<p><strong>ಮೈಸೂರು: </strong>ಅಂಬೇಡ್ಕರ್ ಅವರು ಮೀಸಲಾತಿಯನ್ನು ಅತ್ಯಂತ ವೈಜ್ಞಾನಿಕ ಹಾಗೂ ಐತಿಹಾಸಿಕ ಪರಂಪರೆಯ ಆಧಾರದಲ್ಲಿ ಜಾರಿಗೊಳಿಸಿದ್ದರು. ಪ್ರಜಾಪ್ರಭುತ್ವದ ಆಧಾರಸ್ತಂಭಗಳಲ್ಲಿ ಮೀಸಲಾತಿ ವ್ಯವಸ್ಥೆಯೂ ಒಂದು ಎಂದು ರಂಗಕರ್ಮಿ ಜನಾರ್ಧನ್ (ಜನ್ನಿ) ಅಭಿಪ್ರಾಯಪಟ್ಟರು.</p>.<p>ಮೈಸೂರು ವಿಶ್ವವಿದ್ಯಾಲಯ ಕಾನೂನು ಶಾಲೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂಬ ಮಾತು ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿದೆ. ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಮೀಸಲಾತಿ ವಿಧಾನವನ್ನು ಆಳವಾಗಿ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಅಂಬೇಡ್ಕರ್ ಅವರು ಪಾಕಿಸ್ತಾನದ ಮಹಮ್ಮದ್ ಅಲಿ ಜಿನ್ನಾ ಅವರ ರೀತಿಯಲ್ಲಿ ಚಿಂತಿಸಿದ್ದರೆ ಈ ದೇಶ ಮತ್ತೆ ಇಬ್ಭಾಗವಾಗುತಿತ್ತು. ಜನರ ಮನಸ್ಸು ಒಡೆದು ರಕ್ತಪಾತ ಆಗುವ ಸಾಧ್ಯತೆಯಿತ್ತು. ಆದರೆ ಅಂಬೇಡ್ಕರ್ ಅವರಲ್ಲಿದ್ದ ದೇಶಪ್ರೇಮ, ಬದ್ಧತೆ ಮತ್ತು ಇಚ್ಛಾಶಕ್ತಿ ಅದಕ್ಕೆ ಅವಕಾಶ ನೀಡಲಿಲ್ಲ. ಅವರು ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕೆಲಸ ಮಾಡಿದರು ಎಂದು ಬಣ್ಣಿಸಿದರು.</p>.<p>ಮನುಷ್ಯರನ್ನು ಮನುಷ್ಯರಂತೆ ನೋಡದೆ ಇರುವ ಕೆಟ್ಟ ಸಂಸ್ಕೃತಿಯುಳ್ಳ ಜನರು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅಂಬೇಡ್ಕರ್ ಅವರು ದಲಿತರು ಮತ್ತು ಶೋಷಿತರಿಗೆ ಆಶಾಕಿರಣ ಎನಿಸಿದ್ದಾರೆ. ಈ ಕಾರಣಗಳಿಂದ ಅಂಬೇಡ್ಕರ್ ಮಹಾತ್ಮರಲ್ಲೇ ಮಹಾತ್ಮರಾಗುತ್ತಾರೆ ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಸೂರು ವಿ.ವಿ. ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಸಾಮಾಜಿಕ, ಶೈಕ್ಷಣಿಕ ಅಸಮತೋಲನವನ್ನು ಹೋಗಲಾಡಿಸಲು ಅಂಬೇಡ್ಕರ್ ವಹಿಸಿರುವ ಪಾತ್ರ ಅಪಾರ ಎಂದು ಹೇಳಿದರು.</p>.<p>ಕಾರ್ಮಿಕರ ದಿನಾಚರಣೆಯ ದಿನ ಅಂಬೇಡ್ಕರ್ ಅವರನ್ನು ಸ್ಮರಿಸಬೇಕು. ಕಾರ್ಮಿಕರಿಗೆ ಕೆಲಸದ ಅವಧಿ ಮತ್ತು ಕನಿಷ್ಠ ವೇತನ ನಿಗಧಿ, ಪಿಎಫ್ ಮತ್ತು ಇಎಸ್ಐ ಮುಂತಾದ ಸೌಲಭ್ಯಗಳು ಲಭಿಸುವಂತೆ ಮಾಡಿದ ಶ್ರೇಯ ಅವರಿಗೆ ಸಲ್ಲಬೇಕು ಎಂದು ತಿಳಿಸಿದರು.</p>.<p>‘ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದಾಗಿ ಈ ದೇಶದಲ್ಲಿ ನಮಗೆ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗಿದೆ. ಆರ್ಬಿಐ ಸ್ಥಾಪನೆಗೆ ಕಾರಣರಾಗಿ ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿಕೊಟ್ಟರು. ಎಲ್ಲ ಧರ್ಮ, ಜಾತಿಯ ಜನರಿಗೆ ಶಿಕ್ಷಣ, ರಾಜಕೀಯ, ಉದ್ಯೋಗದ ಹಕ್ಕು ದೊರಕುವಂತೆ ಮಾಡಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>ಮೈಸೂರು ವಿ.ವಿ. ಕಾನೂನು ಅಧ್ಯಯನ ವಿಭಾಗದ ಡೀನ್ ಪ್ರೊ.ಸಿ.ಬಸವರಾಜು, ಪತ್ರಕರ್ತ ಅಂಶಿಪ್ರಸನ್ನ ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಅಂಬೇಡ್ಕರ್ ಅವರು ಮೀಸಲಾತಿಯನ್ನು ಅತ್ಯಂತ ವೈಜ್ಞಾನಿಕ ಹಾಗೂ ಐತಿಹಾಸಿಕ ಪರಂಪರೆಯ ಆಧಾರದಲ್ಲಿ ಜಾರಿಗೊಳಿಸಿದ್ದರು. ಪ್ರಜಾಪ್ರಭುತ್ವದ ಆಧಾರಸ್ತಂಭಗಳಲ್ಲಿ ಮೀಸಲಾತಿ ವ್ಯವಸ್ಥೆಯೂ ಒಂದು ಎಂದು ರಂಗಕರ್ಮಿ ಜನಾರ್ಧನ್ (ಜನ್ನಿ) ಅಭಿಪ್ರಾಯಪಟ್ಟರು.</p>.<p>ಮೈಸೂರು ವಿಶ್ವವಿದ್ಯಾಲಯ ಕಾನೂನು ಶಾಲೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂಬ ಮಾತು ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿದೆ. ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಮೀಸಲಾತಿ ವಿಧಾನವನ್ನು ಆಳವಾಗಿ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಅಂಬೇಡ್ಕರ್ ಅವರು ಪಾಕಿಸ್ತಾನದ ಮಹಮ್ಮದ್ ಅಲಿ ಜಿನ್ನಾ ಅವರ ರೀತಿಯಲ್ಲಿ ಚಿಂತಿಸಿದ್ದರೆ ಈ ದೇಶ ಮತ್ತೆ ಇಬ್ಭಾಗವಾಗುತಿತ್ತು. ಜನರ ಮನಸ್ಸು ಒಡೆದು ರಕ್ತಪಾತ ಆಗುವ ಸಾಧ್ಯತೆಯಿತ್ತು. ಆದರೆ ಅಂಬೇಡ್ಕರ್ ಅವರಲ್ಲಿದ್ದ ದೇಶಪ್ರೇಮ, ಬದ್ಧತೆ ಮತ್ತು ಇಚ್ಛಾಶಕ್ತಿ ಅದಕ್ಕೆ ಅವಕಾಶ ನೀಡಲಿಲ್ಲ. ಅವರು ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕೆಲಸ ಮಾಡಿದರು ಎಂದು ಬಣ್ಣಿಸಿದರು.</p>.<p>ಮನುಷ್ಯರನ್ನು ಮನುಷ್ಯರಂತೆ ನೋಡದೆ ಇರುವ ಕೆಟ್ಟ ಸಂಸ್ಕೃತಿಯುಳ್ಳ ಜನರು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅಂಬೇಡ್ಕರ್ ಅವರು ದಲಿತರು ಮತ್ತು ಶೋಷಿತರಿಗೆ ಆಶಾಕಿರಣ ಎನಿಸಿದ್ದಾರೆ. ಈ ಕಾರಣಗಳಿಂದ ಅಂಬೇಡ್ಕರ್ ಮಹಾತ್ಮರಲ್ಲೇ ಮಹಾತ್ಮರಾಗುತ್ತಾರೆ ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಸೂರು ವಿ.ವಿ. ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಸಾಮಾಜಿಕ, ಶೈಕ್ಷಣಿಕ ಅಸಮತೋಲನವನ್ನು ಹೋಗಲಾಡಿಸಲು ಅಂಬೇಡ್ಕರ್ ವಹಿಸಿರುವ ಪಾತ್ರ ಅಪಾರ ಎಂದು ಹೇಳಿದರು.</p>.<p>ಕಾರ್ಮಿಕರ ದಿನಾಚರಣೆಯ ದಿನ ಅಂಬೇಡ್ಕರ್ ಅವರನ್ನು ಸ್ಮರಿಸಬೇಕು. ಕಾರ್ಮಿಕರಿಗೆ ಕೆಲಸದ ಅವಧಿ ಮತ್ತು ಕನಿಷ್ಠ ವೇತನ ನಿಗಧಿ, ಪಿಎಫ್ ಮತ್ತು ಇಎಸ್ಐ ಮುಂತಾದ ಸೌಲಭ್ಯಗಳು ಲಭಿಸುವಂತೆ ಮಾಡಿದ ಶ್ರೇಯ ಅವರಿಗೆ ಸಲ್ಲಬೇಕು ಎಂದು ತಿಳಿಸಿದರು.</p>.<p>‘ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದಾಗಿ ಈ ದೇಶದಲ್ಲಿ ನಮಗೆ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗಿದೆ. ಆರ್ಬಿಐ ಸ್ಥಾಪನೆಗೆ ಕಾರಣರಾಗಿ ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿಕೊಟ್ಟರು. ಎಲ್ಲ ಧರ್ಮ, ಜಾತಿಯ ಜನರಿಗೆ ಶಿಕ್ಷಣ, ರಾಜಕೀಯ, ಉದ್ಯೋಗದ ಹಕ್ಕು ದೊರಕುವಂತೆ ಮಾಡಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>ಮೈಸೂರು ವಿ.ವಿ. ಕಾನೂನು ಅಧ್ಯಯನ ವಿಭಾಗದ ಡೀನ್ ಪ್ರೊ.ಸಿ.ಬಸವರಾಜು, ಪತ್ರಕರ್ತ ಅಂಶಿಪ್ರಸನ್ನ ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>