ಮೈಸೂರು: ‘ಮತದಾನವು ಪ್ರತಿ ಪ್ರಜೆಯ ಅತಿ ಮುಖ್ಯವಾದ ಜವಾಬ್ದಾರಿಯಾಗಿದ್ದು, ಅದನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು’ ಎಂದು ಜೆಎಸ್ಎಸ್ ಕಾಲೇಜಿನ ಪ್ರಾಂಶುಪಾಲ ಎಸ್.ನಟರಾಜು ತಿಳಿಸಿದರು.
ಇಲ್ಲಿನ ಜೆಎಸ್ಎಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ಸಂವಿಧಾನ ವಿಭಾಗದಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಜೆಗಳು ಮತ್ತು ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ’ ಎಂದರು.
ವಿದ್ಯಾರ್ಥಿಗಳು ಸಿದ್ಧಗಂಗಾ ವೃತ್ತದವರೆಗೆ ಘೋಷಣೆ ಕೂಗುತ್ತಾ ಬಂದು ಮತದಾನ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ವಿಭಾಗದ ಮುಖ್ಯಸ್ಥ ಎಸ್. ನಾಗೇಂದ್ರ, ಎನ್ಎಸ್ಎಸ್ ಘಟಕದ ಎಸ್. ಸುರೇಶ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.