<p><strong>ಮೈಸೂರು:</strong> ಸಾಹಿತಿ ಎಸ್.ಎಲ್.ಭೈರಪ್ಪ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬುಧವಾರ ಇಲ್ಲಿನ ಪುರಭವನದ ಆವರಣದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಭೈರಪ್ಪ ಅವರು ಸಂವಿಧಾನದ ಮತ್ತು ಮಹಿಳೆಯರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಅವರು ಆರೋಪಿಸಿದರು.</p>.<p>ರಂಗಕರ್ಮಿ ಜನಾರ್ದನ್ ಮಾತನಾಡಿ, ‘ಭಾರತ ದೇಶ ಕಟ್ಟಲು ಅಡಿಪಾಯವಾಗಿರುವ ಸಂವಿಧಾನವನ್ನು ಬದಲಾವಣೆ ಮಾಡುವುದು ಮತ್ತು ವಿಮರ್ಶೆ ಮಾಡುವುದು ಸರಿಯಲ್ಲ. ಸಂವಿಧಾನದ ಅನ್ನ ತಿಂದು ಅದರ ವಿರುದ್ಧವೇ ಮಾತನಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.</p>.<p>ಭೈರಪ್ಪ ಅವರು ಸಂವಿಧಾನದ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಮುಂದುವರಿಸಿದರೆ ಹಳ್ಳಿಹಳ್ಳಿಗಳಿಗೆ ಹೋಗಿ ಅವರ ವಿರುದ್ಧ ಪ್ರಚಾರ ಮಾಡುತ್ತೇವೆ. ಸದ್ಯ, ಹಿರಿಯರು ಎಂಬ ಕಾರಣಕ್ಕೆ ಕೆಲವರು ಅವರಿಗೆ ಗೌರವ ಕೊಡುತ್ತಾರೆ. ಇನ್ನು ಮುಂದೆ ಆ ಗೌರವವೂ ಇಲ್ಲವಾಗುತ್ತದೆ ಎಂದು ಅವರು ಎಚ್ಚರಿಸಿದರು.</p>.<p>ಚಿಂತಕ ಭಗವಾನ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಲಕ್ಷ್ಮೀ ನಾರಾಯಣ, ಪ್ರಸನ್ನ ಕುಮಾರ್, ಕೆ.ಆರ್.ಗೋಪಾಲಕೃಷ್ಣ, ಮುದ್ದುಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸಾಹಿತಿ ಎಸ್.ಎಲ್.ಭೈರಪ್ಪ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬುಧವಾರ ಇಲ್ಲಿನ ಪುರಭವನದ ಆವರಣದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಭೈರಪ್ಪ ಅವರು ಸಂವಿಧಾನದ ಮತ್ತು ಮಹಿಳೆಯರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಅವರು ಆರೋಪಿಸಿದರು.</p>.<p>ರಂಗಕರ್ಮಿ ಜನಾರ್ದನ್ ಮಾತನಾಡಿ, ‘ಭಾರತ ದೇಶ ಕಟ್ಟಲು ಅಡಿಪಾಯವಾಗಿರುವ ಸಂವಿಧಾನವನ್ನು ಬದಲಾವಣೆ ಮಾಡುವುದು ಮತ್ತು ವಿಮರ್ಶೆ ಮಾಡುವುದು ಸರಿಯಲ್ಲ. ಸಂವಿಧಾನದ ಅನ್ನ ತಿಂದು ಅದರ ವಿರುದ್ಧವೇ ಮಾತನಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.</p>.<p>ಭೈರಪ್ಪ ಅವರು ಸಂವಿಧಾನದ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಮುಂದುವರಿಸಿದರೆ ಹಳ್ಳಿಹಳ್ಳಿಗಳಿಗೆ ಹೋಗಿ ಅವರ ವಿರುದ್ಧ ಪ್ರಚಾರ ಮಾಡುತ್ತೇವೆ. ಸದ್ಯ, ಹಿರಿಯರು ಎಂಬ ಕಾರಣಕ್ಕೆ ಕೆಲವರು ಅವರಿಗೆ ಗೌರವ ಕೊಡುತ್ತಾರೆ. ಇನ್ನು ಮುಂದೆ ಆ ಗೌರವವೂ ಇಲ್ಲವಾಗುತ್ತದೆ ಎಂದು ಅವರು ಎಚ್ಚರಿಸಿದರು.</p>.<p>ಚಿಂತಕ ಭಗವಾನ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಲಕ್ಷ್ಮೀ ನಾರಾಯಣ, ಪ್ರಸನ್ನ ಕುಮಾರ್, ಕೆ.ಆರ್.ಗೋಪಾಲಕೃಷ್ಣ, ಮುದ್ದುಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>