<p><strong>ಎಚ್.ಡಿ.ಕೋಟೆ:</strong> ಸೆ.22 ರಿಂದ ಅ.7 ರವರೆಗೆ ನಡೆಯಲಿರುವ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಭಿಮಾನಿ ಹಾಗೂ ಅನುಯಾಯಿಗಳು ಧರ್ಮದ ಕಾಲಂನಲ್ಲಿ ಬೌದ್ಧ ಹಾಗೂ ಜಾತಿ ಕಾಲಂನಲ್ಲಿ ಹೊಲೆಯ ಎಂದು ಬರೆಸುವಂತೆ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ವಿನಂತಿಸಿದರು.</p>.<p>ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪರಿಶಿಷ್ಟ ಜಾತಿಯವರು ಧರ್ಮದ ಕಾಲಂನಲ್ಲಿ ಬೌದ್ಧ ಎಂದು ಬರೆಸಿದಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಮೀಸಲಾತಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಗ್ಗೆ ದಲಿತಪರ ಸಂಘಟನೆಗಳು ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಮಾಡಿ ಸಮೀಕ್ಷೆಯ ಕಾಲಂ 8ರಲ್ಲಿನ 6ನೇ ಕ್ರಮ ಸಂಖ್ಯೆಯಲ್ಲಿ ಬೌದ್ಧ ಎಂದು ತಪ್ಪದೇ ಬರೆಸಲು ಮಾರ್ಗದರ್ಶನ ಮಾಡಬೇಕು ಎಂದರು.</p>.<p>ಇದೇ ತಿಂಗಳು 22 ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಅಂಬೇಡ್ಕರ್ ಅನುಯಾಯಿಗಳಾದ ನಾವು, ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಅಪ್ಪಿಕೊಂಡರು ಎಂಬುದನ್ನು ಮರೆಯಬಾರದು ಎಂದರು.</p>.<p>ಅ.14ರಂದು ನಡೆಯಲಿರುವ ಬೌದ್ಧ ಸಮ್ಮೇಳನದ ಕುರಿತೂ ಅವರು ಮಾಹಿತಿ ಹಂಚಿಕೊಂಡರು.</p>.<p>ಮೈಸೂರು ನಗರ ಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಪಟ್ಟಣ ಪ್ರದೇಶದಲ್ಲಿ ವಾಸಿಸುವ ಜನರು ತಮ್ಮ ಜಾತಿ ಹೇಳಲು ಹಿಂಜರಿದ ಪರಿಣಾಮ ದಾಖಲೆಯಲ್ಲಿ ಬಲಗೈ ಸಮುದಾಯದ ಜನಸಂಖ್ಯೆ ಕಡಿಮೆ ಬಂದಿದೆ ಎಂದರು.</p>.<p>ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಹೈರಿಗೆ ಶಿವರಾಜು ಮಾತನಾಡಿ, ಧರ್ಮದ ಕಾಲಂ ಮತ್ತು ಜಾತಿ ಕಾಲಂನಲ್ಲಿಯೂ ಬೌದ್ಧ ಎಂದೇ ನಮೂದಿಸಿ, ಜಾತಿ, ಅಸ್ಪೃಶ್ಯತೆಯ ಕರಾಳತೆಯಿಂದ ಮುಕ್ತರಾಗಿ, ಗೌರವಯುತ ಬದುಕು ಕಟ್ಟಿಕೊಳ್ಳಲು ಅವಕಾಶವಿದೆ ಎಂದರು.</p>.<p>ಇಟ್ನ ರಾಜಣ್ಣ, ಮಲ್ಕುಂಡಿ ಮಹದೇವಸ್ವಾಮಿ, ಗೌತಮ ಬಂತೇಜಿ, ಪುರಸಭೆ ಸದಸ್ಯರಾದ ಎಚ್.ಸಿ.