮಾಕೋಡು ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳಿ ಗುರುವಾರ ಮಧ್ಯರಾತ್ರಿ 12ರಿಂದ 1 ಗಂಟೆ ಸಮಯದಲ್ಲಿ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ಸಮಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಎರಡು ದಿನದ ಹಿಂದೆ ಬಿದ್ದ ಭಾರಿ ಗಾಳಿ ಮತ್ತು ಮಳೆಗೆ ರಸ್ತೆ ಅಂಚಿನ ಮರ ಬಿದ್ದಿದ್ದು, ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ತಿಳಿಸಲಾಗಿತ್ತು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಅವಘಡವಾಗಿದೆ’ ಎಂದು ಗ್ರಾಮದ ಶಂಕರ್ ತಿಳಿಸಿದ್ದಾರೆ.</p>.<p>ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಣ್ಯರು ಮತ್ತು ಸಹೋದ್ಯೋಗಿ ಮಿತ್ರರು ಅಂತಿಮ ದರ್ಶನ ಪಡೆದರು. ಗುರುವಾರ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಹುಣಸೂರು</strong>: ಸ್ನೇಹಿತರ ವಿವಾಹಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳಿ ಹಿಂದಿರುಗುವಾಗ ರಸ್ತೆ ಅಪಘಾತದಲ್ಲಿ ಕೆ.ಎಸ್.ಆರ್.ಪಿ. ಬೆಂಗಳೂರು ಬೆಟಾಲಿಯನ್ 4ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೆಬಲ್ ಸಾಗರ್ (31) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಘಟನೆ ವಿವರ: ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ ಸಾಗರ್ ತನ್ನ ಸ್ನೇಹಿತ ಸುನಿಲ್ ವಿವಾಹಕ್ಕೆ ಮಾಕೋಡು ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳಿ ಗುರುವಾರ ಮಧ್ಯರಾತ್ರಿ 12ರಿಂದ 1 ಗಂಟೆ ಸಮಯದಲ್ಲಿ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ಸಮಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಎರಡು ದಿನದ ಹಿಂದೆ ಬಿದ್ದ ಭಾರಿ ಗಾಳಿ ಮತ್ತು ಮಳೆಗೆ ರಸ್ತೆ ಅಂಚಿನ ಮರ ಬಿದ್ದಿದ್ದು, ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ತಿಳಿಸಲಾಗಿತ್ತು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಅವಘಡವಾಗಿದೆ’ ಎಂದು ಗ್ರಾಮದ ಶಂಕರ್ ತಿಳಿಸಿದ್ದಾರೆ.</p>.<p>ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಣ್ಯರು ಮತ್ತು ಸಹೋದ್ಯೋಗಿ ಮಿತ್ರರು ಅಂತಿಮ ದರ್ಶನ ಪಡೆದರು. ಗುರುವಾರ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>