<p><strong>ಮೈಸೂರು</strong>: ಕೇಂದ್ರ ಸರ್ಕಾರ ಬಜೆಟ್ ಜನವಿರೋಧಿಯಾಗಿದೆ ಎಂದು ಆರೋಪಿಸಿ ಸಿಐಟಿಯು ಸಂಘಟನೆ ಸದಸ್ಯರು ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಸಿಐಟಿಯು ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಬಂಡವಾಳಶಾಹಿಗಳ ಪರವಾಗಿದೆ. ಕಾರ್ಮಿಕರು, ಬಡವರ ವಿರೋಧಿಯಾಗಿದೆ. ಜನ ಹಾಗೂ ಅಭಿವೃದ್ಧಿ ಪರವಾಗಿಲ್ಲ’ ಎಂದು ಆರೋಪಿಸಿದರು.</p>.<p>‘ನಿರುದ್ಯೋಗ ಹಾಗೂ ಹಣದುಬ್ಬರ ನಿಯಂತ್ರಣಕ್ಕೆ ಯಾವುದೇ ಕ್ರಮ ವಹಿಸಿಲ್ಲ. ಸಾರ್ವಜನಿಕ ಉದ್ಯಮಗಳನ್ನು ವ್ಯವಸ್ಥಿತವಾಗಿ ಖಾಸಗೀಕರಣಗೊಳಿಸುವುದು ಮುಂದುವರಿದಿದೆ. ಗ್ರಾಮೀಣ ರಸ್ತೆಯಿಂದ ಬಾಹ್ಯಾಕಾಶ ತಂತ್ರಜ್ಞಾನದವರೆಗೆ ಖಾಸಗಿ ಕ್ಷೇತ್ರದವರಿಗೆ ಲಾಭ ಮಾಡಿಕೊಡುವ ಉದ್ದೇಶವನ್ನು ಬಜೆಟ್ ಹೊಂದಿದೆ’ ಎಂದು ಟೀಕಿಸಿದರು.</p>.<p>‘ಆರ್ಥಿಕತೆಯು ಕುಂಟುತ್ತಾ ಸಾಗಿದೆ. ಸಾರ್ವಜನಿಕ ಸಂಪತ್ತನ್ನು ಮಾರಾಟಕ್ಕಿಡುತ್ತಿದೆ. ವಿತ್ತೀಯ ಕೊರತೆಯು ಹೆಚ್ಚಿದೆ. ಕಾರ್ಪೊರೇಟ್ ತೆರಿಗೆ ಹೆಚ್ಚಳ ಶೇ 10.4ರಷ್ಟಿದೆ. ಆದರೆ, ಜನರ ಮೇಲೆ ನೇರ ಹಾಗೂ ಪರೋಕ್ಷ ತೆರಿಗೆಯನ್ನು ಹೆಚ್ಚಿಸುವುದು ಮುಂದುವರಿದಿದೆ’ ಎಂದು ಕಿಡಿಕಾರಿದರು. </p>.<p>‘ಬಡವರು, ರೈತರು, ಕೃಷಿ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಕೃಷಿಯ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರೂ, ಬಜೆಟ್ನಲ್ಲಿ ಕಡಿಮೆ ಅನುದಾನ ಮೀಸಲಿಡಲಾಗಿದೆ. ಕಾರ್ಮಿಕರ ಪರವಾಗಿ ಯಾವುದೇ ಯೋಜನೆಯಿಲ್ಲ. ಒಕ್ಕೂಟದ ರಾಜ್ಯಗಳ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮುಂದುವರಿದಿದೆ’ ಎಂದು ಕಳವಳ ವ್ಯಕ್ತಪಡಿಸಿದರು. </p>.<p>ಪ್ರಧಾನ ಕಾರ್ಯದರ್ಶಿ ಎನ್.ಕೆ.