<p><strong>ಮೈಸೂರು</strong>: ‘ಜಗತ್ತಿನಾದ್ಯಂತ ಡಿಮೆನ್ಷಿಯಾ (ಬುದ್ಧಿಮಾಂದ್ಯತೆ) ಪ್ರಕರಣ ಹೆಚ್ಚುತ್ತಿದ್ದು, ಜನರ ಆರೋಗ್ಯಯುತ ವೃದ್ಧಾಪ್ಯಕ್ಕೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಡಿಮೆನ್ಷಿಯಾ ಇಂಡಿಯಾ ಅಲಯನ್ಸ್ (ಡಿಐಎ) ಅಧ್ಯಕ್ಷೆ ರಾಧಾ ಎಸ್.ಮೂರ್ತಿ ಹೇಳಿದರು.</p>.<p>ನಗರದ ಜೆಎಸ್ಎಸ್ ವೈದ್ಯಕೀಯ ಕಾಲೇಜಿನಿಂದ ಜೆಎಸ್ಎಸ್ ಆಸ್ಪತ್ರೆ ಸಭಾಂಗಣದಲ್ಲಿ ಗುರುವಾರ ಆರಂಭಗೊಂಡ ದೀರ್ಘಾಯುಷ್ಯಕ್ಕಾಗಿ ಬುದ್ಧಿಮಾಂದ್ಯತೆಯ ಅರಿವು, ಆರೋಗ್ಯಕರ ವೃದ್ಧಾಪ್ಯ ಮತ್ತು ಅರಿವಿನ ಆರೋಗ್ಯಕ್ಕೆ ಸಂಬಂಧಿಸಿದ 2 ದಿನಗಳ ‘ಕಾಗ್ನಿಸೆನ್ಸ್ ಪ್ಲಸ್– 2025’ ಅಂತರರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿರಿಯ ನಾಗರಿಕರಲ್ಲಿ ಜ್ಞಾಪಕಶಕ್ತಿ ಅಥವಾ ಬುದ್ಧಿ ಮಂದವಾಗಲು ಹಲವು ಕಾರಣಗಳಿವೆ. ಇಂಥ ಪ್ರಕರಣಗಳು ರೋಗಿಗೆ ಮಾತ್ರವಲ್ಲದೇ ಅವಲಂಬಿತರು ಹಾಗೂ ಜೊತೆಗಾರರಿಗೂ ಒತ್ತಡ ಉಂಟುಮಾಡುತ್ತದೆ. ಸಮಸ್ಯೆಯನ್ನು ಪ್ರಾರಂಭದಲ್ಲಿಯೇ ಗುರುತಿಸಿ ಚಿಕಿತ್ಸೆಗೆ ಮುಂದಾಗುವುದು ಹೆಚ್ಚು ಪರಿಣಾಮಕಾರಿ. ಹಾಗಾಗಿ ಎಲ್ಲರಲ್ಲೂ ಜಾಗೃತಿ ಮೂಡಬೇಕು’ ಎಂದರು.</p>.<p>‘ಆರೈಕೆದಾರರು ಮತ್ತು ಆರೋಗ್ಯ ಕ್ಷೇತ್ರದ ಸಿಬ್ಬಂದಿಯು ರೋಗಿಗಳಿಗಿರುವ ಸಮಗ್ರ ಆರೈಕೆ ವ್ಯವಸ್ಥೆಗಳ ಬಗ್ಗೆ ಮಾಹಿತಿ ಹಾಗೂ ಸುಧಾರಿತ ತರಬೇತಿ ಹೊಂದಬೇಕು’ ಎಂದು ಸಲಹೆ ನೀಡಿದರು.</p>.<p>ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನ(ನಿಯಾಸ್) ಟಿ.ವಿ.ರಾಮನ್ ಪೈ ವಿಭಾಗದ ಚೇರ್ಮನ್ ಡಾ.ದೀಪ್ತಿ ನವರತ್ನ ಮಾತನಾಡಿ, ಭಾರತೀಯ ಶಾಸ್ತ್ರೀಯ ಸಂಗೀತದ ಮೂಲಕ ‘ನ್ಯೂರೊ ಸಂಗೀತಶಾಸ್ತ್ರ’ ವಿಧಾನದಲ್ಲಿ ಅರಿವಿನ ಆರೋಗ್ಯ ಸುಧಾರಣೆಗೆ ಇರುವ ಅವಕಾಶ ಕುರಿತು ವಿವರಿಸಿದರು.</p>.<p>ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಕುಲಪತಿ ಎಚ್.ಬಸವನಗೌಡಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ಪಿ.ರಜನಿ, ಪ್ರಾಂಶುಪಾಲ ಡಿ.ನಾರಾಯಣಪ್ಪ ಮಾತನಾಡಿದರು.</p>.<p>ಆಸ್ಪತ್ರೆ ನಿರ್ದೇಶಕ ಡಾ.ಸಿ.ಪಿ.ಮಧು, ಅಕಾಡೆಮಿ ಆಡಳಿತಾಧಿಕಾರಿ ಎಸ್.ಆರ್.ಸತೀಶ್ಚಂದ್ರ ಉಪಸ್ಥಿತರಿದ್ದರು.</p>.<p>ಸಮ್ಮೇಳನದಲ್ಲಿ 200ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. 20ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ, 60ಕ್ಕೂ ಹೆಚ್ಚು ವೈಜ್ಞಾನಿಕ ಸಂಶೋಧನೆ ಪ್ರಸ್ತುತಪಡಿಸಲಾಗುತ್ತದೆ.</p>.<p>ಬುದ್ಧಿಮಾಂದ್ಯತೆಯುಳ್ಳ ರೋಗಿಗಳ ಆರೈಕೆಯಲ್ಲಿ ಜಾಗತಿಕ ಪಾಲುದಾರಿಕೆ ಮತ್ತು ಸಂಶೋಧನೆಗಳು ಅಗತ್ಯ ಡಾ.ಎಚ್.ಬಸವನಗೌಡಪ್ಪ<span class="Designate"> ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಕುಲಪತಿ</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಜಗತ್ತಿನಾದ್ಯಂತ ಡಿಮೆನ್ಷಿಯಾ (ಬುದ್ಧಿಮಾಂದ್ಯತೆ) ಪ್ರಕರಣ ಹೆಚ್ಚುತ್ತಿದ್ದು, ಜನರ ಆರೋಗ್ಯಯುತ ವೃದ್ಧಾಪ್ಯಕ್ಕೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಡಿಮೆನ್ಷಿಯಾ ಇಂಡಿಯಾ ಅಲಯನ್ಸ್ (ಡಿಐಎ) ಅಧ್ಯಕ್ಷೆ ರಾಧಾ ಎಸ್.ಮೂರ್ತಿ ಹೇಳಿದರು.</p>.<p>ನಗರದ ಜೆಎಸ್ಎಸ್ ವೈದ್ಯಕೀಯ ಕಾಲೇಜಿನಿಂದ ಜೆಎಸ್ಎಸ್ ಆಸ್ಪತ್ರೆ ಸಭಾಂಗಣದಲ್ಲಿ ಗುರುವಾರ ಆರಂಭಗೊಂಡ ದೀರ್ಘಾಯುಷ್ಯಕ್ಕಾಗಿ ಬುದ್ಧಿಮಾಂದ್ಯತೆಯ ಅರಿವು, ಆರೋಗ್ಯಕರ ವೃದ್ಧಾಪ್ಯ ಮತ್ತು ಅರಿವಿನ ಆರೋಗ್ಯಕ್ಕೆ ಸಂಬಂಧಿಸಿದ 2 ದಿನಗಳ ‘ಕಾಗ್ನಿಸೆನ್ಸ್ ಪ್ಲಸ್– 2025’ ಅಂತರರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿರಿಯ ನಾಗರಿಕರಲ್ಲಿ ಜ್ಞಾಪಕಶಕ್ತಿ ಅಥವಾ ಬುದ್ಧಿ ಮಂದವಾಗಲು ಹಲವು ಕಾರಣಗಳಿವೆ. ಇಂಥ ಪ್ರಕರಣಗಳು ರೋಗಿಗೆ ಮಾತ್ರವಲ್ಲದೇ ಅವಲಂಬಿತರು ಹಾಗೂ ಜೊತೆಗಾರರಿಗೂ ಒತ್ತಡ ಉಂಟುಮಾಡುತ್ತದೆ. ಸಮಸ್ಯೆಯನ್ನು ಪ್ರಾರಂಭದಲ್ಲಿಯೇ ಗುರುತಿಸಿ ಚಿಕಿತ್ಸೆಗೆ ಮುಂದಾಗುವುದು ಹೆಚ್ಚು ಪರಿಣಾಮಕಾರಿ. ಹಾಗಾಗಿ ಎಲ್ಲರಲ್ಲೂ ಜಾಗೃತಿ ಮೂಡಬೇಕು’ ಎಂದರು.