<p><strong>ಹುಣಸೂರು:</strong> ‘ವಿವಿಧ ಸಂಘಟನೆಗಳ ಚಳವಳಿಗಾರರು ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಅಧಿಕಾರ ಹಿಡಿದರೆ ಸಾಮಾಜಿಕ ಬದಲಾವಣೆ ತರಲು ಸಾಧ್ಯ’ ಎಂದು ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್ ಹೇಳಿದರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಬ್ದುಲ್ ನಜೀರ್ಸಾಬ್ ಫೌಂಡೇಶನ್, ರೈತ ಸಂಘ, ದಲಿತ ಸಂಘರ್ಷ ಸಮಿತಿ(ದಸಂಸ) ಮತ್ತು ಪ್ರಗತಿಪರ ಸಂಘಟನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ಆಡಳಿತ ವ್ಯವಸ್ಥೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಪ್ರಜಾಪ್ರಭುತ್ವದ ತಳಹದಿಯಾಗಿರುವ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗಳನ್ನು ವಿವಿಧ ಸಂಘಟನೆಗಳ ಚಳುವಳಿಗಾರರು ಅರಿತು, ಮುಂಬರಲಿರುವ ಚುನಾವಣೆಯಲ್ಲಿ ಸ್ಪರ್ಧಿಸಿ ಸಾರ್ವಜನಿಕ ಸೇವೆಯಲ್ಲಿ ತೊಡಗುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಧ್ವನಿಗೂಡಿಸಲು ಸಹಕಾರವಾಗಲಿದೆ’ ಎಂದರು.</p>.<p>‘ರೈತಸಂಘ ಒಳಗೊಂಡಂತೆ ಹಲವು ಪ್ರಗತಿಪರ ಸಂಘಟನೆಗಳು ದಶಕಗಳಿಂದ ನಿರಂತರವಾಗಿ ಚಳವಳಿ ನಡೆಸಿ ಬದಲಾವಣೆಗೆ ಪ್ರಯತ್ನಿಸಿದರೂ ನಿರೀಕ್ಷಿತ ಮಟ್ಟಕ್ಕೆ ಫಲ ಸಿಕ್ಕಿಲ್ಲ. ಈ ಎಲ್ಲವನ್ನು ಅವಲೋಕಿಸಿದಾಗ ಜನರಿಂದ ಆಯ್ಕೆಗೊಂಡು, ಜನಪರ ಕಾಳಜಿಯಲ್ಲಿ ಸೇವೆ ಸಲ್ಲಿಸಿ ಸಾಮಾಜಿಕ ಬದಲಾವಣೆಗೆ ಒತ್ತು ನೀಡಬೇಕಿರುವುದು ಅನಿವಾರ್ಯ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ರೈತಸಂಘವು ಈಗಾಗಲೇ 25 ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯಲ್ಲಿ ತನ್ನ ಪ್ರತಿನಿಧಿಗಳನ್ನು ಗೆಲ್ಲಿಸಿ ಸ್ಥಳೀಯ ಆಡಳಿತ ಸುಧಾರಣೆಯಲ್ಲಿ ಮಂಚೂಣಿಯಲ್ಲಿದೆ. ಇದಕ್ಕೆ ಮೋದೂರು, ಶಾನುಬೋಗನಹಳ್ಳಿ ಪಂಚಾಯಿತಿ ಉತ್ತಮ ಉದಾಹರಣೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಅಗ್ರಹಾರ ರಾಮೇಗೌಡ, ತಂಬಾಕು ಬೆಳೆಗಾರರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಉಂಡವಾಡಿ ಚಂದ್ರೇಗೌಡ, ಪ್ರಗತಿಪರ ರೈತ ರಾಜು, ಜಯಣ್ಣ ಕಲ್ಲಹಳ್ಳಿ ಇದ್ದರು.</p>.