ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಮಾನಿಗಳು ಮಂಗಳವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಫಲಕಕ್ಕೆ ಪೂಜೆ ಮಾಡಿಸಿದ್ದರು.ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆಗೂ ಮುನ್ನವೇ, ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಮಾನಿಗಳು ಮಂಗಳವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಫಲಕಕ್ಕೆ ಪೂಜೆ ಮಾಡಿಸಿದ್ದಾರೆ.
'ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದರು' ಎಂದು ಬರೆದಿರುವ ಬೋರ್ಡ್ಗೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮಾಡಿಸಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ.
ಕ್ಷೇತ್ರದ ಮತ ಎಣಿಕೆ ಮುಂದುವರಿದಿದ್ದು, ಯದುವೀರ್ ಈವರೆಗೆ 99,197 ಮತಗಳಿಂದ ಭಾರಿ ಮುನ್ನಡೆ ಗಳಿಸಿದ್ದಾರೆ.