<p><strong>ಮೈಸೂರು: </strong>ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುಮಾರು 500ಕ್ಕೂ ಹೆಚ್ಚಿನ ಅಂಗನವಾಡಿ ಕಾರ್ಯಕರ್ತೆಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.</p>.<p>ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ನೇತೃತ್ವದಲ್ಲಿ ನಂಜನಗೂಡು ಮತ್ತು ಬಿಳಿಕೆರೆ ಭಾಗಗಳಿಂದ ಬಂದಿದ್ದ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ವೇತನ ತಾರತಮ್ಯ ನಿವಾರಣೆಗೆ ₹139.49 ಕೋಟಿ ಪ್ರಸ್ತಾವ ಸಲ್ಲಿಸಿದ್ದರೂ ಈವರೆಗೂ ಬಿಡುಗಡೆಯಾಗಿಲ್ಲ. ಕೂಡಲೇ ಸರ್ಕಾರ ನೀಡಿದ ಭರವಸೆಯಂತೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಲ್ಲಿಸಿರುವ ₹339.48 ಕೋಟಿ ಅನುದಾನವನ್ನು ಆರ್ಥಿಕ ಇಲಾಖೆ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>2016ರಿಂದ ಈಚೆಗೆ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಇದುವರೆಗೂ ಇಡಿಗಂಟು, ಎನ್ಪಿಎಸ್ ಹಣ ನೀಡಿಲ್ಲ. ಹೊಸದಾಗಿ ನೇಮಕವಾಗುವ ಕಾರ್ಯಕರ್ತೆಯರಿಗೂ, 10-15 ವರ್ಷ ಸೇವೆ ಸಲ್ಲಿಸಿದ ಹಿರಿಯ ಕಾರ್ಯಕರ್ತೆಯರಿಗೆ ₹10 ಸಾವಿರ ವೇತನ ನೀಡಲಾಗುತ್ತಿದೆ. ಇದನ್ನು ಬದಲಾಯಿಸಬೇಕು ಎಂದು ಮನವಿ ಮಾಡಿದರು.</p>.<p>ಕೋಳಿ ಮೊಟ್ಟೆ ಖರೀದಿಗೆ ಸರ್ಕಾರ ಈಗ ಕೇವಲ ₹ 5 ಅಷ್ಟೇ ನೀಡುತ್ತಿದೆ. ಆದರೆ, ಇದಕ್ಕೂ ಹೆಚ್ಚಿನ ದರ ಮಾರುಕಟ್ಟೆಯಲ್ಲಿದೆ. ಕಾರ್ಯಕರ್ತೆಯರು ತಮ್ಮ ಹಣದಲ್ಲಿ ಖರೀದಿಸಬೇಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರ ಹಣ ನೀಡುತ್ತಿದೆ. ಮುಂಗಡ ಹಣ ನೀಡದೇ ಇರುವುದು ಸಮಸ್ಯೆಯಾಗಿದೆ. ಹಾಗಾಗಿ, ಮಕ್ಕಳಿಗೆ ನೀಡುತ್ತಿರುವ ಕೋಳಿಮೊಟ್ಟೆಯನ್ನು ಸರ್ಕಾರವೇ ಪೂರೈಕೆ ಮಾಡಬೇಕು ಎಂದು ಹೇಳಿದರು.</p>.<p>20 ವರ್ಷ ಸೇವೆ ಸಲ್ಲಿಸಿದವರಿಗೆ ₹2,000, 15ವರ್ಷದವರೆಗೆ ₹1,500, 10ವರ್ಷದವರೆಗೆ ₹1,000, 5ವರ್ಷದವರೆಗೆ ₹500 ಹೆಚ್ಚುವರಿ ಗೌರವ ಧನ ನೀಡಬೇಕು ಎಂದರು.</p>.<p>ರಾಜ್ಯದಲ್ಲಿ ಕೋವಿಡ್ ಮೊದಲನೇ ಅಲೆಯಲ್ಲಿ 28, ಎರಡನೇ ಅಲೆಯಲ್ಲಿ 19 ಕಾರ್ಯಕರ್ತೆಯರು ಮೃತಪಟ್ಟಿದ್ದಾರೆ. 173 ಜನರು ಸೋಂಕಿಗೆ ಒಳಗಾಗಿದ್ದಾರೆ. ಸರ್ಕಾರವೇ ಭರವಸೆ ನೀಡಿದಂತೆ ಕೂಡಲೇ ತಲಾ ₹1 ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಷ್ಪಲತಾ, ಜಿಲ್ಲಾ ಖಜಾಂಚಿ ಲೀಲಾವತಿ, ಉಪಾಧ್ಯಕ್ಷರು ಮಂಜುಳಾ, ಅಜಿತಾ, ಜಂಟಿ ಕಾರ್ಯದರ್ಶಿ ಪುಷ್ಪಲತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುಮಾರು 500ಕ್ಕೂ ಹೆಚ್ಚಿನ ಅಂಗನವಾಡಿ ಕಾರ್ಯಕರ್ತೆಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.