ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಸಿ.ರೇವಣ್ಣ, ರಂಗಶೆಟ್ಟಿ, ಪುಟ್ಟಣ್ಣ, ಗಿರೀಜಾ, ಹೇಮಾವತಿ, ವೇದಾಂಬ ಅವರನ್ನು ಸನ್ಮಾನಿಸಲಾಯಿತು. ಶಸಾಪ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಹೆಳವರ ಹುಂಡಿ ಸಿದ್ಧಪ್ಪ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಎಪಿಎನ್ ಪ್ರಾಪರ್ಟೀಸ್ ಮ್ಯಾನೇಜಿಂಗ್ ಪಾರ್ಟ್ನರ್ ಎ.ಪಿ.ನಾಗೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಉಪಸ್ಥಿತರಿದ್ದರು.