ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವೇಶ್ವರಯ್ಯ ಅವರನ್ನು ತುಳಿಯುವ ಪ್ರಯತ್ನ: ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಕಿಡಿ

Last Updated 31 ಜುಲೈ 2021, 20:35 IST
ಅಕ್ಷರ ಗಾತ್ರ

ಮೈಸೂರು: ‘ಮೈಸೂರು ಮಹಾರಾಜರನ್ನು ಎತ್ತಿಕಟ್ಟಿ ಸರ್‌ ಎಂ.ವಿಶ್ವೇಶ್ವರಯ್ಯ ಅವರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ. ಇದು ದೇಶವನ್ನು ಹಾಳು ಮಾಡುವ ಕೃತ್ಯ’ ಎಂದು ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ದೂರಿದರು.

ನಗರದಲ್ಲಿ ಶನಿವಾರ ಲೇಖಕ ಡಿ.ಎಸ್‌.ಜಯಪ್ಪಗೌಡರ ಅಭಿನಂದನಾ ಗ್ರಂಥ ‘ಜಯಸಿರಿ’ಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ವಿಶ್ವೇಶ್ವರಯ್ಯ ಅಪರೂಪದ ವ್ಯಕ್ತಿಗಳು. ಆದರೆ, ಕನ್ನಂಬಾಡಿ ಕಟ್ಟೆ, ಮೈಸೂರು ವಿಶ್ವವಿದ್ಯಾಲಯ, ಕನ್ನಡ ಸಾಹಿತ್ಯ ಪರಿಷತ್‌ ಅನ್ನು ಮಹಾರಾಜರು ಸ್ಥಾಪಿಸಿದ್ದೇ ವಿನಃ ವಿಶ್ವೇಶ್ವರಯ್ಯನವರಲ್ಲ ಎಂದು ಕೆಲವರು ವಾದಿಸುತ್ತಿದ್ದಾರೆ. ಹಾಗಿದ್ದರೆ, ಅವುಗಳಲ್ಲಿ ವಿಶ್ವೇಶ್ವರಯ್ಯನವರ ಪಾತ್ರವಿಲ್ಲವೇ? ಎಲ್ಲವನ್ನೂ ಮಹಾರಾಜರೇ ಮಾಡಿದ್ದರು ಎಂದು ಹೇಳುತ್ತಾ ಹೋದರೆ ಇಂದಿನ ಪೀಳಿಗೆಗೆ ತಪ್ಪು ಮಾಹಿತಿ ರವಾನಿಸಿದಂತೆ ಆಗುವುದಿಲ್ಲವೇ’ ಎಂದು ಪ್ರಶ್ನಿಸಿದರು.

‘ಪ್ರಜಾಪ್ರತಿನಿಧಿ ಸಭೆಯಲ್ಲಿ ಕನ್ನಡದಲ್ಲೇ ಮಾತನಾಡಬೇಕು ಎಂದುವಿಶ್ವೇಶ್ವರಯ್ಯ ಸೂಚಿಸಿದ್ದರು. ಆಡಳಿತಕ್ಕೆ ಬೇಕಾದ ಕನ್ನಡದ ಶಬ್ದಗಳಿಗಾಗಿ ಸಂಸ್ಥೆಯನ್ನು ಸ್ಥಾಪಿಸಬೇಕೆಂದು ನಿರ್ಧರಿಸಿದ್ದರು. ಅದರ ಫಲವಾಗಿ ಕನ್ನಡ ಸಾಹಿತ್ಯ ಪರಿಷತ್‌ ಹುಟ್ಟಿತು. ಆದರೆ, ಅದರ ಶ್ರೇಯಸ್ಸನ್ನು ಮಹಾರಾಜರಿಗೆ ನೀಡುತ್ತಿದ್ದಾರೆ. ನಿಜವಾಗಿ ಕೆಲಸ ಮಾಡಿದವರು ಯಾರು ಎಂಬುದನ್ನು ಜನರಿಗೆ ತಿಳಿಸಬೇಕಲ್ಲವೇ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT