<p><strong>ಮೈಸೂರು</strong>: ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2023ರ ಮಾರ್ಚ್ನಲ್ಲಿ ನಡೆಯಲಿದೆ. ಮೈಸೂರಿನಲ್ಲೂ ಸಾಕ್ಷ್ಯಚಿತ್ರೋತ್ಸವ ಆಯೋಜಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಹೇಳಿದರು.</p>.<p>ರಂಗಾಯಣದಲ್ಲಿ ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಪ್ರಯುಕ್ತ ಶುಕ್ರವಾರ ‘ಭಾರತೀಯ ಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ವಿಶ್ವ ಸಿನಿಮಾಗಳ ಪ್ರದರ್ಶನವು ಬೆಂಗಳೂರಿನಾಚೆಗೂ ವಿಸ್ತರಿಸಬೇಕು. ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ರಂಗಾಯಣದ ಸಹಯೋಗದೊಂದಿಗೆ ಉತ್ಸವ ಮಾಡಲು ಯೋಜಿಸಲಾಗುವುದು’ ಎಂದರು.</p>.<p>‘ಬಹುರೂಪಿಯಲ್ಲಿ ಕಳೆದ 2 ದಶಕದಿಂದ ಚಲನಚಿತ್ರೋತ್ಸವ ಆಯೋಜಿಸುತ್ತಿರುವುದು ಅಭಿನಂದನೀಯ. ಪ್ರೊಜೆಕ್ಟರ್ ಸೇರಿದಂತೆ ಪ್ರದರ್ಶನಕ್ಕೆ ಬೇಕಾದ ಎಲ್ಲ ಪರಿಕರಗಳನ್ನು ಅಕಾಡೆಮಿಯಿಂದ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಬಹುರೂಪಿ ಚಲನಚಿತ್ರೋತ್ಸವಕ್ಕೆ ನೀಡಲು ಹಣವಿಲ್ಲವೆಂದು ಅಕಾಡೆಮಿಯ ಅಧಿಕಾರಿಗಳು ಹೇಳಿದ್ದರೂ, ವೈಯಕ್ತಿಕವಾಗಿ ಹಣ ನೀಡಿದ್ದೇನೆ. ಸರ್ಕಾರ ಮುಂದೆಯೂ ಕೊಡಲಿ, ಬಿಡಲಿ ಒಳ್ಳೆಯ ಕೆಲಸಗಳಿಗೆ ಹಣ ನೀಡಲು ಹಿಂದು– ಮುಂದು ನೋಡಬಾರದು’ ಎಂದು ಅಭಿಪ್ರಾಯಪಟ್ಟರು.</p>.<p>‘20 ಸಾವಿರಕ್ಕೂ ಹೆಚ್ಚು ವಿಶ್ವ ಸಿನಿಮಾಗಳ ಡಿವಿಡಿಗಳ ವೈಯಕ್ತಿಕ ಸಂಗ್ರಹವಿದ್ದು, ರಂಗಾಯಣಕ್ಕೆ ಹಸ್ತಾಂತರಿಸಲಾಗುವುದು. ಅದರಿಂದ ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಸಿನಿಮಾ ಪ್ರಜ್ಞೆ ಬೆಳೆಯುತ್ತದೆ’ ಎಂದು ತಿಳಿಸಿದರು.</p>.<p>ಚಲನಚಿತ್ರೋತ್ಸವಕ್ಕೆ ನಟ ದೊಡ್ಡಣ್ಣ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2023ರ ಮಾರ್ಚ್ನಲ್ಲಿ ನಡೆಯಲಿದೆ. ಮೈಸೂರಿನಲ್ಲೂ ಸಾಕ್ಷ್ಯಚಿತ್ರೋತ್ಸವ ಆಯೋಜಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಹೇಳಿದರು.</p>.<p>ರಂಗಾಯಣದಲ್ಲಿ ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಪ್ರಯುಕ್ತ ಶುಕ್ರವಾರ ‘ಭಾರತೀಯ ಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ವಿಶ್ವ ಸಿನಿಮಾಗಳ ಪ್ರದರ್ಶನವು ಬೆಂಗಳೂರಿನಾಚೆಗೂ ವಿಸ್ತರಿಸಬೇಕು. ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ರಂಗಾಯಣದ ಸಹಯೋಗದೊಂದಿಗೆ ಉತ್ಸವ ಮಾಡಲು ಯೋಜಿಸಲಾಗುವುದು’ ಎಂದರು.</p>.<p>‘ಬಹುರೂಪಿಯಲ್ಲಿ ಕಳೆದ 2 ದಶಕದಿಂದ ಚಲನಚಿತ್ರೋತ್ಸವ ಆಯೋಜಿಸುತ್ತಿರುವುದು ಅಭಿನಂದನೀಯ. ಪ್ರೊಜೆಕ್ಟರ್ ಸೇರಿದಂತೆ ಪ್ರದರ್ಶನಕ್ಕೆ ಬೇಕಾದ ಎಲ್ಲ ಪರಿಕರಗಳನ್ನು ಅಕಾಡೆಮಿಯಿಂದ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಬಹುರೂಪಿ ಚಲನಚಿತ್ರೋತ್ಸವಕ್ಕೆ ನೀಡಲು ಹಣವಿಲ್ಲವೆಂದು ಅಕಾಡೆಮಿಯ ಅಧಿಕಾರಿಗಳು ಹೇಳಿದ್ದರೂ, ವೈಯಕ್ತಿಕವಾಗಿ ಹಣ ನೀಡಿದ್ದೇನೆ. ಸರ್ಕಾರ ಮುಂದೆಯೂ ಕೊಡಲಿ, ಬಿಡಲಿ ಒಳ್ಳೆಯ ಕೆಲಸಗಳಿಗೆ ಹಣ ನೀಡಲು ಹಿಂದು– ಮುಂದು ನೋಡಬಾರದು’ ಎಂದು ಅಭಿಪ್ರಾಯಪಟ್ಟರು.</p>.<p>‘20 ಸಾವಿರಕ್ಕೂ ಹೆಚ್ಚು ವಿಶ್ವ ಸಿನಿಮಾಗಳ ಡಿವಿಡಿಗಳ ವೈಯಕ್ತಿಕ ಸಂಗ್ರಹವಿದ್ದು, ರಂಗಾಯಣಕ್ಕೆ ಹಸ್ತಾಂತರಿಸಲಾಗುವುದು. ಅದರಿಂದ ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಸಿನಿಮಾ ಪ್ರಜ್ಞೆ ಬೆಳೆಯುತ್ತದೆ’ ಎಂದು ತಿಳಿಸಿದರು.</p>.<p>ಚಲನಚಿತ್ರೋತ್ಸವಕ್ಕೆ ನಟ ದೊಡ್ಡಣ್ಣ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>