<p><strong>ಮೈಸೂರು:</strong> ಇಲ್ಲಿನ ರಂಗಾಯಣವು ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಜ.11ರಿಂದ 18ರ ವರೆಗೆ ಆಯೋಜಿಸಿದ್ದು, ಉತ್ಸವದ ಬೆಳ್ಳಿಹಬ್ಬದ ಪ್ರಯುಕ್ತ ‘ಬಹುರೂಪಿ ಬಾಬಾ ಸಾಹೇಬ್- ಸಮತೆಯೆಡೆಗೆ ನಡಿಗೆ’ ಆಶಯದಲ್ಲಿ ರೂಪಿಸಿದೆ. </p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಣಿಪುರದ ರಂಗಕರ್ಮಿ ಹೈಸ್ನಾಂ ಸಾವಿತ್ರಿ ದೇವಿ ಜ.12ರಂದು ಸಂಜೆ 5.30ಕ್ಕೆ ವನರಂಗದಲ್ಲಿ ಉತ್ಸವ ಉದ್ಘಾಟಿಸುವರು. ಇದೇ ವೇಳೆ ಸಾವಿತ್ರಿ ಅವರಿಗೆ ರಂಗಗೌರವ ನೀಡಲಾಗುವುದು’ ಎಂದು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p><p>‘6 ರಾಜ್ಯಗಳ 12 ಬಹುಭಾಷಾ ನಾಟಕಗಳು ಸೇರಿದಂತೆ 24 ನಾಟಕಗಳು ಭೂಮಿಗೀತ, ವನರಂಗ, ಕಿರುರಂಗಮಂದಿರ ಹಾಗೂ ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳಲಿವೆ. ‘ಮಕ್ಕಳ ಬಹುರೂಪಿ’ಯನ್ನು ಕಲಾಮಂದಿರದಲ್ಲಿ ಜ.12ರಂದು ಬೆಳಿಗ್ಗೆ 10.30ಕ್ಕೆ ರಂಗಕರ್ಮಿ ರಾಮೇಶ್ವರಿ ವರ್ಮ ಉದ್ಘಾಟಿಸುವರು’ ಎಂದರು. </p><p>‘ಬಣ್ಣಗಳಲ್ಲಿ ಭೀಮಯಾನವನ್ನು ಕಲಾವಿದರು ಅನಾವರಣಗೊಳಿಸಲಿದ್ದು, ‘ಬಾಬಾಸಾಹೇಬ್ ಸಂಗೀತ ಸ್ಮೃತಿ’ಯನ್ನು ಆಯೋಜಿಸಲಾಗಿದೆ. ರಂಗಕರ್ಮಿ ಎಚ್.ಜನಾರ್ಧನ್, ಮಹಾರಾಷ್ಟ್ರದ ಅನಿರುದ್ಧ ವಂಕರ್, ಪಿಚ್ಚಳ್ಳಿ ಶ್ರೀನಿವಾಸ್, ಪಂಜಾಬ್ನ ಗಾಯಕಿ ಗಿನ್ನಿಮಾಹಿ ಕಾರ್ಯಕ್ರಮ ನೀಡಲಿದ್ದಾರೆ’ ಎಂದರು. </p><p>‘ಶ್ರೀರಂಗದಲ್ಲಿ ಚಲನಚಿತ್ರೋತ್ಸವವನ್ನು ಲೇಖಕ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದು, ಅದು 11ರಿಂದ ಆರಂಭವಾಗಲಿದೆ. 17, 18ರಂದು ನಡೆಯುವ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಪತ್ರಕರ್ತ ಸಿದ್ಧಾರ್ಥ ವರದರಾಜನ್ ಚಾಲನೆ ನೀಡಲಿದ್ದಾರೆ. ನಾಟಕದ ಟಿಕೆಟ್ ಬೆಲೆ ₹100 ಆಗಿದ್ದು, ‘ಮಕ್ಕಳ ಬಹುರೂಪಿ’ಯಲ್ಲಿ ಮಕ್ಕಳಿಗೆ ಟಿಕೆಟ್ ₹50 ಇರಲಿದೆ. ಬೆಳ್ಳಿ ಹಬ್ಬದ ಸಂಭ್ರಮವಾದ್ದರಿಂದ ಸರ್ಕಾರವು ₹ 1 ಕೋಟಿ ಅನುದಾನ ನೀಡಿದೆ’ ಎಂದು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ರಂಗಾಯಣವು ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ಜ.11ರಿಂದ 18ರ ವರೆಗೆ ಆಯೋಜಿಸಿದ್ದು, ಉತ್ಸವದ ಬೆಳ್ಳಿಹಬ್ಬದ ಪ್ರಯುಕ್ತ ‘ಬಹುರೂಪಿ ಬಾಬಾ ಸಾಹೇಬ್- ಸಮತೆಯೆಡೆಗೆ ನಡಿಗೆ’ ಆಶಯದಲ್ಲಿ ರೂಪಿಸಿದೆ. </p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಣಿಪುರದ ರಂಗಕರ್ಮಿ ಹೈಸ್ನಾಂ ಸಾವಿತ್ರಿ ದೇವಿ ಜ.12ರಂದು ಸಂಜೆ 5.30ಕ್ಕೆ ವನರಂಗದಲ್ಲಿ ಉತ್ಸವ ಉದ್ಘಾಟಿಸುವರು. ಇದೇ ವೇಳೆ ಸಾವಿತ್ರಿ ಅವರಿಗೆ ರಂಗಗೌರವ ನೀಡಲಾಗುವುದು’ ಎಂದು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p><p>‘6 ರಾಜ್ಯಗಳ 12 ಬಹುಭಾಷಾ ನಾಟಕಗಳು ಸೇರಿದಂತೆ 24 ನಾಟಕಗಳು ಭೂಮಿಗೀತ, ವನರಂಗ, ಕಿರುರಂಗಮಂದಿರ ಹಾಗೂ ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳಲಿವೆ. ‘ಮಕ್ಕಳ ಬಹುರೂಪಿ’ಯನ್ನು ಕಲಾಮಂದಿರದಲ್ಲಿ ಜ.12ರಂದು ಬೆಳಿಗ್ಗೆ 10.30ಕ್ಕೆ ರಂಗಕರ್ಮಿ ರಾಮೇಶ್ವರಿ ವರ್ಮ ಉದ್ಘಾಟಿಸುವರು’ ಎಂದರು. </p><p>‘ಬಣ್ಣಗಳಲ್ಲಿ ಭೀಮಯಾನವನ್ನು ಕಲಾವಿದರು ಅನಾವರಣಗೊಳಿಸಲಿದ್ದು, ‘ಬಾಬಾಸಾಹೇಬ್ ಸಂಗೀತ ಸ್ಮೃತಿ’ಯನ್ನು ಆಯೋಜಿಸಲಾಗಿದೆ. ರಂಗಕರ್ಮಿ ಎಚ್.ಜನಾರ್ಧನ್, ಮಹಾರಾಷ್ಟ್ರದ ಅನಿರುದ್ಧ ವಂಕರ್, ಪಿಚ್ಚಳ್ಳಿ ಶ್ರೀನಿವಾಸ್, ಪಂಜಾಬ್ನ ಗಾಯಕಿ ಗಿನ್ನಿಮಾಹಿ ಕಾರ್ಯಕ್ರಮ ನೀಡಲಿದ್ದಾರೆ’ ಎಂದರು. </p><p>‘ಶ್ರೀರಂಗದಲ್ಲಿ ಚಲನಚಿತ್ರೋತ್ಸವವನ್ನು ಲೇಖಕ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದು, ಅದು 11ರಿಂದ ಆರಂಭವಾಗಲಿದೆ. 17, 18ರಂದು ನಡೆಯುವ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಪತ್ರಕರ್ತ ಸಿದ್ಧಾರ್ಥ ವರದರಾಜನ್ ಚಾಲನೆ ನೀಡಲಿದ್ದಾರೆ. ನಾಟಕದ ಟಿಕೆಟ್ ಬೆಲೆ ₹100 ಆಗಿದ್ದು, ‘ಮಕ್ಕಳ ಬಹುರೂಪಿ’ಯಲ್ಲಿ ಮಕ್ಕಳಿಗೆ ಟಿಕೆಟ್ ₹50 ಇರಲಿದೆ. ಬೆಳ್ಳಿ ಹಬ್ಬದ ಸಂಭ್ರಮವಾದ್ದರಿಂದ ಸರ್ಕಾರವು ₹ 1 ಕೋಟಿ ಅನುದಾನ ನೀಡಿದೆ’ ಎಂದು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>