<p><strong>ಮೈಸೂರು:</strong> ‘ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ. ಸರ್ಕಾರಿ ಅಧಿಕಾರಿಗಳು ಶಾಸಕರ ಕೃಪಾ ಪೋಷಿತರಾಗಿದ್ದಾರೆ. ಶಾಸಕರು ಆಯಾ ಕ್ಷೇತ್ರದ ಮಾಲೀಕರಂತೆ ವರ್ತಿಸುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಟೀಕಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇವೆಲ್ಲದ ಮಾಹಿತಿ ಸಿದ್ದರಾಮಯ್ಯ ಅವರಿಗೆ ಇದ್ದರೂ ಕೇಳುತ್ತಿಲ್ಲ. ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತು ಸ್ನೇಹಿತರು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಎಸಿಪಿ ಮೈಸೂರಿಗೆ ವರ್ಗಾವಣೆ ಮಾಡಿಸಿಕೊಳ್ಳಲು ₹ 1 ಕೋಟಿ, ಇನ್ಸ್ಪೆಕ್ಟರ್ ₹ 75 ಲಕ್ಷ ಹಾಗೂ ಸಬ್ ಇನ್ಸ್ಪೆಕ್ಟರ್ ₹ 50 ಲಕ್ಷ ಕೊಡಬೇಕಿದೆ’ ಎಂದು ಆರೋಪಿಸಿದರು. </p>.<p class="Subhead">ಹೈಕಮಾಂಡ್ ಸುಪ್ರೀಂ: ‘ಕಾಂಗ್ರೆಸ್ನಲ್ಲಿ ಹೈಕಮಾಂಡ್ ನಿರ್ಧಾರವೇ ಸುಪ್ರೀಂ. ಡಿ.ಕೆ.ಶಿವಕುಮಾರ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಸಿದ್ದರಾಮಯ್ಯ ಪಕ್ಷ ಕಟ್ಟದಿದ್ದರೂ ಅಧಿಕಾರ ಅನುಭವಿಸುತ್ತಿದ್ದಾರೆ. ಅವರು ಪಕ್ಷವನ್ನು ಸರ್ವನಾಶ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆಯನ್ನು ಅವರ ಹೈಕಮಾಂಡ್ ನಿರ್ಧರಿಸಲಿದೆ’ ಎಂದು ವಿಶ್ವನಾಥ್ ಹೇಳಿದರು.</p>.<p>‘ಮಡಿವಾಳರು ಶಾಸಕರಾಗಲು ಸಿದ್ದರಾಮಯ್ಯ ಬಿಟ್ಟಿಲ್ಲ. ತೋರಿಕೆಗೆ ವಿಭೂತಿ, ಕುಂಕುಮ ಹಾಕಿಕೊಂಡು ಹಿಂದೂ ಅನ್ನುತ್ತಿದ್ದಾರೆ. ಕಾಂತರಾಜು ಆಯೋಗದ ವರದಿಯನ್ನು ಅನುಮೋದಿಸಿ. ಬೂಟಾಟಿಕೆ ಮಾಡುವುದಲ್ಲ’ ಎಂದು ಹೇಳಿದ ಅವರು, ‘ಕೆ.ಆರ್.ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆಗೆ ₹ 100 ಕೋಟಿ ನೀಡಿದ್ದರೆ, ಕಾರ್ಖಾನೆಯು ನಡೆಯುತ್ತಿತ್ತು. ಇಂಥ ಒಳ್ಳೆ ಕೆಲಸಗಳನ್ನು ಕಾಂಗ್ರೆಸ್ ಮಾಡುವುದಿಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ. ಸರ್ಕಾರಿ ಅಧಿಕಾರಿಗಳು ಶಾಸಕರ ಕೃಪಾ ಪೋಷಿತರಾಗಿದ್ದಾರೆ. ಶಾಸಕರು ಆಯಾ ಕ್ಷೇತ್ರದ ಮಾಲೀಕರಂತೆ ವರ್ತಿಸುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಟೀಕಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇವೆಲ್ಲದ ಮಾಹಿತಿ ಸಿದ್ದರಾಮಯ್ಯ ಅವರಿಗೆ ಇದ್ದರೂ ಕೇಳುತ್ತಿಲ್ಲ. ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತು ಸ್ನೇಹಿತರು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಎಸಿಪಿ ಮೈಸೂರಿಗೆ ವರ್ಗಾವಣೆ ಮಾಡಿಸಿಕೊಳ್ಳಲು ₹ 1 ಕೋಟಿ, ಇನ್ಸ್ಪೆಕ್ಟರ್ ₹ 75 ಲಕ್ಷ ಹಾಗೂ ಸಬ್ ಇನ್ಸ್ಪೆಕ್ಟರ್ ₹ 50 ಲಕ್ಷ ಕೊಡಬೇಕಿದೆ’ ಎಂದು ಆರೋಪಿಸಿದರು. </p>.<p class="Subhead">ಹೈಕಮಾಂಡ್ ಸುಪ್ರೀಂ: ‘ಕಾಂಗ್ರೆಸ್ನಲ್ಲಿ ಹೈಕಮಾಂಡ್ ನಿರ್ಧಾರವೇ ಸುಪ್ರೀಂ. ಡಿ.ಕೆ.ಶಿವಕುಮಾರ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಸಿದ್ದರಾಮಯ್ಯ ಪಕ್ಷ ಕಟ್ಟದಿದ್ದರೂ ಅಧಿಕಾರ ಅನುಭವಿಸುತ್ತಿದ್ದಾರೆ. ಅವರು ಪಕ್ಷವನ್ನು ಸರ್ವನಾಶ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆಯನ್ನು ಅವರ ಹೈಕಮಾಂಡ್ ನಿರ್ಧರಿಸಲಿದೆ’ ಎಂದು ವಿಶ್ವನಾಥ್ ಹೇಳಿದರು.</p>.<p>‘ಮಡಿವಾಳರು ಶಾಸಕರಾಗಲು ಸಿದ್ದರಾಮಯ್ಯ ಬಿಟ್ಟಿಲ್ಲ. ತೋರಿಕೆಗೆ ವಿಭೂತಿ, ಕುಂಕುಮ ಹಾಕಿಕೊಂಡು ಹಿಂದೂ ಅನ್ನುತ್ತಿದ್ದಾರೆ. ಕಾಂತರಾಜು ಆಯೋಗದ ವರದಿಯನ್ನು ಅನುಮೋದಿಸಿ. ಬೂಟಾಟಿಕೆ ಮಾಡುವುದಲ್ಲ’ ಎಂದು ಹೇಳಿದ ಅವರು, ‘ಕೆ.ಆರ್.ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆಗೆ ₹ 100 ಕೋಟಿ ನೀಡಿದ್ದರೆ, ಕಾರ್ಖಾನೆಯು ನಡೆಯುತ್ತಿತ್ತು. ಇಂಥ ಒಳ್ಳೆ ಕೆಲಸಗಳನ್ನು ಕಾಂಗ್ರೆಸ್ ಮಾಡುವುದಿಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>