‘ತಮ್ಮ ಮನೆಯ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ಕಂಬದಲ್ಲಿನ ತಂತಿಯನ್ನು ಸರಿಪಡಿಸುವಂತೆ ಮನವಿ ಮಾಡಿದ್ದ ವಿಶಾಲಾಕ್ಷಿ ಮೇಲೆ ಒಕ್ಕಲಿಗ ಸಮುದಾಯದ ಭಾಗ್ಯಮ್ಮ, ರಮೇಶ್ ಅವರ ಮಕ್ಕಳಾದ ಮಾರುತಿ, ಪಿಂಕಿ ಆ.8ರಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ನೆಪಮಾತ್ರಕ್ಕೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾಗ್ಯಮ್ಮ, ರಮೇಶ್ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಾರುತಿ, ಪಿಂಕಿಯನ್ನು ಬಂಧಿಸಿಲ್ಲ. ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.