ಈ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿದ್ದ ಮಹದೇವಪ್ಪ ಮತ್ತು ಸಣ್ಣಮ್ಮ ಅವರು ಸ್ಮಾರಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ, ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಇತ್ತೀಚೆಗಷ್ಟೇ ಇವರ ಅರ್ಜಿಯನ್ನು ವಜಾ ಮಾಡಿತ್ತು. ನಂತರ, ಗಿಡಗಂಟಿ ತೆರವುಗೊಳಿಸಲು ಬಂದ ಕೆಲಸಗಾರರನ್ನು ಕೆಲವರು ತಡೆದು ವಾಪಸ್ ಕಳುಹಿಸಿದ್ದರು. ಇದೀಗ ಪೊಲೀಸ್ ಬಿಗಿಭದ್ರತೆ ನಡುವೆ ಸ್ಮಾರಕ ನಿರ್ಮಾಣ ಕಾರ್ಯ ಆರಂಭಗೊಂಡಿದೆ.