<p><strong>ಮೈಸೂರು</strong>: ‘ಸಮಾಜದ ಪ್ರಗತಿಗೆ ಬಹು ದೊಡ್ಡ ತೊಡಕಾಗಿರುವ ಹಾಗೂ ಜನರನ್ನು ಕಾಡುತ್ತಿರುವ ಭ್ರಷ್ಟಾಚಾರದ ಪಿಡುಗು ನಿರ್ಮೂಲನೆಗೆ ಯುವಜನರು ಮತ್ತು ವಿದ್ಯಾರ್ಥಿಗಳು ಸಂಘಟಿತ ಹೋರಾಟ ನಡೆಸಬೇಕು’ ಎಂದು ಸಾಹಿತಿ ಟಿ. ಸತೀಶ್ ಜವರೇಗೌಡ ಸಲಹೆ ನೀಡಿದರು.</p>.<p>ತಾಲ್ಲೂಕಿನ ದೊಡ್ಡಕಾನ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೈಸೂರು ವಿಶ್ವವಿದ್ಯಾಲಯ ಎನ್ಎಸ್ಎಸ್ ಹಾಗೂ ಜಯಲಕ್ಷ್ಮೀಪುರಂನ ಕುವೆಂಪು ಪ್ರಥಮ ದರ್ಜೆ ಕಾಲೇಜಿನಿಂದ ಈಚೆಗೆ ಹಮ್ಮಿಕೊಂಡಿದ್ದ ‘ಯೂತ್ ಫಾರ್ ಮೈ ಭಾರತ್’ ವಾರ್ಷಿಕ ವಿಶೇಷ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಸಮಾಜವನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಜಾತೀಯತೆ, ಧರ್ಮಾಂಧತೆ, ಭ್ರಷ್ಟಾಚಾರ ಪ್ರಮುಖವಾಗಿವೆ. ಇದರಿಂದಾಗಿ ಸಾಮಾಜಿಕ ಸ್ವಾಸ್ಥ್ಯ ಹಾಗೂ ಜನರ ನೆಮ್ಮದಿ ಹಾಳಾಗುತ್ತಿದೆ’ ಎಂದು ವಿಷಾದಿಸಿದರು.</p>.<p>‘ಸರ್ಕಾರಿ ಅಧಿಕಾರಿ ಅಥವಾ ನೌಕರ ಸಕಾಲಕ್ಕೆ ನ್ಯಾಯಯುತವಾದ ಕೆಲಸ ಮಾಡಿಕೊಡದಿದ್ದರೆ, ನಿರ್ಲಕ್ಷ್ಯ ತೋರಿದರೆ, ಲಂಚ ಕೇಳಿದರೆ ಲೋಕಾಯುಕ್ತಕ್ಕೆ ದೂರು ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಸ್ವಜನ್ಯ ಕಲಾ ವೇದಿಕೆಯ ಅಧ್ಯಕ್ಷ ಎಸ್. ಶಿಶಿರಂಜನ್, ‘ಶಿಕ್ಷಣವು ವಿದ್ಯಾರ್ಥಿಗಳನ್ನು ಅಕ್ಷರಸ್ಥರನ್ನಾಗಿ, ಬುದ್ಧಿವಂತರನ್ನಾಗಿ ಮಾಡಿದರೆ, ಎನ್ಎಸ್ಎಸ್ ಶಿಬಿರಗಳು ಸಾಮಾಜಿಕ ಪ್ರಜ್ಞೆ, ಸೇವಾ ಮನೋಭಾವ ಬೆಳೆಸಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಿವೆ’ ಎಂದರು.</p>.<p>ಎನ್ಎಸ್ಎಸ್ ಶಿಬಿರಾಧಿಕಾರಿ ಎಸ್. ಆನಂದ್, ಸಹ ಶಿಬಿರಾಧಿಕಾರಿಗಳಾದ ಎಂ.ಆರ್. ಮೇಘನಾ ಮತ್ತು ಬಿ.ಎಸ್. ಆಶಾ, ಉಪನ್ಯಾಸಕ ಧರ್ಮೇಂದ್ರ, ತಿ.