ಬಾಲಾಜಿರಾವ್, ಜಿಲ್ಲಾಧ್ಯಕ್ಷ ಜಯರಾಮ್, ಸುನಂದಾ, ಪುಷ್ಪಾ, ಶಾಕುಂತಲಾ, ಲೀಲಾವತಿ, ನೀಲಮ್ಮ, ವಿಜಯಕುಮಾರ್, ಮೆಹಬೂಬ್, ಅಣ್ಣಪ್ಪ, ಶ್ರೀಧರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕೇಂದ್ರ ಸರ್ಕಾರ ಬಜೆಟ್ ಜನವಿರೋಧಿಯಾಗಿದೆ ಎಂದು ಆರೋಪಿಸಿ ಸಿಐಟಿಯು ಸಂಘಟನೆ ಸದಸ್ಯರು ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಸಿಐಟಿಯು ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಬಂಡವಾಳಶಾಹಿಗಳ ಪರವಾಗಿದೆ. ಕಾರ್ಮಿಕರು, ಬಡವರ ವಿರೋಧಿಯಾಗಿದೆ. ಜನ ಹಾಗೂ ಅಭಿವೃದ್ಧಿ ಪರವಾಗಿಲ್ಲ’ ಎಂದು ಆರೋಪಿಸಿದರು.</p>.<p>‘ನಿರುದ್ಯೋಗ ಹಾಗೂ ಹಣದುಬ್ಬರ ನಿಯಂತ್ರಣಕ್ಕೆ ಯಾವುದೇ ಕ್ರಮ ವಹಿಸಿಲ್ಲ. ಸಾರ್ವಜನಿಕ ಉದ್ಯಮಗಳನ್ನು ವ್ಯವಸ್ಥಿತವಾಗಿ ಖಾಸಗೀಕರಣಗೊಳಿಸುವುದು ಮುಂದುವರಿದಿದೆ. ಗ್ರಾಮೀಣ ರಸ್ತೆಯಿಂದ ಬಾಹ್ಯಾಕಾಶ ತಂತ್ರಜ್ಞಾನದವರೆಗೆ ಖಾಸಗಿ ಕ್ಷೇತ್ರದವರಿಗೆ ಲಾಭ ಮಾಡಿಕೊಡುವ ಉದ್ದೇಶವನ್ನು ಬಜೆಟ್ ಹೊಂದಿದೆ’ ಎಂದು ಟೀಕಿಸಿದರು.</p>.<p>‘ಆರ್ಥಿಕತೆಯು ಕುಂಟುತ್ತಾ ಸಾಗಿದೆ. ಸಾರ್ವಜನಿಕ ಸಂಪತ್ತನ್ನು ಮಾರಾಟಕ್ಕಿಡುತ್ತಿದೆ. ವಿತ್ತೀಯ ಕೊರತೆಯು ಹೆಚ್ಚಿದೆ. ಕಾರ್ಪೊರೇಟ್ ತೆರಿಗೆ ಹೆಚ್ಚಳ ಶೇ 10.4ರಷ್ಟಿದೆ. ಆದರೆ, ಜನರ ಮೇಲೆ ನೇರ ಹಾಗೂ ಪರೋಕ್ಷ ತೆರಿಗೆಯನ್ನು ಹೆಚ್ಚಿಸುವುದು ಮುಂದುವರಿದಿದೆ’ ಎಂದು ಕಿಡಿಕಾರಿದರು. </p>.<p>‘ಬಡವರು, ರೈತರು, ಕೃಷಿ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಕೃಷಿಯ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರೂ, ಬಜೆಟ್ನಲ್ಲಿ ಕಡಿಮೆ ಅನುದಾನ ಮೀಸಲಿಡಲಾಗಿದೆ. ಕಾರ್ಮಿಕರ ಪರವಾಗಿ ಯಾವುದೇ ಯೋಜನೆಯಿಲ್ಲ. ಒಕ್ಕೂಟದ ರಾಜ್ಯಗಳ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮುಂದುವರಿದಿದೆ’ ಎಂದು ಕಳವಳ ವ್ಯಕ್ತಪಡಿಸಿದರು. </p>.<p>ಪ್ರಧಾನ ಕಾರ್ಯದರ್ಶಿ ಎನ್.ಕೆ.ಬಾಲಾಜಿರಾವ್, ಜಿಲ್ಲಾಧ್ಯಕ್ಷ ಜಯರಾಮ್, ಸುನಂದಾ, ಪುಷ್ಪಾ, ಶಾಕುಂತಲಾ, ಲೀಲಾವತಿ, ನೀಲಮ್ಮ, ವಿಜಯಕುಮಾರ್, ಮೆಹಬೂಬ್, ಅಣ್ಣಪ್ಪ, ಶ್ರೀಧರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>