</p>.<p>ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ನೇತೃತ್ವದಲ್ಲಿ ನಂಜನಗೂಡು ಮತ್ತು ಬಿಳಿಕೆರೆ ಭಾಗಗಳಿಂದ ಬಂದಿದ್ದ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ವೇತನ ತಾರತಮ್ಯ ನಿವಾರಣೆಗೆ ₹139.49 ಕೋಟಿ ಪ್ರಸ್ತಾವ ಸಲ್ಲಿಸಿದ್ದರೂ ಈವರೆಗೂ ಬಿಡುಗಡೆಯಾಗಿಲ್ಲ. ಕೂಡಲೇ ಸರ್ಕಾರ ನೀಡಿದ ಭರವಸೆಯಂತೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಲ್ಲಿಸಿರುವ ₹339.48 ಕೋಟಿ ಅನುದಾನವನ್ನು ಆರ್ಥಿಕ ಇಲಾಖೆ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>2016ರಿಂದ ಈಚೆಗೆ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಇದುವರೆಗೂ ಇಡಿಗಂಟು, ಎನ್ಪಿಎಸ್ ಹಣ ನೀಡಿಲ್ಲ. ಹೊಸದಾಗಿ ನೇಮಕವಾಗುವ ಕಾರ್ಯಕರ್ತೆಯರಿಗೂ, 10-15 ವರ್ಷ ಸೇವೆ ಸಲ್ಲಿಸಿದ ಹಿರಿಯ ಕಾರ್ಯಕರ್ತೆಯರಿಗೆ ₹10 ಸಾವಿರ ವೇತನ ನೀಡಲಾಗುತ್ತಿದೆ. ಇದನ್ನು ಬದಲಾಯಿಸಬೇಕು ಎಂದು ಮನವಿ ಮಾಡಿದರು.</p>.<p>ಕೋಳಿ ಮೊಟ್ಟೆ ಖರೀದಿಗೆ ಸರ್ಕಾರ ಈಗ ಕೇವಲ ₹ 5 ಅಷ್ಟೇ ನೀಡುತ್ತಿದೆ. ಆದರೆ, ಇದಕ್ಕೂ ಹೆಚ್ಚಿನ ದರ ಮಾರುಕಟ್ಟೆಯಲ್ಲಿದೆ. ಕಾರ್ಯಕರ್ತೆಯರು ತಮ್ಮ ಹಣದಲ್ಲಿ ಖರೀದಿಸಬೇಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರ ಹಣ ನೀಡುತ್ತಿದೆ. ಮುಂಗಡ ಹಣ ನೀಡದೇ ಇರುವುದು ಸಮಸ್ಯೆಯಾಗಿದೆ. ಹಾಗಾಗಿ, ಮಕ್ಕಳಿಗೆ ನೀಡುತ್ತಿರುವ ಕೋಳಿಮೊಟ್ಟೆಯನ್ನು ಸರ್ಕಾರವೇ ಪೂರೈಕೆ ಮಾಡಬೇಕು ಎಂದು ಹೇಳಿದರು.</p>.<p>20 ವರ್ಷ ಸೇವೆ ಸಲ್ಲಿಸಿದವರಿಗೆ ₹2,000, 15ವರ್ಷದವರೆಗೆ ₹1,500, 10ವರ್ಷದವರೆಗೆ ₹1,000, 5ವರ್ಷದವರೆಗೆ ₹500 ಹೆಚ್ಚುವರಿ ಗೌರವ ಧನ ನೀಡಬೇಕು ಎಂದರು.</p>.<p>ರಾಜ್ಯದಲ್ಲಿ ಕೋವಿಡ್ ಮೊದಲನೇ ಅಲೆಯಲ್ಲಿ 28, ಎರಡನೇ ಅಲೆಯಲ್ಲಿ 19 ಕಾರ್ಯಕರ್ತೆಯರು ಮೃತಪಟ್ಟಿದ್ದಾರೆ. 173 ಜನರು ಸೋಂಕಿಗೆ ಒಳಗಾಗಿದ್ದಾರೆ. ಸರ್ಕಾರವೇ ಭರವಸೆ ನೀಡಿದಂತೆ ಕೂಡಲೇ ತಲಾ ₹1 ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಷ್ಪಲತಾ, ಜಿಲ್ಲಾ ಖಜಾಂಚಿ ಲೀಲಾವತಿ, ಉಪಾಧ್ಯಕ್ಷರು ಮಂಜುಳಾ, ಅಜಿತಾ, ಜಂಟಿ ಕಾರ್ಯದರ್ಶಿ ಪುಷ್ಪಲತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>