</p>.<p>‘ಆರೈಕೆದಾರರು ಮತ್ತು ಆರೋಗ್ಯ ಕ್ಷೇತ್ರದ ಸಿಬ್ಬಂದಿಯು ರೋಗಿಗಳಿಗಿರುವ ಸಮಗ್ರ ಆರೈಕೆ ವ್ಯವಸ್ಥೆಗಳ ಬಗ್ಗೆ ಮಾಹಿತಿ ಹಾಗೂ ಸುಧಾರಿತ ತರಬೇತಿ ಹೊಂದಬೇಕು’ ಎಂದು ಸಲಹೆ ನೀಡಿದರು.</p>.<p>ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನ(ನಿಯಾಸ್) ಟಿ.ವಿ.ರಾಮನ್ ಪೈ ವಿಭಾಗದ ಚೇರ್ಮನ್ ಡಾ.ದೀಪ್ತಿ ನವರತ್ನ ಮಾತನಾಡಿ, ಭಾರತೀಯ ಶಾಸ್ತ್ರೀಯ ಸಂಗೀತದ ಮೂಲಕ ‘ನ್ಯೂರೊ ಸಂಗೀತಶಾಸ್ತ್ರ’ ವಿಧಾನದಲ್ಲಿ ಅರಿವಿನ ಆರೋಗ್ಯ ಸುಧಾರಣೆಗೆ ಇರುವ ಅವಕಾಶ ಕುರಿತು ವಿವರಿಸಿದರು.</p>.<p>ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಕುಲಪತಿ ಎಚ್.ಬಸವನಗೌಡಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ಪಿ.ರಜನಿ, ಪ್ರಾಂಶುಪಾಲ ಡಿ.ನಾರಾಯಣಪ್ಪ ಮಾತನಾಡಿದರು.</p>.<p>ಆಸ್ಪತ್ರೆ ನಿರ್ದೇಶಕ ಡಾ.ಸಿ.ಪಿ.ಮಧು, ಅಕಾಡೆಮಿ ಆಡಳಿತಾಧಿಕಾರಿ ಎಸ್.ಆರ್.ಸತೀಶ್ಚಂದ್ರ ಉಪಸ್ಥಿತರಿದ್ದರು.</p>.<p>ಸಮ್ಮೇಳನದಲ್ಲಿ 200ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. 20ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ, 60ಕ್ಕೂ ಹೆಚ್ಚು ವೈಜ್ಞಾನಿಕ ಸಂಶೋಧನೆ ಪ್ರಸ್ತುತಪಡಿಸಲಾಗುತ್ತದೆ.</p>.<p>ಬುದ್ಧಿಮಾಂದ್ಯತೆಯುಳ್ಳ ರೋಗಿಗಳ ಆರೈಕೆಯಲ್ಲಿ ಜಾಗತಿಕ ಪಾಲುದಾರಿಕೆ ಮತ್ತು ಸಂಶೋಧನೆಗಳು ಅಗತ್ಯ ಡಾ.ಎಚ್.ಬಸವನಗೌಡಪ್ಪ<span class="Designate"> ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಕುಲಪತಿ</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>