ನರಸೀಪುರ ವಿದ್ಯೋದಯ ಕಾಲೇಜಿನ ಗ್ರಂಥಪಾಲಕ ಶಿವಮೂರ್ತಿ, ಗ್ರಾಮದ ಮುಖಂಡರಾದ ಮಹದೇವಪ್ಪ, ವಿವೇಕಾನಂದ, ಮಲ್ಕಣ್ಣ, ಶಿವಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಮಾಜದ ಪ್ರಗತಿಗೆ ಬಹು ದೊಡ್ಡ ತೊಡಕಾಗಿರುವ ಹಾಗೂ ಜನರನ್ನು ಕಾಡುತ್ತಿರುವ ಭ್ರಷ್ಟಾಚಾರದ ಪಿಡುಗು ನಿರ್ಮೂಲನೆಗೆ ಯುವಜನರು ಮತ್ತು ವಿದ್ಯಾರ್ಥಿಗಳು ಸಂಘಟಿತ ಹೋರಾಟ ನಡೆಸಬೇಕು’ ಎಂದು ಸಾಹಿತಿ ಟಿ. ಸತೀಶ್ ಜವರೇಗೌಡ ಸಲಹೆ ನೀಡಿದರು.</p>.<p>ತಾಲ್ಲೂಕಿನ ದೊಡ್ಡಕಾನ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೈಸೂರು ವಿಶ್ವವಿದ್ಯಾಲಯ ಎನ್ಎಸ್ಎಸ್ ಹಾಗೂ ಜಯಲಕ್ಷ್ಮೀಪುರಂನ ಕುವೆಂಪು ಪ್ರಥಮ ದರ್ಜೆ ಕಾಲೇಜಿನಿಂದ ಈಚೆಗೆ ಹಮ್ಮಿಕೊಂಡಿದ್ದ ‘ಯೂತ್ ಫಾರ್ ಮೈ ಭಾರತ್’ ವಾರ್ಷಿಕ ವಿಶೇಷ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಸಮಾಜವನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಜಾತೀಯತೆ, ಧರ್ಮಾಂಧತೆ, ಭ್ರಷ್ಟಾಚಾರ ಪ್ರಮುಖವಾಗಿವೆ. ಇದರಿಂದಾಗಿ ಸಾಮಾಜಿಕ ಸ್ವಾಸ್ಥ್ಯ ಹಾಗೂ ಜನರ ನೆಮ್ಮದಿ ಹಾಳಾಗುತ್ತಿದೆ’ ಎಂದು ವಿಷಾದಿಸಿದರು.</p>.<p>‘ಸರ್ಕಾರಿ ಅಧಿಕಾರಿ ಅಥವಾ ನೌಕರ ಸಕಾಲಕ್ಕೆ ನ್ಯಾಯಯುತವಾದ ಕೆಲಸ ಮಾಡಿಕೊಡದಿದ್ದರೆ, ನಿರ್ಲಕ್ಷ್ಯ ತೋರಿದರೆ, ಲಂಚ ಕೇಳಿದರೆ ಲೋಕಾಯುಕ್ತಕ್ಕೆ ದೂರು ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಸ್ವಜನ್ಯ ಕಲಾ ವೇದಿಕೆಯ ಅಧ್ಯಕ್ಷ ಎಸ್. ಶಿಶಿರಂಜನ್, ‘ಶಿಕ್ಷಣವು ವಿದ್ಯಾರ್ಥಿಗಳನ್ನು ಅಕ್ಷರಸ್ಥರನ್ನಾಗಿ, ಬುದ್ಧಿವಂತರನ್ನಾಗಿ ಮಾಡಿದರೆ, ಎನ್ಎಸ್ಎಸ್ ಶಿಬಿರಗಳು ಸಾಮಾಜಿಕ ಪ್ರಜ್ಞೆ, ಸೇವಾ ಮನೋಭಾವ ಬೆಳೆಸಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಿವೆ’ ಎಂದರು.</p>.<p>ಎನ್ಎಸ್ಎಸ್ ಶಿಬಿರಾಧಿಕಾರಿ ಎಸ್. ಆನಂದ್, ಸಹ ಶಿಬಿರಾಧಿಕಾರಿಗಳಾದ ಎಂ.ಆರ್. ಮೇಘನಾ ಮತ್ತು ಬಿ.ಎಸ್. ಆಶಾ, ಉಪನ್ಯಾಸಕ ಧರ್ಮೇಂದ್ರ, ತಿ.ನರಸೀಪುರ ವಿದ್ಯೋದಯ ಕಾಲೇಜಿನ ಗ್ರಂಥಪಾಲಕ ಶಿವಮೂರ್ತಿ, ಗ್ರಾಮದ ಮುಖಂಡರಾದ ಮಹದೇವಪ್ಪ, ವಿವೇಕಾನಂದ, ಮಲ್ಕಣ್ಣ, ಶಿವಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>