<p><strong>ಮೈಸೂರು</strong>: ತ್ಯಾಗ, ಬಲಿದಾನದ ಪ್ರತೀಕವಾಗಿರುವ ಈದ್-ಉಲ್-ಅಝಾ (ಬಕ್ರೀದ್) ಅನ್ನು ನಗರದ ನಗರದ ವಿವಿಧೆಡೆ ಶನಿವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಈದ್ಗಾ ಮೈದಾನಗಳಿಗೆ ತೆರಳಿದ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಇಲ್ಲಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆಯಿಂದಲೇ ಜನರು ಸಾಮೂಹಿಕ ಪ್ರಾರ್ಥನೆಗಾಗಿ ಹೆಜ್ಜೆ ಹಾಕಿದರು. ಸಾವಿರಾರು ಜನರು ಪ್ರಾರ್ಥನೆ ಸಲ್ಲಿಸಿದರು. ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಮೃತಪಟ್ಟವರಿಗಾಗಿ ಪ್ರಾರ್ಥಿಸಿ, ಸಂತಾಪ ಸೂಚಿಸಿದರು.</p>.<p>ರಾಜೀವ್ನಗರ, ಗೌಸಿಯಾ ನಗರ, ಉದಯಗಿರಿ, ಅಶೋಕ ರಸ್ತೆ ಸೇರಿದಂತೆ ನಗರದಾದ್ಯಂತ ಇರುವ 30ಕ್ಕೂ ಹೆಚ್ಚು ಸ್ಥಳಗಳಲ್ಲಿನ ಈದ್ಗಾ ಮೈದಾನ ಮತ್ತು ಮಸೀದಿಗಳಲ್ಲಿ ಪ್ರಾರ್ಥನೆ ನಡೆಯಿತು.</p>.<p>ತಿಲಕ್ ನಗರದ ಈದ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ, ಧರ್ಮಗುರು ಹಜರತ್ ಮೌಲಾನಾ ಮೊಹಮ್ಮದ್ ಉಸ್ಮಾನ್ ಷರೀಫ್ ಧರ್ಮ ಸಂದೇಶ ನೀಡಿದರು.</p>.<p>‘ಬಕ್ರೀದ್ ತ್ಯಾಗ-ಬಲಿದಾನದ ಪ್ರತೀಕ. ಪ್ರವಾದಿ ಹಜರತ್ ಇಬ್ರಾಹಿಂ ಅವರ ತ್ಯಾಗ, ಅಲ್ಲಾಹುನ ಮೇಲೆ ಅವರು ಇರಿಸಿದ ಅಚಲ ಭಕ್ತಿ, ನಂಬಿಕೆಯ ಪ್ರತೀಕವಾಗಿ ಆಚರಿಸಲಾಗುತ್ತದೆ. ಬದುಕಿನ ದಾರಿ ತೋರಿದ ಪ್ರವಾದಿಗಳ ಜೀವನಾದರ್ಶಗಳು ನಮಗೆ ಇಂದಿಗೂ ಮಾರ್ಗದರ್ಶಿಯಾಗಿವೆ’ ಎಂದು ಸ್ಮರಿಸಿದರು.</p>.<p>ಸಾಮೂಹಿಕ ಪ್ರಾರ್ಥನೆ ನಂತರ ಹಿರಿಯರ ಸಮಾಧಿಯ ಬಳಿ ತೆರಳಿದ ಸಮುದಾಯದವರು ಆಶೀರ್ವಾದ ಪಡೆದರು. ನಿರ್ಗತಿಕರು, ಬಡವರು ಹಬ್ಬ ಆಚರಿಸಲಿ ಎನ್ನುವ ಉದ್ದೇಶದಿಂದ ಮಾಂಸ ಮತ್ತು ಇತರ ಆಹಾರ ಪದಾರ್ಥವನ್ನು ಉಳ್ಳವರು ದಾನ ಮಾಡಿದರು.</p>.<h2>ವಿವಿಧೆಡೆ ಸಂಭ್ರಮ:</h2>.<p>ಬಕ್ರೀದ್ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಸಂಭ್ರಮ ಮನೆ ಮಾಡಿತ್ತು. ಹೊಸ ಧಿರಿಸು, ವಿಶೇಷ ಟೋಪಿ, ಕಣ್ಣಿಗೆ ಕಾಡಿಗೆ ಇಟ್ಟ ಚಿಣ್ಣರು ಎಲ್ಲರ ಗಮನ ಸೆಳೆದರು. ನಮಾಜ್ ಬಳಿಕ ಪರಸ್ಪರ ‘ಈದ್ ಮುಬಾರಕ್’ ಎಂದು ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ನಂತರ ಬಂಧು–ಬಾಂಧವರ ಮನೆಗಳಿಗೆ ತೆರಳಿ ಆತಿಥ್ಯ ನೀಡಿದರು. ಮನೆಗಳಲ್ಲಿ ಹಬ್ಬದ ಅಡುಗೆಯ ವಾಸನೆ ಘಮ್ಮೆಂದಿತ್ತು. ಹಬ್ಬಕ್ಕೆಂದೇ ಮಾಡಿದ ವಿಶೇಷ ಬಗೆಯ ಸಿಹಿ ತಿನಿಸು, ಮಾಂಸಾಹಾರದ ಖಾದ್ಯಗಳನ್ನು ಸವಿದರು.</p>.