ರಂಗಾಯಣದಲ್ಲಿ ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಪ್ರಯುಕ್ತ ಶುಕ್ರವಾರ ‘ಭಾರತೀಯ ಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ವಿಶ್ವ ಸಿನಿಮಾಗಳ ಪ್ರದರ್ಶನವು ಬೆಂಗಳೂರಿನಾಚೆಗೂ ವಿಸ್ತರಿಸಬೇಕು. ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ರಂಗಾಯಣದ ಸಹಯೋಗದೊಂದಿಗೆ ಉತ್ಸವ ಮಾಡಲು ಯೋಜಿಸಲಾಗುವುದು’ ಎಂದರು.