ಈ ಬಗ್ಗೆ ಇಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ‘ಅವರಿಗೆ ಸ್ಥಳೀಯವಾಗಿ ಒಂದಿಷ್ಟು ಸಮಸ್ಯೆಗಳಿವೆ. ಆ ಕಾರಣದಿಂದಾಗಿ ಪಕ್ಷದ ಕಾರ್ಯಾಗಾರಕ್ಕೆ ಬಂದಿಲ್ಲ. ನಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿದ್ದಾರೆ. ಇರುವುದು–ಬಿಡುವುದು ಅವರ ವೈಯಕ್ತಿಕ ನಿರ್ಧಾರ’ ಎಂದು ಹೇಳಿದರು.