<p><strong>ಹುಣಸೂರು:</strong> ಆಂಧ್ರಪ್ರದೇಶದ 40 ಅಧಿಕಾರಿಗಳ ತಂಡ ತಾಲ್ಲೂಕಿನ ಬನ್ನಿಕುಪ್ಪೆ ಮತ್ತು ಮರದೂರು ಪಂಚಾಯಿತಿಗೆ ಭೇಟಿ ನೀಡಿ ಗ್ರಾಮೀಣ ಭಾಗದಲ್ಲಿ ಪಂಚಾಯತ್ ರಾಜ್ ಆಡಳಿತ ಮತ್ತು ಯೋಜನೆ ಅನುಷ್ಠಾನ ಕುರಿತು ಮಾಹಿತಿ ಪಡೆದರು. </p>.<p>ಮೈಸೂರಿನ ಎಸ್.ಐ.ಆರ್.ಡಿ ಕೇಂದ್ರಕ್ಕೆ ಐದು ದಿನಗಳ ಅಧ್ಯಯನ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು, ಕ್ಷೇತ್ರ ಭೇಟಿ ಸಂಬಂಧ ಹುಣಸೂರಿನ ಬನ್ನಿಕುಪ್ಪೆ ಮತ್ತು ಮರದೂರು ಪಂಚಾಯಿತಿಗೆ ಬಂದಿದ್ದರು.</p>.<p>ಅಧಿಕಾರಿಗಳ ತಂಡ ನರೇಗಾ, ಜೆಜೆಎಂ (ಗಂಗಾಜಲ್), ಸ್ವಚ್ಛ ಭಾರತ್ ಅಭಿಯಾನ ಯೋಜನೆ ಸೇರಿದಂತೆ ಸಾವಯವ ಗೊಬ್ಬರ ತಯಾರಿಸುವ ಘಟಕಕ್ಕೆ ಭೇಟಿ ನೀಡಿ ಸಮಗ್ರ ಮಾಹಿತಿ ಸಂಗ್ರಹಿಸಿದರು.</p>.<p>ವಿಜಯವಾಡ ಜಿಲ್ಲೆಯ ರಾಮಕೃಷ್ಣ ಮಾತನಾಡಿ, ‘ಆಂಧ್ರ ಪ್ರದೇಶದಿಂದ 5 ದಿನಗಳ ಅಧ್ಯಯನ ಪ್ರವಾಸಕ್ಕೆ ಭೇಟಿ ನೀಡಿದ್ದು, ಪಂಚಾಯತ್ ರಾಜ್ ಯೋಜನೆಯಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಮಾಹಿತಿ ಸಂಗ್ರಹಿಸಿ ಆಂಧ್ರದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚಿಂತನ ಮಂಥನ ನಡೆದಿದೆ’ ಎಂದರು.</p>.<p>ಗ್ರಾಮಗಳ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿರುವ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನರೇಗಾ ಯೋಜನೆಯಲ್ಲಿ ತೊಡಗುವ ಕೂಲಿ ಕಾರ್ಮಿಕರಿಗೆ ವೇತನ ನೀಡುವ ವ್ಯವಸ್ಥೆ ಮತ್ತು ಜಾಬ್ ಕಾರ್ಡ್ ನಿರ್ವಹಣೆ ಕುರಿತು ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.</p>.<p>ಮರದೂರು ಪಂಚಾಯಿತಿ ಕೇಂದ್ರಕ್ಕೆ ಭೇಟಿ ನೀಡಿ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘ ನಡೆಸುತ್ತಿರುವ ವಿವಿಧ ಯೋಜನೆಗಳ ಮಾಹಿತಿ ಪಡೆದು, ಮಹಿಳೆಯರೊಂದಿಗೆ ಸಂವಾದ ನಡೆಸಿದರು.</p>.<p>ಎಸ್.ಐ.ಆರ್.