ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇನಾಮಿ ಆಸ್ತಿ ಮಾಡಿದ ಶಾಸಕ ಎನ್‌. ಮಹೇಶ್: ಬಿಎಸ್‌ಪಿ ಮುಖಂಡ ಆರೋಪ

Last Updated 3 ಡಿಸೆಂಬರ್ 2020, 2:15 IST
ಅಕ್ಷರ ಗಾತ್ರ

ಕೊಳ್ಳೇಗಾಲ: ‘ಬಿಎಸ್‌ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ ಮಾಧ್ಯ ಮಗಳ ಮುಂದೆ ಹಸಿ ಸುಳ್ಳು ಹೇಳುತ್ತಿದ್ದಾರೆ’ ಎಂದು ಬಿಎಸ್‌ಪಿ ಕ್ಷೇತ್ರಾಧ್ಯಕ್ಷ ರಾಜಶೇಖರ್ ಮೂರ್ತಿ ಆರೋಪಿಸಿದರು.

‘ಎನ್.ಮಹೇಶ್ ಅವರು ಕ್ಷೇತ್ರದ ಮತದಾರರಿಗೆ ಅನ್ಯಾಯ ಮಾಡಿ ಮೈಸೂರು, ಬೆಂಗಳೂರು, ಕನಕಪುರದಲ್ಲಿ ಅಕ್ರಮವಾಗಿ ಬೇನಾಮಿ ಆಸ್ತಿ ಮಾಡಿದ್ದಾರೆ. ಆದರೆ, ಜನರ ಮುಂದೆ ನಿಂತು ನಾನು ಯಾರಿಗೂ ದ್ರೋಹ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ಸಮಿಶ್ರ ಸರ್ಕಾರ ಪತನವಾಗುವ ಸಂದರ್ಭದಲ್ಲಿ ಅವರು ಏಕೆ ವಿಧಾನ ಸಭೆಗೆ ಪ್ರವೇಶ ಮಾಡಲಿಲ್ಲ’ ಎಂದರು.

‘ಪಕ್ಷದ ಅಧಿನಾಯಕಿ ಮಾಯಾವತಿ ಅವರು ಸಮಿಶ್ರ ಸರ್ಕಾರ ಪತನವಾಗುವ ಸಂದರ್ಭದಲ್ಲಿ ಸೂಚನೆ ನೀಡಿದ್ದರೂ ಅವರು ಏಕೆ ವಿಧಾನಸಭೆಗೆ ಗೈರಾದರು? ಕೇಳಿದರೆ ನಾನು ತಮಿಳುನಾಡಿನ ಈಶಾ ಫೌಂಡೇಷನ್‌ನಲ್ಲಿದ್ದೆ ಎಂದು ಸುಳ್ಳು ಹೇಳಿದ್ದಾರೆ. ಬಿಜೆಪಿ ರಾಜ್ಯ ಘಟಕದ ಉಪಾದ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಳ್ಳೇಗಾಲಕ್ಕೆ ಬಂದಾಗ ಸರ್ಕಾರ ರಚನೆಯಾಗುವುದಕ್ಕೆ ಶಾಸಕ ಎನ್.ಮಹೇಶ್ ಅವರೂ ಪ್ರಮುಖ ಕಾರಣಕರ್ತರು’ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು’ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಹೇಳಿದರು.

‘ಮಹೇಶ್ ಬಿಎಸ್‌ಪಿಗೆ ದ್ರೋಹ ಮಾಡಿದ್ದಾರೆ. ಬಿಜೆಪಿಗೆ ಕುದುರೆ ವ್ಯಾಪಾರವಾಗಿದ್ದಾರೆ. ಶಾಸಕ ಸ್ಥಾನವನ್ನೂ ಮಾರಾಟ ಮಾಡಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಕಾಮಗಾರಿಗೆ ಭೂಮಿ ಪೂಜೆ ಮಾಡಬೇಕಾದರೆ ಮೊದಲು ಕಮಿಷನ್ ನೀಡಬೇಕು. ಇಲ್ಲದೆ ಇದ್ದರೆ ಭೂಮಿಪೂಜೆ ಮಾಡುವುದಿಲ್ಲ ಎನ್ನುತ್ತಾರೆ. ಈ ಲಂಚವನ್ನು ಸಹ ಅವರ ಆಪ್ತ ಸಹಾಯಕರು ಪಡೆಯುತ್ತಾರೆ’ ಎಂದು ಆರೋಪಿಸಿದರು.

ಉಪಾಧ್ಯಕ್ಷ ಹನುಮಂತು, ಟೌನ್ ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಮುಖಂಡ ಚೈನಾರಾಂ ಕಾಪಡಿ, ಮಣಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT