<p><strong>ಮೈಸೂರು:</strong> ಯುವ ಸಮುದಾಯಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಜ್ಞಾನಿಕ ಉತ್ತೇಜನಕ್ಕಾಗಿ ಮೈಸೂರಿನಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ತಾರಾಲಯಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ₹ 5 ಕೋಟಿ ಹೆಚ್ಚುವರಿ ಅನುದಾನವನ್ನು ಸಂಸದರ ನಿಧಿಯಿಂದ ಬಿಡುಗಡೆ ಮಾಡಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.</p>.ಶಿಕ್ಷಣ ವ್ಯವಸ್ಥೆಯಲ್ಲಿ ತಾಂತ್ರಿಕ ಬದಲಾವಣೆ ಅಗತ್ಯ: ಸಂಸದ ಯದುವೀರ ಒಡೆಯರ್ .<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸಚಿವರು ಮೈಸೂರಿನಲ್ಲಿ ಕಾಸ್ಮೋಲಜಿ– ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಹೆಚ್ಚುವರಿ ಅನುದಾನ ಮಂಜೂರು ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.</p><p>‘ಈ ಪ್ರಮುಖ ಯೋಜನೆಯು ಮೈಸೂರಿನ ಪ್ರವಾಸಿ ತಾಣದ ಹೆಗ್ಗುರುತಿಗೆ ಮತ್ತೊಂದು ಸೇರ್ಪಡೆಯಾಗಲಿದೆ. ಸ್ಥಳೀಯ ಅಭಿವೃದ್ಧಿಗೆ ಹೊಸ ಮಾರ್ಗ ಅವಕಾಶ ಒದಗಿಸುತ್ತದೆ. ಜ್ಞಾನದ ಕೇಂದ್ರವಾಗಿ ಮೈಸೂರಿನ ಪರಂಪರೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ. ವಿಶ್ವದ ಮೊದಲ ‘ಬಾಗಿದ ಗುಮ್ಮಟ ತಾರಾಲಯ’ವನ್ನು</p><p>ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ನಿರ್ಮಿಸಲಾಗುತ್ತಿದೆ. ಇದು ವಿಶ್ವದ ಮೊದಲ ಬಾಗಿದ ಗುಮ್ಮಟಾಕೃತ್ತಿಯ ಎಲ್ಇಡಿ ತಾರಾಲಯವಾಗಲಿದೆ’ ಎಂದು ಹೇಳಿದ್ದಾರೆ.</p>.ಮಾನವ–ಪ್ರಾಣಿ ಸಂಘರ್ಷ ತಡೆಗೆ ಕ್ರಮ: ಸಂಸದ ಯದುವೀರ ಒಡೆಯರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಯುವ ಸಮುದಾಯಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಜ್ಞಾನಿಕ ಉತ್ತೇಜನಕ್ಕಾಗಿ ಮೈಸೂರಿನಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ತಾರಾಲಯಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ₹ 5 ಕೋಟಿ ಹೆಚ್ಚುವರಿ ಅನುದಾನವನ್ನು ಸಂಸದರ ನಿಧಿಯಿಂದ ಬಿಡುಗಡೆ ಮಾಡಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.</p>.ಶಿಕ್ಷಣ ವ್ಯವಸ್ಥೆಯಲ್ಲಿ ತಾಂತ್ರಿಕ ಬದಲಾವಣೆ ಅಗತ್ಯ: ಸಂಸದ ಯದುವೀರ ಒಡೆಯರ್ .<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸಚಿವರು ಮೈಸೂರಿನಲ್ಲಿ ಕಾಸ್ಮೋಲಜಿ– ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಹೆಚ್ಚುವರಿ ಅನುದಾನ ಮಂಜೂರು ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.</p><p>‘ಈ ಪ್ರಮುಖ ಯೋಜನೆಯು ಮೈಸೂರಿನ ಪ್ರವಾಸಿ ತಾಣದ ಹೆಗ್ಗುರುತಿಗೆ ಮತ್ತೊಂದು ಸೇರ್ಪಡೆಯಾಗಲಿದೆ. ಸ್ಥಳೀಯ ಅಭಿವೃದ್ಧಿಗೆ ಹೊಸ ಮಾರ್ಗ ಅವಕಾಶ ಒದಗಿಸುತ್ತದೆ. ಜ್ಞಾನದ ಕೇಂದ್ರವಾಗಿ ಮೈಸೂರಿನ ಪರಂಪರೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ. ವಿಶ್ವದ ಮೊದಲ ‘ಬಾಗಿದ ಗುಮ್ಮಟ ತಾರಾಲಯ’ವನ್ನು</p><p>ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ನಿರ್ಮಿಸಲಾಗುತ್ತಿದೆ. ಇದು ವಿಶ್ವದ ಮೊದಲ ಬಾಗಿದ ಗುಮ್ಮಟಾಕೃತ್ತಿಯ ಎಲ್ಇಡಿ ತಾರಾಲಯವಾಗಲಿದೆ’ ಎಂದು ಹೇಳಿದ್ದಾರೆ.</p>.ಮಾನವ–ಪ್ರಾಣಿ ಸಂಘರ್ಷ ತಡೆಗೆ ಕ್ರಮ: ಸಂಸದ ಯದುವೀರ ಒಡೆಯರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>