ನರಸಿಂಹಮೂರ್ತಿ, ನಂಜಪ್ಪ, ಭೀಮನಹಳ್ಳಿ ಸೋಮೇಶ್, ಶಿವಣ್ಣ, ಮುದ್ದಮಲ್ಲಯ್ಯ, ಸೊಗಳ್ಳಿ ಶಿವಣ್ಣ, ಪುಟ್ಟಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ಸೆ.22 ರಿಂದ ಅ.7 ರವರೆಗೆ ನಡೆಯಲಿರುವ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಭಿಮಾನಿ ಹಾಗೂ ಅನುಯಾಯಿಗಳು ಧರ್ಮದ ಕಾಲಂನಲ್ಲಿ ಬೌದ್ಧ ಹಾಗೂ ಜಾತಿ ಕಾಲಂನಲ್ಲಿ ಹೊಲೆಯ ಎಂದು ಬರೆಸುವಂತೆ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ವಿನಂತಿಸಿದರು.</p>.<p>ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪರಿಶಿಷ್ಟ ಜಾತಿಯವರು ಧರ್ಮದ ಕಾಲಂನಲ್ಲಿ ಬೌದ್ಧ ಎಂದು ಬರೆಸಿದಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಮೀಸಲಾತಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಗ್ಗೆ ದಲಿತಪರ ಸಂಘಟನೆಗಳು ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಮಾಡಿ ಸಮೀಕ್ಷೆಯ ಕಾಲಂ 8ರಲ್ಲಿನ 6ನೇ ಕ್ರಮ ಸಂಖ್ಯೆಯಲ್ಲಿ ಬೌದ್ಧ ಎಂದು ತಪ್ಪದೇ ಬರೆಸಲು ಮಾರ್ಗದರ್ಶನ ಮಾಡಬೇಕು ಎಂದರು.</p>.<p>ಇದೇ ತಿಂಗಳು 22 ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಅಂಬೇಡ್ಕರ್ ಅನುಯಾಯಿಗಳಾದ ನಾವು, ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಅಪ್ಪಿಕೊಂಡರು ಎಂಬುದನ್ನು ಮರೆಯಬಾರದು ಎಂದರು.</p>.<p>ಅ.14ರಂದು ನಡೆಯಲಿರುವ ಬೌದ್ಧ ಸಮ್ಮೇಳನದ ಕುರಿತೂ ಅವರು ಮಾಹಿತಿ ಹಂಚಿಕೊಂಡರು.</p>.<p>ಮೈಸೂರು ನಗರ ಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಪಟ್ಟಣ ಪ್ರದೇಶದಲ್ಲಿ ವಾಸಿಸುವ ಜನರು ತಮ್ಮ ಜಾತಿ ಹೇಳಲು ಹಿಂಜರಿದ ಪರಿಣಾಮ ದಾಖಲೆಯಲ್ಲಿ ಬಲಗೈ ಸಮುದಾಯದ ಜನಸಂಖ್ಯೆ ಕಡಿಮೆ ಬಂದಿದೆ ಎಂದರು.</p>.<p>ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಹೈರಿಗೆ ಶಿವರಾಜು ಮಾತನಾಡಿ, ಧರ್ಮದ ಕಾಲಂ ಮತ್ತು ಜಾತಿ ಕಾಲಂನಲ್ಲಿಯೂ ಬೌದ್ಧ ಎಂದೇ ನಮೂದಿಸಿ, ಜಾತಿ, ಅಸ್ಪೃಶ್ಯತೆಯ ಕರಾಳತೆಯಿಂದ ಮುಕ್ತರಾಗಿ, ಗೌರವಯುತ ಬದುಕು ಕಟ್ಟಿಕೊಳ್ಳಲು ಅವಕಾಶವಿದೆ ಎಂದರು.</p>.<p>ಇಟ್ನ ರಾಜಣ್ಣ, ಮಲ್ಕುಂಡಿ ಮಹದೇವಸ್ವಾಮಿ, ಗೌತಮ ಬಂತೇಜಿ, ಪುರಸಭೆ ಸದಸ್ಯರಾದ ಎಚ್.ಸಿ.ನರಸಿಂಹಮೂರ್ತಿ, ನಂಜಪ್ಪ, ಭೀಮನಹಳ್ಳಿ ಸೋಮೇಶ್, ಶಿವಣ್ಣ, ಮುದ್ದಮಲ್ಲಯ್ಯ, ಸೊಗಳ್ಳಿ ಶಿವಣ್ಣ, ಪುಟ್ಟಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>