<p><strong>ಎಚ್.ಡಿ.ಕೋಟೆ:</strong> ‘ಪಟ್ಟಣ ವ್ಯಾಪ್ತಿಯಲ್ಲಿ ಈಗಾಗಲೇ ಖರೀದಿಸಲಾಗಿರುವ 6.10 ಎಕರೆ ಜಮೀನಿನಲ್ಲಿ ನಗರ ಯೋಜನಾ ಇಲಾಖೆಯಿಂದ ವಿನ್ಯಾಸನಕ್ಷೆ ಅನುಮೋದನೆ ಪಡೆದು ಬಡ ನಾಗರಿಕರಿಗೆ ನಿವೇಶನಗಳನ್ನು ವಿತರಿಸಲಾಗುವುದು’ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.</p>.<p>ಪಟ್ಟಣದ ಶಾಸಕರ ಕಚೇರಿಯಲ್ಲಿ ಬುಧವಾರ ನಡೆದ ನಗರ ಆಶ್ರಯ ಸಮಿತಿಯ ಪ್ರಥಮ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘25x30 ಅಡಿಗಳ ಅಳತೆಯ ನಿವೇಶನಗಳನ್ನು ರಚಿಸಿ ಮೂರು ತಿಂಗಳೊಳಗೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನಿವೇಶನ ರಹಿತ ಮತ್ತು ವಸತಿರಹಿತರಿಗೆ ಹಂಚಿಕೆ ಮಾಡಲು ಕ್ರಮ ವಹಿಸಬೇಕು’ ಎಂದರು.</p>.<p>‘ಪಟ್ಟಣದಲ್ಲಿ 23 ವಾರ್ಡ್ಗಳಾಗಿದ್ದು, ನಿವೇಶನ ರಹಿತ ಮತ್ತು ವಸತಿರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು, ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಜಮೀನುಗಳನ್ನು ಮಾರಾಟ ಮಾಡಲು ಇಚ್ಛಿಸುವ ಜಮೀನುದಾರರನ್ನು ಗುರುತಿಸಿ, ದಾಖಲಾತಿಗಳನ್ನು ಪಡೆದು ಪರಿಶೀಲಿಸಿ, ಆಶ್ರಯ ಯೋಜನೆಗೆ ಖರೀದಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ಬೆಂಗಳೂರಿನಿಂದ ಹೆಚ್ಚಿನ ಮನೆಗಳನ್ನು ತಂದು ನಿವೇಶನ ಹೊಂದಿರುವ, ವಸತಿ ರಹಿತರಿಗೆ ಮನೆಗಳನ್ನು ನೀಡಲು ಕ್ರಮ ವಹಿಸಲಾಗುವುದು’ ಎಂದರು.</p>.<p>‘ಪಟ್ಟಣ ವ್ಯಾಪ್ತಿಯಲ್ಲಿ ಸ್ಲಂ ಬೋರ್ಡ್ ನಿಂದ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಸೂಚಿಸಲಾಗಿರುತ್ತದೆ’ ಎಂದರು.</p>.<p>ಆಶ್ರಯ ಸಮಿತಿಗೆ ಸರ್ಕಾರದಿಂದ ಹೊಸದಾಗಿ ಆಯ್ಕೆಯಾದ ವಜ್ರೇಗೌಡ, ಕೃಷ್ಣ ನಾಯಕ, ನಜೀರ್ ಅಹಮದ್, ಶಶಿಕಲಾ, ಗೋವಿಂದ್ ರಾಜ್ ಅವರನ್ನು ಸನ್ಮಾನಿಸಲಾಯಿತು.</p>.<p>ತಹಶೀಲ್ದಾರ್ ಶ್ರೀನಿವಾಸ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ತಾ.ಪಂ. ಇಒ ಧರಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ‘ಪಟ್ಟಣ ವ್ಯಾಪ್ತಿಯಲ್ಲಿ ಈಗಾಗಲೇ ಖರೀದಿಸಲಾಗಿರುವ 6.10 ಎಕರೆ ಜಮೀನಿನಲ್ಲಿ ನಗರ ಯೋಜನಾ ಇಲಾಖೆಯಿಂದ ವಿನ್ಯಾಸನಕ್ಷೆ ಅನುಮೋದನೆ ಪಡೆದು ಬಡ ನಾಗರಿಕರಿಗೆ ನಿವೇಶನಗಳನ್ನು ವಿತರಿಸಲಾಗುವುದು’ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.</p>.<p>ಪಟ್ಟಣದ ಶಾಸಕರ ಕಚೇರಿಯಲ್ಲಿ ಬುಧವಾರ ನಡೆದ ನಗರ ಆಶ್ರಯ ಸಮಿತಿಯ ಪ್ರಥಮ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘25x30 ಅಡಿಗಳ ಅಳತೆಯ ನಿವೇಶನಗಳನ್ನು ರಚಿಸಿ ಮೂರು ತಿಂಗಳೊಳಗೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನಿವೇಶನ ರಹಿತ ಮತ್ತು ವಸತಿರಹಿತರಿಗೆ ಹಂಚಿಕೆ ಮಾಡಲು ಕ್ರಮ ವಹಿಸಬೇಕು’ ಎಂದರು.</p>.<p>‘ಪಟ್ಟಣದಲ್ಲಿ 23 ವಾರ್ಡ್ಗಳಾಗಿದ್ದು, ನಿವೇಶನ ರಹಿತ ಮತ್ತು ವಸತಿರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು, ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಜಮೀನುಗಳನ್ನು ಮಾರಾಟ ಮಾಡಲು ಇಚ್ಛಿಸುವ ಜಮೀನುದಾರರನ್ನು ಗುರುತಿಸಿ, ದಾಖಲಾತಿಗಳನ್ನು ಪಡೆದು ಪರಿಶೀಲಿಸಿ, ಆಶ್ರಯ ಯೋಜನೆಗೆ ಖರೀದಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ಬೆಂಗಳೂರಿನಿಂದ ಹೆಚ್ಚಿನ ಮನೆಗಳನ್ನು ತಂದು ನಿವೇಶನ ಹೊಂದಿರುವ, ವಸತಿ ರಹಿತರಿಗೆ ಮನೆಗಳನ್ನು ನೀಡಲು ಕ್ರಮ ವಹಿಸಲಾಗುವುದು’ ಎಂದರು.</p>.<p>‘ಪಟ್ಟಣ ವ್ಯಾಪ್ತಿಯಲ್ಲಿ ಸ್ಲಂ ಬೋರ್ಡ್ ನಿಂದ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಸೂಚಿಸಲಾಗಿರುತ್ತದೆ’ ಎಂದರು.</p>.<p>ಆಶ್ರಯ ಸಮಿತಿಗೆ ಸರ್ಕಾರದಿಂದ ಹೊಸದಾಗಿ ಆಯ್ಕೆಯಾದ ವಜ್ರೇಗೌಡ, ಕೃಷ್ಣ ನಾಯಕ, ನಜೀರ್ ಅಹಮದ್, ಶಶಿಕಲಾ, ಗೋವಿಂದ್ ರಾಜ್ ಅವರನ್ನು ಸನ್ಮಾನಿಸಲಾಯಿತು.</p>.<p>ತಹಶೀಲ್ದಾರ್ ಶ್ರೀನಿವಾಸ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ತಾ.ಪಂ. ಇಒ ಧರಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>