<p><strong>ಮೈಸೂರು:</strong> ಎರಡು ತಿಂಗಳು ಕಳೆದರೂ ಸರ್ಕಾರ ಬೇಡಿಕೆ ಈಡೇರಿಸುವ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ, ಮತ್ತೆ ಸೆ.21ರಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ನ (ಎಐಯುಟಿಯುಸಿ) ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ ತಿಳಿಸಿದರು.</p>.<p>‘ಹಣ ಇಲ್ಲ ಎಂದರೆ ಸರ್ಕಾರ ನೇರವಾಗಿಯೇ ಹೇಳಲಿ. ನಾವು ಸುಮ್ಮನಿರಲು ಸಿದ್ಧ. ಆದರೆ, ಬೇಡಿಕೆ ಈಡೇರಿಸುವ ಭರವಸೆಯನ್ನು ಸ್ವತಃ ಮುಖ್ಯಮಂತ್ರಿಯೇ ನೀಡಿ 2 ತಿಂಗಳಾದರೂ ಬೇಡಿಕೆ ಈಡೇರದೇ ಹೋದರೆ ಕೊಟ್ಟ ಮಾತಿಗೆ ತಪ್ಪಿದ ಸರ್ಕಾರ ಎಂದು ಕರೆಯದೇ ಬೇರೆ ವಿಧಿ ಇಲ್ಲ’ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.</p>.<p>ವಿಧಾನಸಭಾ ಅಧಿವೇಶನ ನಡೆಯುವಷ್ಟೂ ದಿನ ಒಂದಲ್ಲ ಒಂದು ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು. ಒಂದು ವೇಳೆ ಇದಕ್ಕೂ ಬೇಡಿಕೆ ಈಡೇರದೇ ಹೋದರೆ ಎಲ್ಲ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಬಂದು ಒಗ್ಗಟ್ಟಾಗಿ ಪ್ರತಿಭಟನೆ ನಡೆಸುವರು ಎಂದು ಎಚ್ಚರಿಕೆ ನೀಡಿದರು.</p>.<p>ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಸಮಿತಿ ಸದಸ್ಯೆ ಪಿ.ಎಸ್.ಸಂಧ್ಯಾ ಮಾತನಾಡಿ, ‘ಸರ್ಕಾರ ನೀಡಿದ ಭರವಸೆಯಂತೆ ₹12 ಸಾವಿರ ಮಾಸಿಕ ವೇತನ ನೀಡಬೇಕು. ಬಾಕಿ ಇರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು. ಈಗಾಗಲೇ ಘೋಷಿಸಿದ ₹3 ಸಾವಿರ ಕೋವಿಡ್ ಪ್ರೋತ್ಸಾಹಧನವನ್ನು ಇನ್ನೂ ತಲುಪದೇ ಇರುವ ಆಶಾಗಳಿಗೆ ಪಾವತಿಸಬೇಕು’ ಎಂದು ಆಗ್ರಹಿಸಿದರು.</p>.<p>ನಗರ ಘಟಕದ ಕಾರ್ಯದರ್ಶಿ ಸುನೀತಾ ಮಾತನಾಡಿ, ‘ಆಶಾ ಕಾರ್ಯಕರ್ತೆಯರನ್ನು ಸರ್ಕಾರ ನಿಕೃಷ್ಟವಾಗಿ ಕಾಣುತ್ತಿದೆ. ಹೆಚ್ಚಿನ ಕೆಲಸಗಳನ್ನು ನೀಡುತ್ತಿದೆ. ನಮಗೆ ಸೂಕ್ತವಾದ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಶುಭಮಂಗಳಾ, ಶೋಭಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಎರಡು ತಿಂಗಳು ಕಳೆದರೂ ಸರ್ಕಾರ ಬೇಡಿಕೆ ಈಡೇರಿಸುವ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ, ಮತ್ತೆ ಸೆ.21ರಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ನ (ಎಐಯುಟಿಯುಸಿ) ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ ತಿಳಿಸಿದರು.</p>.<p>‘ಹಣ ಇಲ್ಲ ಎಂದರೆ ಸರ್ಕಾರ ನೇರವಾಗಿಯೇ ಹೇಳಲಿ. ನಾವು ಸುಮ್ಮನಿರಲು ಸಿದ್ಧ. ಆದರೆ, ಬೇಡಿಕೆ ಈಡೇರಿಸುವ ಭರವಸೆಯನ್ನು ಸ್ವತಃ ಮುಖ್ಯಮಂತ್ರಿಯೇ ನೀಡಿ 2 ತಿಂಗಳಾದರೂ ಬೇಡಿಕೆ ಈಡೇರದೇ ಹೋದರೆ ಕೊಟ್ಟ ಮಾತಿಗೆ ತಪ್ಪಿದ ಸರ್ಕಾರ ಎಂದು ಕರೆಯದೇ ಬೇರೆ ವಿಧಿ ಇಲ್ಲ’ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.</p>.<p>ವಿಧಾನಸಭಾ ಅಧಿವೇಶನ ನಡೆಯುವಷ್ಟೂ ದಿನ ಒಂದಲ್ಲ ಒಂದು ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು. ಒಂದು ವೇಳೆ ಇದಕ್ಕೂ ಬೇಡಿಕೆ ಈಡೇರದೇ ಹೋದರೆ ಎಲ್ಲ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಬಂದು ಒಗ್ಗಟ್ಟಾಗಿ ಪ್ರತಿಭಟನೆ ನಡೆಸುವರು ಎಂದು ಎಚ್ಚರಿಕೆ ನೀಡಿದರು.</p>.<p>ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಸಮಿತಿ ಸದಸ್ಯೆ ಪಿ.ಎಸ್.ಸಂಧ್ಯಾ ಮಾತನಾಡಿ, ‘ಸರ್ಕಾರ ನೀಡಿದ ಭರವಸೆಯಂತೆ ₹12 ಸಾವಿರ ಮಾಸಿಕ ವೇತನ ನೀಡಬೇಕು. ಬಾಕಿ ಇರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು. ಈಗಾಗಲೇ ಘೋಷಿಸಿದ ₹3 ಸಾವಿರ ಕೋವಿಡ್ ಪ್ರೋತ್ಸಾಹಧನವನ್ನು ಇನ್ನೂ ತಲುಪದೇ ಇರುವ ಆಶಾಗಳಿಗೆ ಪಾವತಿಸಬೇಕು’ ಎಂದು ಆಗ್ರಹಿಸಿದರು.</p>.<p>ನಗರ ಘಟಕದ ಕಾರ್ಯದರ್ಶಿ ಸುನೀತಾ ಮಾತನಾಡಿ, ‘ಆಶಾ ಕಾರ್ಯಕರ್ತೆಯರನ್ನು ಸರ್ಕಾರ ನಿಕೃಷ್ಟವಾಗಿ ಕಾಣುತ್ತಿದೆ. ಹೆಚ್ಚಿನ ಕೆಲಸಗಳನ್ನು ನೀಡುತ್ತಿದೆ. ನಮಗೆ ಸೂಕ್ತವಾದ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಶುಭಮಂಗಳಾ, ಶೋಭಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>