‘ಜಿಲ್ಲೆಯಲ್ಲಿ 3,100 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಕೆ.ಆರ್.ಕ್ಷೇತ್ರದಲ್ಲಿ ಗುರುತಿಸಿರುವ ಮಕ್ಕಳ ಆರೋಗ್ಯ ತಪಾಸಣಾ ಕಾರ್ಯ ಸಿದ್ಧಾರ್ಥನಗರದ ಜೆಎಸ್ಎಸ್ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ಆ ಮಕ್ಕಳನ್ನು ಅಪೌಷ್ಟಿಕತೆಯಿಂದ ಹಾಗೂ ರೋಗಮುಕ್ತರನ್ನಾಗಿ ಮಾಡಲು ದತ್ತು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಆರೋಗ್ಯ ಕಾರ್ಡ್ ನೀಡುತ್ತಿದ್ದೇವೆ. ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೇಂದ್ರ ಸರ್ಕಾರದ ಪೋಷಣ ಅಭಿಯಾನ ಯೋಜನೆಗಳಡಿ ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುತ್ತದೆ. 2022ರ ಸೆ.17ರಂದು ಮೋದಿ ಅವರ ಜನ್ಮದಿನದಂದು 156 ಮಕ್ಕಳನ್ನು ಮುಖ್ಯವಾಹಿನಿಗೆ ತಂದು, ಅವರ ಆರೋಗ್ಯ ಕಾರ್ಡ್ಗಳನ್ನು ಬಿಡುಗಡೆ ಮಾಡಲಾಗುವುದು’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.