<p><strong>ಮೈಸೂರು</strong>: ‘ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಅನನ್ಯವಾದುದು’ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗದ ಡಿಆರ್ಎಂ ಮುದಿತ್ ಮಿತ್ತಲ್ ಸ್ಮರಿಸಿದರು.</p><p>ಇಲ್ಲಿನ ರೈಲ್ವೆ ಮೈಸೂರು ವಿಭಾಗೀಯ ಕಚೇರಿಯ ಸಭಾಂಗಣದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಸಮಾನತೆ, ನ್ಯಾಯ, ಸಾಮಾಜಿಕ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳ ಮೇಲೆ ಆಧಾರಿತವಾದ ಅವರ ಜೀವನ ಮತ್ತು ಆದರ್ಶಗಳು ದೇಶದ ಅನೇಕ ಪೀಳಿಗೆಗಳಿಗೆ ಸ್ಫೂರ್ತಿಯಾಗಿವೆ’ ಎಂದರು.</p><p>‘ಪ್ರಗತಿಶೀಲ ಮತ್ತು ಸಮ ಸಮಾಜದ ನಿರ್ಮಾಣದ ಕುರಿತು ಅಂಬೇಡ್ಕರ್ ಅವರ ದೃಷ್ಟಿಕೋನ ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ’ ಎಂದು ಪ್ರತಿಪಾದಿಸಿದರು.</p><p>ಎಐಸಿಎಸ್ಟಿಆರ್ಇಎ ವಿಭಾಗೀಯ ಕಾರ್ಯದರ್ಶಿ ವಿ. ನಂದಶೇಖರ್ ಮಾತನಾಡಿ, ‘ಅಂಬೇಡ್ಕರ್ ನೇತೃತ್ವದಲ್ಲಿ ರೂಪುಗೊಂಡ ಬಲಿಷ್ಠ ಮತ್ತು ಪ್ರಗತಿಪರ ಸಂವಿಧಾನವು ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ದೃಢ ಮತ್ತು ಶಾಶ್ವತ ಅಡಿಪಾಯವನ್ನು ಹಾಕಿದೆ. ಪ್ರತಿಯೊಬ್ಬ ನಾಗರಿಕರ ಹಕ್ಕುಗಳು, ಗೌರವವನ್ನು ಅದು ರಕ್ಷಿಸುತ್ತಿದೆ’ ಎಂದರು.</p><p>ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈಲ್ವೆ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಅನನ್ಯವಾದುದು’ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗದ ಡಿಆರ್ಎಂ ಮುದಿತ್ ಮಿತ್ತಲ್ ಸ್ಮರಿಸಿದರು.</p><p>ಇಲ್ಲಿನ ರೈಲ್ವೆ ಮೈಸೂರು ವಿಭಾಗೀಯ ಕಚೇರಿಯ ಸಭಾಂಗಣದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಸಮಾನತೆ, ನ್ಯಾಯ, ಸಾಮಾಜಿಕ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳ ಮೇಲೆ ಆಧಾರಿತವಾದ ಅವರ ಜೀವನ ಮತ್ತು ಆದರ್ಶಗಳು ದೇಶದ ಅನೇಕ ಪೀಳಿಗೆಗಳಿಗೆ ಸ್ಫೂರ್ತಿಯಾಗಿವೆ’ ಎಂದರು.</p><p>‘ಪ್ರಗತಿಶೀಲ ಮತ್ತು ಸಮ ಸಮಾಜದ ನಿರ್ಮಾಣದ ಕುರಿತು ಅಂಬೇಡ್ಕರ್ ಅವರ ದೃಷ್ಟಿಕೋನ ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ’ ಎಂದು ಪ್ರತಿಪಾದಿಸಿದರು.</p><p>ಎಐಸಿಎಸ್ಟಿಆರ್ಇಎ ವಿಭಾಗೀಯ ಕಾರ್ಯದರ್ಶಿ ವಿ. ನಂದಶೇಖರ್ ಮಾತನಾಡಿ, ‘ಅಂಬೇಡ್ಕರ್ ನೇತೃತ್ವದಲ್ಲಿ ರೂಪುಗೊಂಡ ಬಲಿಷ್ಠ ಮತ್ತು ಪ್ರಗತಿಪರ ಸಂವಿಧಾನವು ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ದೃಢ ಮತ್ತು ಶಾಶ್ವತ ಅಡಿಪಾಯವನ್ನು ಹಾಕಿದೆ. ಪ್ರತಿಯೊಬ್ಬ ನಾಗರಿಕರ ಹಕ್ಕುಗಳು, ಗೌರವವನ್ನು ಅದು ರಕ್ಷಿಸುತ್ತಿದೆ’ ಎಂದರು.</p><p>ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈಲ್ವೆ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>