<p><strong>‘ಸಾಂವಿಧಾನಿಕ ಶಕ್ತಿಯ ಅರಿವು’</strong> </p><p>ದಸಂಸ ಮುಖಂಡ ಅತ್ತಿಕುಪ್ಪೆ ರಾಮಕೃಷ್ಣ ಮಾತನಾಡಿ ‘ಹೋರಾಟದ ಮನಸ್ಥಿತಿಯಲ್ಲಿ ಚಳವಳಿ ನಡೆಸಿದರೂ ಜನಪ್ರತಿನಿಧಿಗಳ ಸಹಕಾರದಲ್ಲಿ ಪರಿವರ್ತನೆಗೆ ಒತ್ತು ನೀಡಲು ಈ ಕಾರ್ಯಾಗಾರ ಅಗತ್ಯವಾಗಿದೆ’ ಎಂದರು. ಸಿಪಿಎಂ ಮುಖಂಡ ಕಲ್ಕುಣಿಕೆ ಬಸವರಾಜ್ ಮಾತನಾಡಿ ‘ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳಿಗೆ ಇರುವ ಸಾಂವಿಧಾನಿಕ ಶಕ್ತಿಯನ್ನು ಬಳಸಿಕೊಂಡು ಸಾಮಾಜಿಕ ವ್ಯವಸ್ಥೆಯನ್ನು ಬದಲಿಸುವ ದಿಕ್ಕಿನಲ್ಲಿ ಕಾರ್ಯಾಗಾರ ಸಹಕಾರಿ’ ಎಂದರು.</p>.<p><strong>‘ಪಂಚಾಯತ್ ರಾಜ್ ವ್ಯವಸ್ಥೆ ತಿಳಿಯಿರಿ’</strong> </p><p>ಫೌಂಡೇಶನ್ನ ಸಂಪನ್ಮೂಲ ವ್ಯಕ್ತಿ ರಾಜು ಮಾತನಾಡಿ ‘ಕಳೆದ 5 ವರ್ಷದಿಂದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯದೇ ರಾಜ್ಯದ 5 ಲಕ್ಷ ಜನಪ್ರತಿನಿಧಿಗಳ ನಾಯಕತ್ವಕ್ಕೆ ಕುತ್ತು ತರಲಾಗಿದೆ. ಸಂವಿಧಾನದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆದ್ಯತೆ ಇದ್ದರೂ ಮೀಸಲಾತಿ ಹೆಸರಿನಲ್ಲಿ ಸ್ಥಳೀಯ ಚುನಾವಣೆ ನಡೆಸದಂತೆ ವ್ಯವಸ್ಥಿತವಾಗಿ ಕೈ ಕಟ್ಟಿ ಹಾಕಲಾಗಿದೆ. ಈ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಲು ಪಂಚಾಯತ್ ರಾಜ್ ವ್ಯವಸ್ಥೆ ಕುರಿತು ಸಮಗ್ರ ತಿಳುವಳಿಕೆ ಹೊಂದಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ‘ವಿವಿಧ ಸಂಘಟನೆಗಳ ಚಳವಳಿಗಾರರು ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಅಧಿಕಾರ ಹಿಡಿದರೆ ಸಾಮಾಜಿಕ ಬದಲಾವಣೆ ತರಲು ಸಾಧ್ಯ’ ಎಂದು ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್ ಹೇಳಿದರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಬ್ದುಲ್ ನಜೀರ್ಸಾಬ್ ಫೌಂಡೇಶನ್, ರೈತ ಸಂಘ, ದಲಿತ ಸಂಘರ್ಷ ಸಮಿತಿ(ದಸಂಸ) ಮತ್ತು ಪ್ರಗತಿಪರ ಸಂಘಟನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ಆಡಳಿತ ವ್ಯವಸ್ಥೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಪ್ರಜಾಪ್ರಭುತ್ವದ ತಳಹದಿಯಾಗಿರುವ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತ ವ್ಯವಸ್ಥೆಗಳನ್ನು ವಿವಿಧ ಸಂಘಟನೆಗಳ ಚಳುವಳಿಗಾರರು ಅರಿತು, ಮುಂಬರಲಿರುವ ಚುನಾವಣೆಯಲ್ಲಿ ಸ್ಪರ್ಧಿಸಿ ಸಾರ್ವಜನಿಕ ಸೇವೆಯಲ್ಲಿ ತೊಡಗುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಧ್ವನಿಗೂಡಿಸಲು ಸಹಕಾರವಾಗಲಿದೆ’ ಎಂದರು.</p>.