<p>ಮೈಸೂರು: ‘ಕಲೆ ಮತ್ತು ಸಾಹಿತ್ಯ ಮನಸ್ಸನ್ನು ಸಂತಸಗೊಳಿಸುವುದಲ್ಲದೇ ಬದುಕನ್ನು ಅರ್ಥಪೂರ್ಣವಾಗಿ ಸಾಗಿಸಲು ಸಹಕರಿಸುತ್ತದೆ’ ಎಂದು ದೃಶ್ಯ ಕಲಾವಿದ ಶ್ರೀದರ್ಶನ್ ಭಾಸ್ಕರ್ ಮಲ್ವಾಂಕರ್ ಹೇಳಿದರು.</p>.<p>ಮಹಿಳೆ ಮತ್ತು ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ರಾಣಿ ಕೆಂಪನಂಜಮ್ಮಣ್ಣಿ ಅಮ್ಮನವರ ಉದ್ಯಾನದಲ್ಲಿ ಇಂಗ್ಲಿಷ್ ವಿಭಾಗದಿಂದ ಬುಧವಾರ ಆಯೋಜಿಸಿದ್ದ ಭಿತ್ತಿಪತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.</p>.<p>‘ವಿಜ್ಞಾನ ಓದಿನ ಜತೆಗೆ ಕಲೆ ಮತ್ತು ಸಾಹಿತ್ಯ ಅಭ್ಯಾಸ ಬದುಕನ್ನು ರೂಪಿಸಲು ಅನುವು ಮಾಡಿಕೊಡಲಿದ್ದು, ಅದರ ಕಡೆಗೂ ಗಮನಹರಿಸಿ. ಕೃತಕ ಬುದ್ಧಿಮತ್ತೆ ಆಳುತ್ತಿರುವ ಈ ದಿನಗಳಲ್ಲಿ ಆಧುನಿಕ ತಾಂತ್ರಿಕ ಕೌಶಲ ಕಲಿಕೆ ಉದ್ಯೋಗ ಒದಗಿಸಲಿದೆ’ ಎಂದು ಸಲಹೆ ನೀಡಿದರು.</p>.<p>ಕಾಲೇಜು ಪ್ರಾಂಶುಪಾಲ ಪ್ರೊ.ಎಂ.ಅಬ್ದುಲ್ ರಹಿಮಾನ್ ಅಧ್ಯಕ್ಷತೆ ವಹಿಸಿ, ‘ಬದುಕಿನ ಹಾದಿ ಕಂಡುಕೊಳ್ಳುವಲ್ಲಿ ಕ್ರಿಯಾಶೀಲತೆ ಬಹುಮುಖ್ಯ ಪಾತ್ರ ವಹಿಸಲಿದೆ’ ಎಂದರು.</p>.<p>ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗೋವಿಂದರಾಜು, ‘ಭಿತ್ತಿಪತ್ರ ರಚನೆ ಕೇವಲ ಶೈಕ್ಷಣಿಕ ಅಗತ್ಯ ಪ್ರಕ್ರಿಯೆ ಮಾತ್ರ ಆಗದೆ, ಉದ್ಯೋಗ ಮತ್ತು ಬದುಕಿನ ಮಾರ್ಗವಾಗಿಯೂ ಮಾಡಿಕೊಳ್ಳಲು ಸಾಧ್ಯ’ ಎಂದರು.</p>.<p>ದ್ವಿತೀಯ ಬಿಎಸ್ಸಿ ಪದವಿ ತರಗತಿಯ ಸುಮಾರು 165 ವಿದ್ಯಾರ್ಥಿಗಳು ಸಮಾಜಮುಖಿ, ಮಹಿಳಾ ಅಭ್ಯುದಯ ಕೇಂದ್ರಿತ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.</p>.<p>ರಕ್ತದಾನ, ಕೃತಕ ಬುದ್ಧಿಮತ್ತೆ, ನಿಧಾನವೇ ಪ್ರಧಾನ, ಆಹಾರ ವಿಜ್ಞಾನ, ಮಕ್ಕಳ ಸುರಕ್ಷತೆ, ಪ್ಲಾಸ್ಟಿಕ್ ಬಳಕೆ ನಿಷೇಧ, ಭೂಮಂಡಲ ರಕ್ಷಣೆ, ಡ್ರಗ್ಸ್ ನಿಷೇಧ, ಹವಾಮಾನ ವೈಪರೀತ್ಯ, ಆರೋಗ್ಯ ರಕ್ಷಣೆ, ಮಾನವ ಅಂಗಾಂಗ ದಾನ, ಹೆಣ್ಣುಮಕ್ಕಳ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆಯೂ ಬೆಳಕು ಚೆಲ್ಲಲಾಯಿತು.</p>.<p>ಎಚ್.ಎಸ್.ಪರಶಿವಮೂರ್ತಿ ಮತ್ತು ಎನ್.ಶೋಭಲತಾ ತೀರ್ಪುಗಾರರಾಗಿದ್ದರು. ರಾಮಚಂದ್ರ, ಎನ್ಎಸ್ಎಸ್ ಅಧಿಕಾರಿ ಲಕ್ಷ್ಮಣ ಬಿ, ನಂಜುಂಡಸ್ವಾಮಿ, ಅಧ್ಯಾಪಕರಾದ ರಂಗನಾಥ ಎಚ್.ಎಸ್, ದಿನೇಶ ಎಚ್.ಆರ್, ಮಂಜುನಾಥ ಕೆ.ಎಂ, ಲೋಕೇಶ್ ಟಿ.ವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಕಲೆ ಮತ್ತು ಸಾಹಿತ್ಯ ಮನಸ್ಸನ್ನು ಸಂತಸಗೊಳಿಸುವುದಲ್ಲದೇ ಬದುಕನ್ನು ಅರ್ಥಪೂರ್ಣವಾಗಿ ಸಾಗಿಸಲು ಸಹಕರಿಸುತ್ತದೆ’ ಎಂದು ದೃಶ್ಯ ಕಲಾವಿದ ಶ್ರೀದರ್ಶನ್ ಭಾಸ್ಕರ್ ಮಲ್ವಾಂಕರ್ ಹೇಳಿದರು.</p>.<p>ಮಹಿಳೆ ಮತ್ತು ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ರಾಣಿ ಕೆಂಪನಂಜಮ್ಮಣ್ಣಿ ಅಮ್ಮನವರ ಉದ್ಯಾನದಲ್ಲಿ ಇಂಗ್ಲಿಷ್ ವಿಭಾಗದಿಂದ ಬುಧವಾರ ಆಯೋಜಿಸಿದ್ದ ಭಿತ್ತಿಪತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.</p>.<p>‘ವಿಜ್ಞಾನ ಓದಿನ ಜತೆಗೆ ಕಲೆ ಮತ್ತು ಸಾಹಿತ್ಯ ಅಭ್ಯಾಸ ಬದುಕನ್ನು ರೂಪಿಸಲು ಅನುವು ಮಾಡಿಕೊಡಲಿದ್ದು, ಅದರ ಕಡೆಗೂ ಗಮನಹರಿಸಿ. ಕೃತಕ ಬುದ್ಧಿಮತ್ತೆ ಆಳುತ್ತಿರುವ ಈ ದಿನಗಳಲ್ಲಿ ಆಧುನಿಕ ತಾಂತ್ರಿಕ ಕೌಶಲ ಕಲಿಕೆ ಉದ್ಯೋಗ ಒದಗಿಸಲಿದೆ’ ಎಂದು ಸಲಹೆ ನೀಡಿದರು.</p>.<p>ಕಾಲೇಜು ಪ್ರಾಂಶುಪಾಲ ಪ್ರೊ.ಎಂ.ಅಬ್ದುಲ್ ರಹಿಮಾನ್ ಅಧ್ಯಕ್ಷತೆ ವಹಿಸಿ, ‘ಬದುಕಿನ ಹಾದಿ ಕಂಡುಕೊಳ್ಳುವಲ್ಲಿ ಕ್ರಿಯಾಶೀಲತೆ ಬಹುಮುಖ್ಯ ಪಾತ್ರ ವಹಿಸಲಿದೆ’ ಎಂದರು.</p>.<p>ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗೋವಿಂದರಾಜು, ‘ಭಿತ್ತಿಪತ್ರ ರಚನೆ ಕೇವಲ ಶೈಕ್ಷಣಿಕ ಅಗತ್ಯ ಪ್ರಕ್ರಿಯೆ ಮಾತ್ರ ಆಗದೆ, ಉದ್ಯೋಗ ಮತ್ತು ಬದುಕಿನ ಮಾರ್ಗವಾಗಿಯೂ ಮಾಡಿಕೊಳ್ಳಲು ಸಾಧ್ಯ’ ಎಂದರು.</p>.<p>ದ್ವಿತೀಯ ಬಿಎಸ್ಸಿ ಪದವಿ ತರಗತಿಯ ಸುಮಾರು 165 ವಿದ್ಯಾರ್ಥಿಗಳು ಸಮಾಜಮುಖಿ, ಮಹಿಳಾ ಅಭ್ಯುದಯ ಕೇಂದ್ರಿತ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.</p>.<p>ರಕ್ತದಾನ, ಕೃತಕ ಬುದ್ಧಿಮತ್ತೆ, ನಿಧಾನವೇ ಪ್ರಧಾನ, ಆಹಾರ ವಿಜ್ಞಾನ, ಮಕ್ಕಳ ಸುರಕ್ಷತೆ, ಪ್ಲಾಸ್ಟಿಕ್ ಬಳಕೆ ನಿಷೇಧ, ಭೂಮಂಡಲ ರಕ್ಷಣೆ, ಡ್ರಗ್ಸ್ ನಿಷೇಧ, ಹವಾಮಾನ ವೈಪರೀತ್ಯ, ಆರೋಗ್ಯ ರಕ್ಷಣೆ, ಮಾನವ ಅಂಗಾಂಗ ದಾನ, ಹೆಣ್ಣುಮಕ್ಕಳ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆಯೂ ಬೆಳಕು ಚೆಲ್ಲಲಾಯಿತು.</p>.<p>ಎಚ್.ಎಸ್.ಪರಶಿವಮೂರ್ತಿ ಮತ್ತು ಎನ್.ಶೋಭಲತಾ ತೀರ್ಪುಗಾರರಾಗಿದ್ದರು. ರಾಮಚಂದ್ರ, ಎನ್ಎಸ್ಎಸ್ ಅಧಿಕಾರಿ ಲಕ್ಷ್ಮಣ ಬಿ, ನಂಜುಂಡಸ್ವಾಮಿ, ಅಧ್ಯಾಪಕರಾದ ರಂಗನಾಥ ಎಚ್.ಎಸ್, ದಿನೇಶ ಎಚ್.ಆರ್, ಮಂಜುನಾಥ ಕೆ.ಎಂ, ಲೋಕೇಶ್ ಟಿ.ವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>