<p>ಪ್ರಾರ್ಥನಾ ಸ್ಥಳಗಳಲ್ಲಿ ಪೊಲೀಸರು ಭದ್ರತೆ ಕಲ್ಪಿಸಿದ್ದರು. ಬೆಳಿಗ್ಗೆ ಕೆಲವೆಡೆ ವಾಹನ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ತ್ಯಾಗ, ಬಲಿದಾನದ ಪ್ರತೀಕವಾಗಿರುವ ಈದ್-ಉಲ್-ಅಝಾ (ಬಕ್ರೀದ್) ಅನ್ನು ನಗರದ ನಗರದ ವಿವಿಧೆಡೆ ಶನಿವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಈದ್ಗಾ ಮೈದಾನಗಳಿಗೆ ತೆರಳಿದ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಇಲ್ಲಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆಯಿಂದಲೇ ಜನರು ಸಾಮೂಹಿಕ ಪ್ರಾರ್ಥನೆಗಾಗಿ ಹೆಜ್ಜೆ ಹಾಕಿದರು. ಸಾವಿರಾರು ಜನರು ಪ್ರಾರ್ಥನೆ ಸಲ್ಲಿಸಿದರು. ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಮೃತಪಟ್ಟವರಿಗಾಗಿ ಪ್ರಾರ್ಥಿಸಿ, ಸಂತಾಪ ಸೂಚಿಸಿದರು.</p>.<p>ರಾಜೀವ್ನಗರ, ಗೌಸಿಯಾ ನಗರ, ಉದಯಗಿರಿ, ಅಶೋಕ ರಸ್ತೆ ಸೇರಿದಂತೆ ನಗರದಾದ್ಯಂತ ಇರುವ 30ಕ್ಕೂ ಹೆಚ್ಚು ಸ್ಥಳಗಳಲ್ಲಿನ ಈದ್ಗಾ ಮೈದಾನ ಮತ್ತು ಮಸೀದಿಗಳಲ್ಲಿ ಪ್ರಾರ್ಥನೆ ನಡೆಯಿತು.</p>.<p>ತಿಲಕ್ ನಗರದ ಈದ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ, ಧರ್ಮಗುರು ಹಜರತ್ ಮೌಲಾನಾ ಮೊಹಮ್ಮದ್ ಉಸ್ಮಾನ್ ಷರೀಫ್ ಧರ್ಮ ಸಂದೇಶ ನೀಡಿದರು.</p>.<p>‘ಬಕ್ರೀದ್ ತ್ಯಾಗ-ಬಲಿದಾನದ ಪ್ರತೀಕ. ಪ್ರವಾದಿ ಹಜರತ್ ಇಬ್ರಾಹಿಂ ಅವರ ತ್ಯಾಗ, ಅಲ್ಲಾಹುನ ಮೇಲೆ ಅವರು ಇರಿಸಿದ ಅಚಲ ಭಕ್ತಿ, ನಂಬಿಕೆಯ ಪ್ರತೀಕವಾಗಿ ಆಚರಿಸಲಾಗುತ್ತದೆ. ಬದುಕಿನ ದಾರಿ ತೋರಿದ ಪ್ರವಾದಿಗಳ ಜೀವನಾದರ್ಶಗಳು ನಮಗೆ ಇಂದಿಗೂ ಮಾರ್ಗದರ್ಶಿಯಾಗಿವೆ’ ಎಂದು ಸ್ಮರಿಸಿದರು.</p>.<p>ಸಾಮೂಹಿಕ ಪ್ರಾರ್ಥನೆ ನಂತರ ಹಿರಿಯರ ಸಮಾಧಿಯ ಬಳಿ ತೆರಳಿದ ಸಮುದಾಯದವರು ಆಶೀರ್ವಾದ ಪಡೆದರು. ನಿರ್ಗತಿಕರು, ಬಡವರು ಹಬ್ಬ ಆಚರಿಸಲಿ ಎನ್ನುವ ಉದ್ದೇಶದಿಂದ ಮಾಂಸ ಮತ್ತು ಇತರ ಆಹಾರ ಪದಾರ್ಥವನ್ನು ಉಳ್ಳವರು ದಾನ ಮಾಡಿದರು.</p>.<h2>ವಿವಿಧೆಡೆ ಸಂಭ್ರಮ:</h2>.<p>ಬಕ್ರೀದ್ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಸಂಭ್ರಮ ಮನೆ ಮಾಡಿತ್ತು. ಹೊಸ ಧಿರಿಸು, ವಿಶೇಷ ಟೋಪಿ, ಕಣ್ಣಿಗೆ ಕಾಡಿಗೆ ಇಟ್ಟ ಚಿಣ್ಣರು ಎಲ್ಲರ ಗಮನ ಸೆಳೆದರು. ನಮಾಜ್ ಬಳಿಕ ಪರಸ್ಪರ ‘ಈದ್ ಮುಬಾರಕ್’ ಎಂದು ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ನಂತರ ಬಂಧು–ಬಾಂಧವರ ಮನೆಗಳಿಗೆ ತೆರಳಿ ಆತಿಥ್ಯ ನೀಡಿದರು. ಮನೆಗಳಲ್ಲಿ ಹಬ್ಬದ ಅಡುಗೆಯ ವಾಸನೆ ಘಮ್ಮೆಂದಿತ್ತು. ಹಬ್ಬಕ್ಕೆಂದೇ ಮಾಡಿದ ವಿಶೇಷ ಬಗೆಯ ಸಿಹಿ ತಿನಿಸು, ಮಾಂಸಾಹಾರದ ಖಾದ್ಯಗಳನ್ನು ಸವಿದರು.</p>.<p>ಪ್ರಾರ್ಥನಾ ಸ್ಥಳಗಳಲ್ಲಿ ಪೊಲೀಸರು ಭದ್ರತೆ ಕಲ್ಪಿಸಿದ್ದರು. ಬೆಳಿಗ್ಗೆ ಕೆಲವೆಡೆ ವಾಹನ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>