ಡಿ ತರಬೇತಿ ಕೇಂದ್ರದ ಪ್ರಕಾಶ್, ಅಬೂಬಕರ್, ಬನ್ನಿಕುಪ್ಪೆ ಪಿಡಿಒ ರಾಘವೇಂದ್ರ, ಮರದೂರು ಪಿಡಿಒ ಧರ್ಮೇಂದ್ರ, ಅಧ್ಯಕ್ಷ ಗೋವಿಂದ ನಾಯಕ, ವೇದಮೂರ್ತಿ, ಸಂಜೀವಿನಿ ಒಕ್ಕೂಟದ ಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ಆಂಧ್ರಪ್ರದೇಶದ 40 ಅಧಿಕಾರಿಗಳ ತಂಡ ತಾಲ್ಲೂಕಿನ ಬನ್ನಿಕುಪ್ಪೆ ಮತ್ತು ಮರದೂರು ಪಂಚಾಯಿತಿಗೆ ಭೇಟಿ ನೀಡಿ ಗ್ರಾಮೀಣ ಭಾಗದಲ್ಲಿ ಪಂಚಾಯತ್ ರಾಜ್ ಆಡಳಿತ ಮತ್ತು ಯೋಜನೆ ಅನುಷ್ಠಾನ ಕುರಿತು ಮಾಹಿತಿ ಪಡೆದರು. </p>.<p>ಮೈಸೂರಿನ ಎಸ್.ಐ.ಆರ್.ಡಿ ಕೇಂದ್ರಕ್ಕೆ ಐದು ದಿನಗಳ ಅಧ್ಯಯನ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು, ಕ್ಷೇತ್ರ ಭೇಟಿ ಸಂಬಂಧ ಹುಣಸೂರಿನ ಬನ್ನಿಕುಪ್ಪೆ ಮತ್ತು ಮರದೂರು ಪಂಚಾಯಿತಿಗೆ ಬಂದಿದ್ದರು.</p>.<p>ಅಧಿಕಾರಿಗಳ ತಂಡ ನರೇಗಾ, ಜೆಜೆಎಂ (ಗಂಗಾಜಲ್), ಸ್ವಚ್ಛ ಭಾರತ್ ಅಭಿಯಾನ ಯೋಜನೆ ಸೇರಿದಂತೆ ಸಾವಯವ ಗೊಬ್ಬರ ತಯಾರಿಸುವ ಘಟಕಕ್ಕೆ ಭೇಟಿ ನೀಡಿ ಸಮಗ್ರ ಮಾಹಿತಿ ಸಂಗ್ರಹಿಸಿದರು.</p>.<p>ವಿಜಯವಾಡ ಜಿಲ್ಲೆಯ ರಾಮಕೃಷ್ಣ ಮಾತನಾಡಿ, ‘ಆಂಧ್ರ ಪ್ರದೇಶದಿಂದ 5 ದಿನಗಳ ಅಧ್ಯಯನ ಪ್ರವಾಸಕ್ಕೆ ಭೇಟಿ ನೀಡಿದ್ದು, ಪಂಚಾಯತ್ ರಾಜ್ ಯೋಜನೆಯಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಮಾಹಿತಿ ಸಂಗ್ರಹಿಸಿ ಆಂಧ್ರದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚಿಂತನ ಮಂಥನ ನಡೆದಿದೆ’ ಎಂದರು.</p>.<p>ಗ್ರಾಮಗಳ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿರುವ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನರೇಗಾ ಯೋಜನೆಯಲ್ಲಿ ತೊಡಗುವ ಕೂಲಿ ಕಾರ್ಮಿಕರಿಗೆ ವೇತನ ನೀಡುವ ವ್ಯವಸ್ಥೆ ಮತ್ತು ಜಾಬ್ ಕಾರ್ಡ್ ನಿರ್ವಹಣೆ ಕುರಿತು ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.</p>.<p>ಮರದೂರು ಪಂಚಾಯಿತಿ ಕೇಂದ್ರಕ್ಕೆ ಭೇಟಿ ನೀಡಿ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘ ನಡೆಸುತ್ತಿರುವ ವಿವಿಧ ಯೋಜನೆಗಳ ಮಾಹಿತಿ ಪಡೆದು, ಮಹಿಳೆಯರೊಂದಿಗೆ ಸಂವಾದ ನಡೆಸಿದರು.</p>.<p>ಎಸ್.ಐ.ಆರ್.ಡಿ ತರಬೇತಿ ಕೇಂದ್ರದ ಪ್ರಕಾಶ್, ಅಬೂಬಕರ್, ಬನ್ನಿಕುಪ್ಪೆ ಪಿಡಿಒ ರಾಘವೇಂದ್ರ, ಮರದೂರು ಪಿಡಿಒ ಧರ್ಮೇಂದ್ರ, ಅಧ್ಯಕ್ಷ ಗೋವಿಂದ ನಾಯಕ, ವೇದಮೂರ್ತಿ, ಸಂಜೀವಿನಿ ಒಕ್ಕೂಟದ ಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>