<p><strong>ಮೈಸೂರು</strong>: ವಿಜಯನಗರದ ಕನ್ನಡ ಭವನದಲ್ಲಿ ‘ಅಕ್ಷರ ನಾದ ಪ್ರಕಾಶನ’ ಹೊರತಂದಿರುವ ವಿವಿಧ ಲೇಖಕರು ಬರೆದಿರುವ 38 ಕೃತಿಗಳನ್ನು ಲೇಖಕ ಪ್ರೊ.ಅರವಿಂದ ಮಾಲಗತ್ತಿ ಭಾನುವಾರ ಬಿಡುಗಡೆ ಮಾಡಿದರು. </p>.<p>ನಂತರ ಮಾತನಾಡಿ, ‘ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದು, ಸಾಧನೆ ಬಗ್ಗೆ ಪುರುಷ ಸಮಾಜ ವ್ಯಂಗ್ಯವಾಡಬಾರದು. ಅವರಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕು’ ಎಂದರು.</p>.<p>‘ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹೊಸ ಲೇಖಕರನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಾಮಾನ್ಯ ಕೆಲಸವಲ್ಲ. ಅಕ್ಷರನಾದ ಪ್ರಕಾಶನವು 38 ಲೇಖಕರ ಕೃತಿಗಳನ್ನು ಹೊರತಂದಿದೆ. ಪ್ರಕಾಶನದ ಶ್ರುತಿ ಮಧುಸೂದನ್ ಉತ್ತಮ ಕಾರ್ಯ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.</p>.<p>‘ರನ್ನನ ಅಜಿತನಾಥ ಪುರಾಣವನ್ನು ಅತ್ತಿಮಬ್ಬೆ ಅನೇಕ ಪ್ರತಿಗಳನ್ನು ಅಚ್ಚು ಹಾಕಿಸಿ ಹಂಚಿದ್ದರು. ಮಹಿಳೆಯರು ಕೃತಿ ಪ್ರಕಟಣೆಯ ಪುಣ್ಯದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇಂಥ ಕೆಲಸ ಮಾಡುವುದು ಧಾರ್ಮಿಕ ಸೇವೆಯೆಂದು ಅತ್ತಿಮಬ್ಬೆ ತಿಳಿದಿದ್ದಳು. ಅಂತಹ ಪರಂಪರೆಯನ್ನು ಶ್ರುತಿ ಮುಂದುವರಿಸಿದ್ದಾರೆ’ ಎಂದರು.</p>.<p>‘ಜಗತ್ತು ತಂತ್ರಜ್ಞಾನ ಅವಲಂಬಿಸಿದೆ. ಈ ಮೊಬೈಲ್ ಕಾಲದಲ್ಲಿ ಲೇಖಕರೇ ಆಗುತ್ತಿದ್ದಾರೆ. ಪ್ರತಿಯೊಬ್ಬರೂ ಸಾಮಾನ್ಯ ಜನತೆಯ ನೋವು, ಅನಿಸಿಕೆ, ಅಭಿಪ್ರಾಯ ಹಂಚಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಅಕ್ಷರನಾದ ಪ್ರಕಾಶನದ ಶ್ರುತಿ ಮಧುಸೂದನ್, ಉಪಾಧ್ಯಕ್ಷ ಕೆ.ಮಧುಸೂದನ್ ಆಚಾರ್, ನಟ ಶಿವಕುಮಾರ್, ಲೇಖಕರಾದ ಮಂಜುಳಾ ಪಾವಗಡ, ಸಿದ್ದನಕೊಪ್ಪಲು ಕುಮಾರ್, ಟಿ.ತ್ಯಾಗರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ವಿಜಯನಗರದ ಕನ್ನಡ ಭವನದಲ್ಲಿ ‘ಅಕ್ಷರ ನಾದ ಪ್ರಕಾಶನ’ ಹೊರತಂದಿರುವ ವಿವಿಧ ಲೇಖಕರು ಬರೆದಿರುವ 38 ಕೃತಿಗಳನ್ನು ಲೇಖಕ ಪ್ರೊ.ಅರವಿಂದ ಮಾಲಗತ್ತಿ ಭಾನುವಾರ ಬಿಡುಗಡೆ ಮಾಡಿದರು. </p>.<p>ನಂತರ ಮಾತನಾಡಿ, ‘ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದು, ಸಾಧನೆ ಬಗ್ಗೆ ಪುರುಷ ಸಮಾಜ ವ್ಯಂಗ್ಯವಾಡಬಾರದು. ಅವರಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕು’ ಎಂದರು.</p>.<p>‘ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹೊಸ ಲೇಖಕರನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಾಮಾನ್ಯ ಕೆಲಸವಲ್ಲ. ಅಕ್ಷರನಾದ ಪ್ರಕಾಶನವು 38 ಲೇಖಕರ ಕೃತಿಗಳನ್ನು ಹೊರತಂದಿದೆ. ಪ್ರಕಾಶನದ ಶ್ರುತಿ ಮಧುಸೂದನ್ ಉತ್ತಮ ಕಾರ್ಯ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.</p>.<p>‘ರನ್ನನ ಅಜಿತನಾಥ ಪುರಾಣವನ್ನು ಅತ್ತಿಮಬ್ಬೆ ಅನೇಕ ಪ್ರತಿಗಳನ್ನು ಅಚ್ಚು ಹಾಕಿಸಿ ಹಂಚಿದ್ದರು. ಮಹಿಳೆಯರು ಕೃತಿ ಪ್ರಕಟಣೆಯ ಪುಣ್ಯದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇಂಥ ಕೆಲಸ ಮಾಡುವುದು ಧಾರ್ಮಿಕ ಸೇವೆಯೆಂದು ಅತ್ತಿಮಬ್ಬೆ ತಿಳಿದಿದ್ದಳು. ಅಂತಹ ಪರಂಪರೆಯನ್ನು ಶ್ರುತಿ ಮುಂದುವರಿಸಿದ್ದಾರೆ’ ಎಂದರು.</p>.<p>‘ಜಗತ್ತು ತಂತ್ರಜ್ಞಾನ ಅವಲಂಬಿಸಿದೆ. ಈ ಮೊಬೈಲ್ ಕಾಲದಲ್ಲಿ ಲೇಖಕರೇ ಆಗುತ್ತಿದ್ದಾರೆ. ಪ್ರತಿಯೊಬ್ಬರೂ ಸಾಮಾನ್ಯ ಜನತೆಯ ನೋವು, ಅನಿಸಿಕೆ, ಅಭಿಪ್ರಾಯ ಹಂಚಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಅಕ್ಷರನಾದ ಪ್ರಕಾಶನದ ಶ್ರುತಿ ಮಧುಸೂದನ್, ಉಪಾಧ್ಯಕ್ಷ ಕೆ.ಮಧುಸೂದನ್ ಆಚಾರ್, ನಟ ಶಿವಕುಮಾರ್, ಲೇಖಕರಾದ ಮಂಜುಳಾ ಪಾವಗಡ, ಸಿದ್ದನಕೊಪ್ಪಲು ಕುಮಾರ್, ಟಿ.ತ್ಯಾಗರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>