<p>ತಿ.ನರಸೀಪುರ: ‘ವಿಧಾನ ಪರಿಷತ್ತಿನ ಹನ್ನೊಂದು ಸ್ಥಾನಗಳಿಗೆ ಜೂನ್ 6 ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಯ ಪರಿಶಿಷ್ಟ ಜಾತಿಯವರಿಗೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಪಕ್ಷದ ಜಿಲ್ಲಾ ಗ್ರಾಮಾಂತರ ಎಸ್ಸಿ ಮೋರ್ಚಾ ಅಧ್ಯಕ್ಷ ತೊಟ್ವವಾಡಿ ಅನಿಲ್ ಕುಮಾರ್ ಮನವಿ ಮಾಡಿದ್ದಾರೆ.</p>.<p>‘ಬಿಜೆಪಿಯಿಂದ ಮೂವರಿಗೆ ಅವಕಾಶವಿದೆ. ಮೂರು ಸ್ಥಾನ ಗೆಲ್ಲುವ ಅವಕಾಶಗಳಿದ್ದು, ಅದರಲ್ಲಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಗೆ ಬಿಟ್ಟು ಕೊಡಬೇಕು. ಇದುವರೆಗೂ ಈ ಭಾಗದ ಪರಿಶಿಷ್ಟ ಜಾತಿಯವರಿಗೆ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಲು ಅವಕಾಶ ದೊರಕಿಲ್ಲ’ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.</p>.<p>‘ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಬಗ್ಗೆ ಗಮನಹರಿಸಿ ವರಿಷ್ಠರೊಂದಿಗೆ ಚರ್ಚಿಸಿ ಪಕ್ಷ ಸಂಘಟನೆಗೆ ಪೂರಕವಾಗಿ ಹಾಗೂ ಮುಂಬರುವ ಸ್ಥಳೀಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಮಾಡಲು ಅನುಕೂಲಕವಾಗುವ ದೃಷ್ಟಿಯಿಂದ ಪರಿಶಿಷ್ಟ ಜಾತಿಯವರಿಗೆ ಅವಕಾಶ ನೀಡಬೇಕು’ ಎಂದು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿ.ನರಸೀಪುರ: ‘ವಿಧಾನ ಪರಿಷತ್ತಿನ ಹನ್ನೊಂದು ಸ್ಥಾನಗಳಿಗೆ ಜೂನ್ 6 ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಯ ಪರಿಶಿಷ್ಟ ಜಾತಿಯವರಿಗೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಪಕ್ಷದ ಜಿಲ್ಲಾ ಗ್ರಾಮಾಂತರ ಎಸ್ಸಿ ಮೋರ್ಚಾ ಅಧ್ಯಕ್ಷ ತೊಟ್ವವಾಡಿ ಅನಿಲ್ ಕುಮಾರ್ ಮನವಿ ಮಾಡಿದ್ದಾರೆ.</p>.<p>‘ಬಿಜೆಪಿಯಿಂದ ಮೂವರಿಗೆ ಅವಕಾಶವಿದೆ. ಮೂರು ಸ್ಥಾನ ಗೆಲ್ಲುವ ಅವಕಾಶಗಳಿದ್ದು, ಅದರಲ್ಲಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಗೆ ಬಿಟ್ಟು ಕೊಡಬೇಕು. ಇದುವರೆಗೂ ಈ ಭಾಗದ ಪರಿಶಿಷ್ಟ ಜಾತಿಯವರಿಗೆ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಲು ಅವಕಾಶ ದೊರಕಿಲ್ಲ’ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.</p>.<p>‘ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ಬಗ್ಗೆ ಗಮನಹರಿಸಿ ವರಿಷ್ಠರೊಂದಿಗೆ ಚರ್ಚಿಸಿ ಪಕ್ಷ ಸಂಘಟನೆಗೆ ಪೂರಕವಾಗಿ ಹಾಗೂ ಮುಂಬರುವ ಸ್ಥಳೀಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಮಾಡಲು ಅನುಕೂಲಕವಾಗುವ ದೃಷ್ಟಿಯಿಂದ ಪರಿಶಿಷ್ಟ ಜಾತಿಯವರಿಗೆ ಅವಕಾಶ ನೀಡಬೇಕು’ ಎಂದು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>