ಸಫಾರಿಯಲ್ಲಿಅಡ್ಡಾದಿಡ್ಡಿ ವಾಹನ ಚಲಾಯಿಸಬಾರದು, ಸಫಾರಿಗೆ ನಿಗದಿಪಡಿಸಿದ ಜಾಗಗಳಲ್ಲಿ ಮಾತ್ರ ಪ್ರವಾಸಿಗರನ್ನು ಕರೆದುಕೊಂಡು ಹೋಗಬೇಕು, ಪ್ರಾಣಿಗಳು ಕಂಡರೆ ನಿಶ್ಯಬ್ದವಾಗಿ ಅವುಗಳನ್ನು ವೀಕ್ಷಣೆ ಮಾಡಬೇಕು. ಎಲ್ಲ ವಾಹನಗಳೂ ಒಂದೇ ಕಡೆ ಹೋಗಬಾರದು ಎಂಬ ಸೂಚನೆಗಳಿದ್ದರೂ, ಚಾಲಕರು ಮತ್ತು ಪ್ರವಾಸಿಗರು ನಿಯಮಗಳನ್ನು ಉಲ್ಲಂಘಿಸುತ್ತಲೇ ಇದ್ದಾರೆ.ಇದನ್ನು ತಡೆಯುವುದಕ್ಕಾಗಿ ಮತ್ತು ವನ್ಯಪ್ರಾಣಿಗಳ ಸಹಜ ಜೀವನಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಅರಣ್ಯ ಇಲಾಖೆ ಜಿಪಿಎಸ್ ಅಳವಡಿಸುವ ನಿರ್ಧಾರ ಕೈಗೊಂಡಿದೆ.