<p>‘ರೈತಸಂಘ ಒಳಗೊಂಡಂತೆ ಹಲವು ಪ್ರಗತಿಪರ ಸಂಘಟನೆಗಳು ದಶಕಗಳಿಂದ ನಿರಂತರವಾಗಿ ಚಳವಳಿ ನಡೆಸಿ ಬದಲಾವಣೆಗೆ ಪ್ರಯತ್ನಿಸಿದರೂ ನಿರೀಕ್ಷಿತ ಮಟ್ಟಕ್ಕೆ ಫಲ ಸಿಕ್ಕಿಲ್ಲ. ಈ ಎಲ್ಲವನ್ನು ಅವಲೋಕಿಸಿದಾಗ ಜನರಿಂದ ಆಯ್ಕೆಗೊಂಡು, ಜನಪರ ಕಾಳಜಿಯಲ್ಲಿ ಸೇವೆ ಸಲ್ಲಿಸಿ ಸಾಮಾಜಿಕ ಬದಲಾವಣೆಗೆ ಒತ್ತು ನೀಡಬೇಕಿರುವುದು ಅನಿವಾರ್ಯ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ರೈತಸಂಘವು ಈಗಾಗಲೇ 25 ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯಲ್ಲಿ ತನ್ನ ಪ್ರತಿನಿಧಿಗಳನ್ನು ಗೆಲ್ಲಿಸಿ ಸ್ಥಳೀಯ ಆಡಳಿತ ಸುಧಾರಣೆಯಲ್ಲಿ ಮಂಚೂಣಿಯಲ್ಲಿದೆ. ಇದಕ್ಕೆ ಮೋದೂರು, ಶಾನುಬೋಗನಹಳ್ಳಿ ಪಂಚಾಯಿತಿ ಉತ್ತಮ ಉದಾಹರಣೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಅಗ್ರಹಾರ ರಾಮೇಗೌಡ, ತಂಬಾಕು ಬೆಳೆಗಾರರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಉಂಡವಾಡಿ ಚಂದ್ರೇಗೌಡ, ಪ್ರಗತಿಪರ ರೈತ ರಾಜು, ಜಯಣ್ಣ ಕಲ್ಲಹಳ್ಳಿ ಇದ್ದರು.</p>.<p><strong>‘ಸಾಂವಿಧಾನಿಕ ಶಕ್ತಿಯ ಅರಿವು’</strong> </p><p>ದಸಂಸ ಮುಖಂಡ ಅತ್ತಿಕುಪ್ಪೆ ರಾಮಕೃಷ್ಣ ಮಾತನಾಡಿ ‘ಹೋರಾಟದ ಮನಸ್ಥಿತಿಯಲ್ಲಿ ಚಳವಳಿ ನಡೆಸಿದರೂ ಜನಪ್ರತಿನಿಧಿಗಳ ಸಹಕಾರದಲ್ಲಿ ಪರಿವರ್ತನೆಗೆ ಒತ್ತು ನೀಡಲು ಈ ಕಾರ್ಯಾಗಾರ ಅಗತ್ಯವಾಗಿದೆ’ ಎಂದರು. ಸಿಪಿಎಂ ಮುಖಂಡ ಕಲ್ಕುಣಿಕೆ ಬಸವರಾಜ್ ಮಾತನಾಡಿ ‘ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳಿಗೆ ಇರುವ ಸಾಂವಿಧಾನಿಕ ಶಕ್ತಿಯನ್ನು ಬಳಸಿಕೊಂಡು ಸಾಮಾಜಿಕ ವ್ಯವಸ್ಥೆಯನ್ನು ಬದಲಿಸುವ ದಿಕ್ಕಿನಲ್ಲಿ ಕಾರ್ಯಾಗಾರ ಸಹಕಾರಿ’ ಎಂದರು.</p>.<p><strong>‘ಪಂಚಾಯತ್ ರಾಜ್ ವ್ಯವಸ್ಥೆ ತಿಳಿಯಿರಿ’</strong> </p><p>ಫೌಂಡೇಶನ್ನ ಸಂಪನ್ಮೂಲ ವ್ಯಕ್ತಿ ರಾಜು ಮಾತನಾಡಿ ‘ಕಳೆದ 5 ವರ್ಷದಿಂದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯದೇ ರಾಜ್ಯದ 5 ಲಕ್ಷ ಜನಪ್ರತಿನಿಧಿಗಳ ನಾಯಕತ್ವಕ್ಕೆ ಕುತ್ತು ತರಲಾಗಿದೆ. ಸಂವಿಧಾನದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆದ್ಯತೆ ಇದ್ದರೂ ಮೀಸಲಾತಿ ಹೆಸರಿನಲ್ಲಿ ಸ್ಥಳೀಯ ಚುನಾವಣೆ ನಡೆಸದಂತೆ ವ್ಯವಸ್ಥಿತವಾಗಿ ಕೈ ಕಟ್ಟಿ ಹಾಕಲಾಗಿದೆ. ಈ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಲು ಪಂಚಾಯತ್ ರಾಜ್ ವ್ಯವಸ್ಥೆ ಕುರಿತು ಸಮಗ್ರ ತಿಳುವಳಿಕೆ ಹೊಂದಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>