<p><strong>ಪಿರಿಯಾಪಟ್ಟಣ:</strong> ‘ಬಾಲಗಂಗಾಧರನಾಥ ಸ್ವಾಮೀಜಿಯು ದೇಶದ ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ’ ಎಂದು ಇಲ್ಲಿನ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಕೆ.ಆರ್.ಪ್ರವೀಣ್ ತಿಳಿಸಿದರು.</p>.<p>ಸಂಸ್ಥೆಯಿಂದ ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿಯ 13ನೇ ವರ್ಷದ ಪುಣ್ಯ ಸಂಸ್ಮರಣೆ ಅಂಗವಾಗಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಸ್ವಾಮೀಜಿಗಳು ಮೂರೂವರೆ ದಶಕಗಳ ಕಾಲ ಮಠವನ್ನು ಮುನ್ನಡೆಸಿ ತ್ರಿವಿಧ ದಾಸೋಹದಲ್ಲಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಇಂದಿಗೂ ಅನೇಕ ಕುಟುಂಬಗಳಿಗೆ ಜೀವನ ಆಧಾರವಾಗಿ ನಿಂತಿದ್ದಾರೆ. ಇಂಥ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಸೌಭಾಗ್ಯ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ‘ಮಠವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು ತ್ರಿವಿಧ ದಾಸೋಹವನ್ನು ನಾಡಿನಾದ್ಯಂತ ಮಾಡುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿ ಹೋಗಿದ್ದಾರೆ’ ಎಂದು ಸ್ಮರಿಸಿದರು.</p>.<p>ಶಿಬಿರದಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಕ್ತದಾನ ಮಾಡಿದರು.</p>.<p>ತಾಲ್ಲೂಕು ಒಕ್ಕಲಿಗರ ಹಿತರಕ್ಷಣಾಸಮಿತಿ ಅಧ್ಯಕ್ಷ ಕೃಷ್ಣೇಗೌಡ, ಮಾಜಿ ಅಧ್ಯಕ್ಷ ಉದಯ್, ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ರಾಜೇಗೌಡ, ಉಪಾಧ್ಯಕ್ಷ ಮೋಹನ್ , ಮುಖಂಡರಾದ ಶ್ರೀನಿವಾಸ್, ಸುಬ್ರಹ್ಮಣ್ಯ, ಶರತ್, ಕಾಲೇಜು ಆಡಳಿತಾಧಿಕಾರಿ ಸುಧಾಕರ್ ಹಾಗೂ ಪ್ರಾಂಶುಪಾಲರಾದ ಪ್ರವೀಣ್ ಕೆಆರ್,ಕಿರಣ್ ಬಿ ವೈ ಮುಖ್ಯ ಶಿಕ್ಷಕಿ ದಿವ್ಯ ಉಪನ್ಯಾಸಕರಾದ ಸ್ವಾಮಿಗೌಡ ಮಹಾದೇವ್, ಸ್ವಾಮಿ, ಚನ್ನಕೇಶವ ವಿಜಯ್, ನಾಗನಂದ್, ಮೋಹನ್, ಪಲ್ಲವಿ, ಪ್ರೀತು, ಶ್ರುತಿ, ಸುಮಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ:</strong> ‘ಬಾಲಗಂಗಾಧರನಾಥ ಸ್ವಾಮೀಜಿಯು ದೇಶದ ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ’ ಎಂದು ಇಲ್ಲಿನ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಕೆ.ಆರ್.ಪ್ರವೀಣ್ ತಿಳಿಸಿದರು.</p>.<p>ಸಂಸ್ಥೆಯಿಂದ ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿಯ 13ನೇ ವರ್ಷದ ಪುಣ್ಯ ಸಂಸ್ಮರಣೆ ಅಂಗವಾಗಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಸ್ವಾಮೀಜಿಗಳು ಮೂರೂವರೆ ದಶಕಗಳ ಕಾಲ ಮಠವನ್ನು ಮುನ್ನಡೆಸಿ ತ್ರಿವಿಧ ದಾಸೋಹದಲ್ಲಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಇಂದಿಗೂ ಅನೇಕ ಕುಟುಂಬಗಳಿಗೆ ಜೀವನ ಆಧಾರವಾಗಿ ನಿಂತಿದ್ದಾರೆ. ಇಂಥ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಸೌಭಾಗ್ಯ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ‘ಮಠವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು ತ್ರಿವಿಧ ದಾಸೋಹವನ್ನು ನಾಡಿನಾದ್ಯಂತ ಮಾಡುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿ ಹೋಗಿದ್ದಾರೆ’ ಎಂದು ಸ್ಮರಿಸಿದರು.</p>.<p>ಶಿಬಿರದಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಕ್ತದಾನ ಮಾಡಿದರು.</p>.<p>ತಾಲ್ಲೂಕು ಒಕ್ಕಲಿಗರ ಹಿತರಕ್ಷಣಾಸಮಿತಿ ಅಧ್ಯಕ್ಷ ಕೃಷ್ಣೇಗೌಡ, ಮಾಜಿ ಅಧ್ಯಕ್ಷ ಉದಯ್, ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ರಾಜೇಗೌಡ, ಉಪಾಧ್ಯಕ್ಷ ಮೋಹನ್ , ಮುಖಂಡರಾದ ಶ್ರೀನಿವಾಸ್, ಸುಬ್ರಹ್ಮಣ್ಯ, ಶರತ್, ಕಾಲೇಜು ಆಡಳಿತಾಧಿಕಾರಿ ಸುಧಾಕರ್ ಹಾಗೂ ಪ್ರಾಂಶುಪಾಲರಾದ ಪ್ರವೀಣ್ ಕೆಆರ್,ಕಿರಣ್ ಬಿ ವೈ ಮುಖ್ಯ ಶಿಕ್ಷಕಿ ದಿವ್ಯ ಉಪನ್ಯಾಸಕರಾದ ಸ್ವಾಮಿಗೌಡ ಮಹಾದೇವ್, ಸ್ವಾಮಿ, ಚನ್ನಕೇಶವ ವಿಜಯ್, ನಾಗನಂದ್, ಮೋಹನ್, ಪಲ್ಲವಿ, ಪ್ರೀತು, ಶ್ರುತಿ, ಸುಮಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>