<p><strong>ಮೈಸೂರು: </strong>ಸುಮಾರು ನಾಲ್ಕು ಸಾವಿರ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ ಉದ್ಯಮಗಳು (ಎಂಎಸ್ಎಂಇ) ಮೈಸೂರು ಜಿಲ್ಲೆಗೆ ಬರಲು ಸಿದ್ಧವಾಗಿವೆ. ಅವುಗಳಿಗೆ ತ್ವರಿತಗತಿಯಲ್ಲಿ ಅನುಮತಿ ದೊರೆಯಲು ಕ್ರಮವಹಿಸಬೇಕು ಎಂದು ‘ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ’ದ (ಕಾಸಿಯಾ) ಅಧ್ಯಕ್ಷ ಕೆ.ಬಿ.ಅರಸಪ್ಪ ಹೇಳಿದರು.</p>.<p>‘ಕೈಗಾರಿಕೆ ಆರಂಭಿಸಲು ಹಲವು ಮಂದಿ ಅರ್ಜಿ ಸಲ್ಲಿಸಿ ಅನುಮತಿಗಾಗಿ ಕಾಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹೊಸ ಕೈಗಾರಿಕೆಗಳಿಗೆ ಅನುವು ಮಾಡಿಕೊಡಲು ಮೈಸೂರು ಮಾತ್ರವಲ್ಲ, ರಾಜ್ಯದ ವಿವಿಧೆಡೆ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಬೇಕು’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಸಣ್ಣ ಕೈಗಾರಿಕೆಗಳಿಗೆ ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹ ಬೇಕಾಗಿದೆ. ಕೇಂದ್ರ ಸರ್ಕಾರದ ‘ಆತ್ಮನಿರ್ಭರ ಭಾರತ’ ಯೋಜನೆಯು ಎಂಎಸ್ಎಂಇಗಳಿಗೆ ಭರವಸೆ ಮೂಡಿಸಿದೆ ಎಂದು ತಿಳಿಸಿದರು.</p>.<p>ಕೋವಿಡ್ನಿಂದ ಎಂಎಸ್ಎಂಇ ಒಳಗೊಂಡಂತೆ ಎಲ್ಲ ಉದ್ದಿಮೆಗಳಿಗೆ ತೊಂದರೆ ಉಂಟಾಗಿದೆ. ಲಾಕ್ಡೌನ್ ತೆರವಾದ ಬಳಿಕ ಒಂದೆರಡು ತಿಂಗಳು ಶೇ 20ರಷ್ಟು ಕಾರ್ಮಿಕರು ಮಾತ್ರ ಮರಳಿದ್ದರು. ಈಗ ಶೇ 50ರಿಂದ 60ರಷ್ಟು ಕಾರ್ಮಿಕರು ಮರಳಿದ್ದಾರೆ. ಶೇ 20ರಷ್ಟು ಕೈಗಾರಿಕೆಗಳು ಇನ್ನೂ ಪುನರಾರಂಭ ಆಗಿಲ್ಲ ಎಂದರು.</p>.<p class="Subhead">ಬಡ್ಡಿ ದರ ಇಳಿಸಲಿ: ಎಂಎಸ್ಎಂಇಗಳಿಗೆ ಶೇ 12ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಕೊರೊನಾ ಕಷ್ಟಕಾಲ ಕೊನೆಗೊಳ್ಳುವವರೆಗೂ ಬಡ್ಡಿ ದರವನ್ನು ಶೇ 6ಕ್ಕೆ ಇಳಿಸುವಂತೆ ಆಗ್ರಹಿಸಿದರು.</p>.<p>‘ಕೆಲವರಿಗೆ ಶೇ 18, ಇನ್ನೂ ಕೆಲವರಿಗೆ ಶೇ 28ರಷ್ಟು ಜಿಎಸ್ಟಿ ಇದೆ. ಈಗಿನ ಪರಿಸ್ಥಿತಿಯಲ್ಲಿ ಶೇ 18ರಷ್ಟು ಜಿಎಸ್ಟಿಯನ್ನೇ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶೇ 12ಕ್ಕೆ ಇಳಿಸಬೇಕು’ ಎಂದು ಮನವಿ ಮಾಡಿದರು.</p>.<p>ಕಾರ್ಯದರ್ಶಿ ಎನ್.ಆರ್.ಜಗದೀಶ್, ಜಂಟಿ ಕಾರ್ಯದರ್ಶಿ ಪಿ.ಎನ್. ಜೈಕುಮಾರ್, ಚನ್ನಬಸಪ್ಪ ಸಿ.ಹೊಂಡಕಟ್ಟಿ, ಖಜಾಂಚಿ ಎಸ್.ಶಂಕರನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸುಮಾರು ನಾಲ್ಕು ಸಾವಿರ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ ಉದ್ಯಮಗಳು (ಎಂಎಸ್ಎಂಇ) ಮೈಸೂರು ಜಿಲ್ಲೆಗೆ ಬರಲು ಸಿದ್ಧವಾಗಿವೆ. ಅವುಗಳಿಗೆ ತ್ವರಿತಗತಿಯಲ್ಲಿ ಅನುಮತಿ ದೊರೆಯಲು ಕ್ರಮವಹಿಸಬೇಕು ಎಂದು ‘ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ’ದ (ಕಾಸಿಯಾ) ಅಧ್ಯಕ್ಷ ಕೆ.ಬಿ.ಅರಸಪ್ಪ ಹೇಳಿದರು.</p>.<p>‘ಕೈಗಾರಿಕೆ ಆರಂಭಿಸಲು ಹಲವು ಮಂದಿ ಅರ್ಜಿ ಸಲ್ಲಿಸಿ ಅನುಮತಿಗಾಗಿ ಕಾಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹೊಸ ಕೈಗಾರಿಕೆಗಳಿಗೆ ಅನುವು ಮಾಡಿಕೊಡಲು ಮೈಸೂರು ಮಾತ್ರವಲ್ಲ, ರಾಜ್ಯದ ವಿವಿಧೆಡೆ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಬೇಕು’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಸಣ್ಣ ಕೈಗಾರಿಕೆಗಳಿಗೆ ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹ ಬೇಕಾಗಿದೆ. ಕೇಂದ್ರ ಸರ್ಕಾರದ ‘ಆತ್ಮನಿರ್ಭರ ಭಾರತ’ ಯೋಜನೆಯು ಎಂಎಸ್ಎಂಇಗಳಿಗೆ ಭರವಸೆ ಮೂಡಿಸಿದೆ ಎಂದು ತಿಳಿಸಿದರು.</p>.<p>ಕೋವಿಡ್ನಿಂದ ಎಂಎಸ್ಎಂಇ ಒಳಗೊಂಡಂತೆ ಎಲ್ಲ ಉದ್ದಿಮೆಗಳಿಗೆ ತೊಂದರೆ ಉಂಟಾಗಿದೆ. ಲಾಕ್ಡೌನ್ ತೆರವಾದ ಬಳಿಕ ಒಂದೆರಡು ತಿಂಗಳು ಶೇ 20ರಷ್ಟು ಕಾರ್ಮಿಕರು ಮಾತ್ರ ಮರಳಿದ್ದರು. ಈಗ ಶೇ 50ರಿಂದ 60ರಷ್ಟು ಕಾರ್ಮಿಕರು ಮರಳಿದ್ದಾರೆ. ಶೇ 20ರಷ್ಟು ಕೈಗಾರಿಕೆಗಳು ಇನ್ನೂ ಪುನರಾರಂಭ ಆಗಿಲ್ಲ ಎಂದರು.</p>.<p class="Subhead">ಬಡ್ಡಿ ದರ ಇಳಿಸಲಿ: ಎಂಎಸ್ಎಂಇಗಳಿಗೆ ಶೇ 12ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಕೊರೊನಾ ಕಷ್ಟಕಾಲ ಕೊನೆಗೊಳ್ಳುವವರೆಗೂ ಬಡ್ಡಿ ದರವನ್ನು ಶೇ 6ಕ್ಕೆ ಇಳಿಸುವಂತೆ ಆಗ್ರಹಿಸಿದರು.</p>.<p>‘ಕೆಲವರಿಗೆ ಶೇ 18, ಇನ್ನೂ ಕೆಲವರಿಗೆ ಶೇ 28ರಷ್ಟು ಜಿಎಸ್ಟಿ ಇದೆ. ಈಗಿನ ಪರಿಸ್ಥಿತಿಯಲ್ಲಿ ಶೇ 18ರಷ್ಟು ಜಿಎಸ್ಟಿಯನ್ನೇ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶೇ 12ಕ್ಕೆ ಇಳಿಸಬೇಕು’ ಎಂದು ಮನವಿ ಮಾಡಿದರು.</p>.<p>ಕಾರ್ಯದರ್ಶಿ ಎನ್.ಆರ್.ಜಗದೀಶ್, ಜಂಟಿ ಕಾರ್ಯದರ್ಶಿ ಪಿ.ಎನ್. ಜೈಕುಮಾರ್, ಚನ್ನಬಸಪ್ಪ ಸಿ.ಹೊಂಡಕಟ್ಟಿ, ಖಜಾಂಚಿ ಎಸ್.ಶಂಕರನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>