<p><strong>ಮೈಸೂರು:</strong> ಶಾಂತಿ ಮತ್ತು ಅಹಿಂಸೆ ಪ್ರತಿಪಾದನೆಯ ಆಶಯದೊಂದಿಗೆ ನಗರದಲ್ಲಿ ಭಾನುವಾರ ನಡೆದ ‘ಅಹಿಂಸಾ ಓಟ’ದಲ್ಲಿ ನೂರಾರು ಆಸಕ್ತರು ಹೆಜ್ಜೆ ಹಾಕಿದರು.</p>.<p>ಬೆಳಿಗ್ಗೆ ಅರಮನೆ ಆವರಣದ ಕೋಟೆ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿ ‘ಬಿಗ್ಬಾಸ್’ ರಿಯಾಲಿಟಿ ಶೋ ವಿಜೇತ ಕಾರ್ತಿಕ್ ಮಹೇಶ್ ಮ್ಯಾರಥಾನ್ಗೆ ಹಸಿರು ನಿಶಾನೆ ತೋರಿದರು. 3 ಕಿ.ಮೀ, 5 ಕಿ.ಮೀ ಹಾಗೂ 10 ಕಿ.ಮೀ. ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ಎಲ್ಲ ವಯೋಮಾನದವರೂ ಉತ್ಸಾಹದಿಂದ ಪಾಲ್ಗೊಂಡರು. ವಿಜೇತರು ಪದಕಕ್ಕೆ ಕೊರಳೊಡ್ಡುವ ಜೊತೆಗೆ ನಗದು ಬಹುಮಾನವನ್ನೂ ತಮ್ಮದಾಗಿಸಿಕೊಂಡರು.</p>.<p>ಜೈನ್ ಅಂತರರಾಷ್ಟ್ರೀಯ ವ್ಯಾಪಾರ ಒಕ್ಕೂಟದ (ಜಿತೊ) ಮಹಿಳಾ ಘಟಕವು ಈ ಮ್ಯಾರಥಾನ್ ಆಯೋಜಿಸಿದ್ದು ದೇಶದ 69 ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಕ್ರಮ ನಡೆಯಿತು. ಜಿತೊ ಮೈಸೂರು ಘಟಕದ ಅಧ್ಯಕ್ಷ ಕಾಂತಿಲಾಲ್ ಜೈನ್, ಪ್ರಧಾನ ಕಾರ್ಯದರ್ಶಿ ಗೌತಮ್ ಸಲೇಚ, ಮಹಿಳಾ ಘಟಕದ ಅಧ್ಯಕ್ಷೆ ಮೋನಾ ಬತೇವ್ರ, ಪ್ರಧಾನ ಕಾರ್ಯದರ್ಶಿ ರಜಿನಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಶಾಂತಿ ಮತ್ತು ಅಹಿಂಸೆ ಪ್ರತಿಪಾದನೆಯ ಆಶಯದೊಂದಿಗೆ ನಗರದಲ್ಲಿ ಭಾನುವಾರ ನಡೆದ ‘ಅಹಿಂಸಾ ಓಟ’ದಲ್ಲಿ ನೂರಾರು ಆಸಕ್ತರು ಹೆಜ್ಜೆ ಹಾಕಿದರು.</p>.<p>ಬೆಳಿಗ್ಗೆ ಅರಮನೆ ಆವರಣದ ಕೋಟೆ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿ ‘ಬಿಗ್ಬಾಸ್’ ರಿಯಾಲಿಟಿ ಶೋ ವಿಜೇತ ಕಾರ್ತಿಕ್ ಮಹೇಶ್ ಮ್ಯಾರಥಾನ್ಗೆ ಹಸಿರು ನಿಶಾನೆ ತೋರಿದರು. 3 ಕಿ.ಮೀ, 5 ಕಿ.ಮೀ ಹಾಗೂ 10 ಕಿ.ಮೀ. ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ಎಲ್ಲ ವಯೋಮಾನದವರೂ ಉತ್ಸಾಹದಿಂದ ಪಾಲ್ಗೊಂಡರು. ವಿಜೇತರು ಪದಕಕ್ಕೆ ಕೊರಳೊಡ್ಡುವ ಜೊತೆಗೆ ನಗದು ಬಹುಮಾನವನ್ನೂ ತಮ್ಮದಾಗಿಸಿಕೊಂಡರು.</p>.<p>ಜೈನ್ ಅಂತರರಾಷ್ಟ್ರೀಯ ವ್ಯಾಪಾರ ಒಕ್ಕೂಟದ (ಜಿತೊ) ಮಹಿಳಾ ಘಟಕವು ಈ ಮ್ಯಾರಥಾನ್ ಆಯೋಜಿಸಿದ್ದು ದೇಶದ 69 ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಕ್ರಮ ನಡೆಯಿತು. ಜಿತೊ ಮೈಸೂರು ಘಟಕದ ಅಧ್ಯಕ್ಷ ಕಾಂತಿಲಾಲ್ ಜೈನ್, ಪ್ರಧಾನ ಕಾರ್ಯದರ್ಶಿ ಗೌತಮ್ ಸಲೇಚ, ಮಹಿಳಾ ಘಟಕದ ಅಧ್ಯಕ್ಷೆ ಮೋನಾ ಬತೇವ್ರ, ಪ್ರಧಾನ ಕಾರ್ಯದರ್ಶಿ ರಜಿನಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>